ಶಿಡ್ಲಘಟ್ಟ ಮೇಲೂರಿನ ಕಾಮಧೇನು ಸ್ವೀಟ್ಸ್ ಚೌಚೌ ಅಮೆರಿಕದವರೆಗೆ ಫೇಮಸ್
ಅರವತ್ನಾಲ್ಕು ವಿದ್ಯೆಗಳಲ್ಲಿ ಅಡುಗೆಯೂ ಒಂದು. ನಾವು ಕೇಳಿದ ನಳಪಾಕ, ಭೀಮಪಾಕಗಳು ಭಾರತದಲ್ಲೇ ಬಹಳ ಪ್ರಚಲಿತದಲ್ಲಿರುವಂಥದ್ದು. ಊರಿನ ಹೆಸರೊಂದಿಗೆ ಅಲ್ಲಿನ ಹೆಸರುವಾಸಿಯಾದ ಹೋಟೆಲ್, ಮೆಸ್, ಸಿಹಿ- ಖಾರ ತಿನಿಸಿನ ಅಂಗಡಿಗಳೂ ಸೇರಿಕೊಂಡಿರುತ್ತವೆ. ಈ ದಿನ ಶಿಡ್ಲಘಟ್ಟದ ಮೇಲೂರಿನಲ್ಲಿರುವ ಕಾಮಧೇನು ಸ್ವೀಟ್ಸ್ ಬಗ್ಗೆ ತಿಳಿಸಬೇಕು ಅಂತಲೇ ಈ ಲೇಖನ.
ಕೆಲವರ ಕೈರುಚಿಯಂತೂ ದೇಶ, ಭಾಷೆಯ ಗಡಿ ಮೀರಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಸಣ್ಣ ಗ್ರಾಮದಲ್ಲಿದ್ದರೂ ಕಲಿತ ವಿದ್ಯೆಯಿಂದಲೇ ದೇಶದ ರಾಯಭಾರಿಗಳಾಗಿರುತ್ತಾರೆ. ಕಾಮಧೇನು ಸ್ವೀಟ್ಸ್ ನ ಮಾಲೀಕ ಶ್ರೀಧರ್ ಅಂಥಹವರಲ್ಲಿ ಒಬ್ಬರು.

ಮೇಲೂರಿನ ಮಿಕ್ಸ್ ಚರ್ ಎಂದೇ ಪ್ರಸಿದ್ಧವಾದದ್ದು ಇವರು ತಯಾರಿಸುವ ಚೌಚೌ. ಮೇಲೂರು ಗ್ರಾಮದ ಖಾರದ ತಿನಿಸು ತಾಲ್ಲೂಕು, ಜಿಲ್ಲೆಯನ್ನೂ ಮೀರಿ ಅಮೆರಿಕವನ್ನೂ ತಲುಪಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಇವರ ಗ್ರಾಹಕರು ಅಮೆರಿಕದಲ್ಲಿನ ತಮ್ಮ ಸಂಬಂಧಿಕರು ಬಂದು ವಾಪಸ್ ಹೋಗುವಾಗ ಮೇಲೂರಿನ ಮಿಕ್ಸ್ಚರ್ ಕೊಂಡು ಹೋಗುತ್ತಾರೆ.
18 ವರ್ಷಗಳಿಂದ ಖಾರ- ಸಿಹಿ ತಿಂಡಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಇವರು ಜಿಲೇಬಿ, ಜಹಾಂಗೀರ್, ಲಾಡು, ಸೋನ್ ಪಾಪಡಿ ಮುಂತಾದ ತಿಂಡಿಗಳನ್ನೂ ತಯಾರಿಸುತ್ತಾರೆ. ಮೇಲೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮುಂತಾದ ಯಾವುದೇ ಸಂಭ್ರಮಾಚರಣೆಗಳಿಗೆ ಇವರ ಸಿಹಿ ಇರಲೇಬೇಕು.

"ಈ ವಿದ್ಯೆಯನ್ನು ಬಂಗಾರಪೇಟೆಯಲ್ಲಿನ ನನ್ನ ಚಿಕ್ಕಪ್ಪನವರ ಬಳಿ ಕಲಿತೆ. ಗುಣಮಟ್ಟವನ್ನು ಕಮ್ಮಿಯಾಗದಂತೆ ಸದಾ ನೋಡಿಕೊಳ್ಳುತ್ತೇನೆ. ಉತ್ತಮವಾದ ಎಣ್ಣೆ ಬಳಸುತ್ತೇನೆ. ಒಳ್ಳೆಯ ನಾಟಿ ಕಡಲೆ ಬೇಳೆಯನ್ನು ನೋಡಿ ಕೊಂಡು ತಂದು ಆರಿಸಿ, ಒಣಗಿಸಿ, ಪುಡಿ ಮಾಡಿಸಿ ಬಳಸುತ್ತೇನೆ. ಈ ಕೆಲಸಕ್ಕೆ ನಾನು ಕೆಲಸದವರನ್ನು ಇಟ್ಟುಕೊಂಡಿಲ್ಲ. ತಿಂಡಿ ತಯಾರಿಕೆ ಹಾಗೂ ಮಾರಾಟಕ್ಕೆ ನನ್ನ ಪತ್ನಿ ಹಾಗೂ ತಮ್ಮ ಸಹಕರಿಸುತ್ತಾರೆ. ಕೆಲಸದವರನ್ನು ನೇಮಿಸಿಕೊಂಡರೆ ಗುಣಮಟ್ಟ ಕೆಡಬಹುದೆಂಬ ಭಯವಿದೆ" ಎನ್ನುತ್ತಾರೆ ಶ್ರೀಧರ್.
"ಕೆಲ ಗ್ರಾಹಕರು ಅಮೆರಿಕಕ್ಕೆ ನಮ್ಮ ಮಿಕ್ಸ್ಚರ್ ತೆಗೆದುಕೊಂಡು ಹೋಗುತ್ತಾರೆ. ಅವರಿಗೆ ಬೇಕಾದ ರೀತಿಯಲ್ಲಿ ಖಾರ ಮಾಡಿಕೊಡುತ್ತೇನೆ. ವಿಮಾನದಲ್ಲಿ ಹೆಚ್ಚು ತೆಗೆದುಕೊಂಡು ಹೋಗಲಾಗದೆಂದು ಒಮ್ಮೆಗೆ ನಾಲ್ಕರಿಂದ ಐದು ಕೆ.ಜಿ ತೆಗೆದುಕೊಂಡು ಹೋಗುತ್ತಾರೆ. ತಾಲೂಕಿನ ಹಲವಾರು ಮಂದಿ ಗ್ರಾಹಕರು ತಮ್ಮ ಸಂಬಂಧಿಕರ ಮನೆಗಳಿಗೆ ಮತ್ತು ಸ್ನೇಹಿತರಿಗೆ ನೀಡಲು ನನ್ನ ಬಳಿ ಸಿಹಿ ಹಾಗೂ ಖಾರ ಖರೀದಿಸುತ್ತಾರೆ. ಜನರು ಮೆಚ್ಚುವುದು ಗುಣಮಟ್ಟವನ್ನು ಎಂಬ ಎಚ್ಚರಿಕೆ ಸದಾ ನನ್ನದು" ಎನ್ನುತ್ತಾರೆ ಕಾಮಧೇನು ಸ್ವೀಟ್ಸ್ ನ ಎನ್.ಶ್ರೀಧರ್.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications