12 ವರ್ಷ ಕಾಲ ವಾಹನ ಸಂಚಾರವನ್ನೇ ತ್ಯಜಿಸಿದ್ದ ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಪರಿಚಯ
ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾದರು.ಇತಿಹಾಸ ತಜ್ಞರು, ತತವ ಜ್ಞಾನಿಗಳು ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಪರಿಚಯ ಇಲ್ಲಿದೆ.
ಹಾಸನ, ಮಾರ್ಚ್ 23: ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾದರು. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಳ್ಳೂರು ಕ್ರಾಸ್ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.
ದುರಾದೃಷ್ಟವಶಾತ್ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೃದಯಾಘಾತದಿಂದ ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇತಿಹಾಸ ತಜ್ಞರು, ತತ್ವ ಜ್ಞಾನಿಗಳು ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಪರಿಚಯ ಇಲ್ಲಿದೆ.

ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು 1949 ಮೇ 3ರಂದು ಕಾರ್ಕಳದ ವರಂಗ ಗ್ರಾಮದಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ರತ್ನವರ್ಮ. ಮೈಸೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದಲ್ಲಿ ಎಂ.ಎ. ಮುಗಿಸಿದ್ದ ಅವರು, ಬೆಂಗಳೂರು ವಿಶ್ವವಿದ್ಯಾಲಯದ ಶಸ್ತ್ರ ಶಾಸ್ತ್ರ ಜೊತೆಗೆ ಕನ್ನಡ, ಸಂಸ್ಕೃತ ಮತ್ತು ಪ್ರಾಕೃತದಲ್ಲೂ ಸ್ನಾತಕೋತ್ತರ ಪದವಿ ಪಡೆದಿದ್ದರು. ಅವರ ಜ್ಞಾನ ಕೇವಲ ಜೈನ ಧರ್ಮಶಾಸ್ತ್ರಕ್ಕೆ ಸೀಮಿತವಾಗಿರದೇ, ಇತಿಹಾಸ ತಜ್ಞರು, ತತ್ವ ಜ್ಞಾನಿಗಳು, ಶ್ರೇಷ್ಠವಾಗಿಗಳು ಆಗಿದ್ದರು.
1970ರಲ್ಲಿ ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜೈನ ಮಠದ ಪೀಠವೇರಿದ್ದರು. ಪೀಠದಲ್ಲಿದ್ದುಕೊಂಡೇ ಮಠದ ಸಮಸ್ತ ಕಾರ್ಯನಿರ್ವಹಣೆಯೊಂದಿಗೆ ಸಂಶೋಧನೆ, ಗ್ರಂಥ ರಚನೆಯಲ್ಲಿ ಕ್ರಿಯಾಶೀಲರಾಗಿದ್ದ ಸ್ವಾಮೀಜಿಯವರ ಸರಳತೆ, ಸಜ್ಜನಿಕೆ, ಸಾಮಾಜಿಕ ಕಳಕಳಿ, ಲವಲವಿಕೆ, ಎಲ್ಲರಿಗೂ ಸ್ಪೂರ್ತಿಯಾಗಿತ್ತು. 1981ರಲ್ಲಿ ಗೋಮಟೇಶ್ವರ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನಡೆಸಿದ್ದನ್ನು ಮೆಚ್ಚಿ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಶ್ರೀಗಳಿಗೆ 'ಕರ್ಮಯೋಗಿ' ಬಿರುದು ನೀಡಿ ಗೌರವಿಸಿದ್ದರು.
ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ತಮ್ಮ ಜೀವಿತಾವಧಿಯಲ್ಲಿ ಏಳು ಮಹಾಮಸ್ತಕಾಭಿಷೇಕವನ್ನು ನೆರವೇರಿಸಿದ್ದಾರೆ.

ಸುಮಾರು 40ಕ್ಕೂ ಅಧಿಕ ಜಿನಾಲಯಗಳನ್ನು ಜೀರ್ಣೋದ್ಧಾರಗೊಳಿಸಿ, ಅಲ್ಲಿ ನಿತ್ಯ ಪೂಜೆ ನಡೆಯುವಂತೆ ಮಾಡಿದ್ದಾರೆ. ಸುತ್ತಮುತ್ತಲಿನ ಹತ್ತಕ್ಕೂ ಹೆಚ್ಚು ಗ್ರಾಮಗಳನ್ನು ದತ್ತು ಸ್ವೀಕರಿಸಿ, ಅಲ್ಲಿ ಪ್ರಾಥಮಿಕ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ.
ಸಹಸ್ರಮಾನದ ಮಹಾಮಸ್ತಕಾಭಿಷೇಕದಲ್ಲಿ ಸಾವಿರ ಮಂದಿಗೆ ಉಚಿತ ನೇತ್ರ ಚಿಕಿತ್ಸಾ ಶಿಬಿರ ನಡೆಸಿದ್ದರು. ಆರೋಗ್ಯ ಹಾಗೂ ಶಿಕ್ಷಣಕ್ಕೆ ಮಹತ್ವ ನೀಡುತ್ತಿದ್ದ ಸ್ವಾಮೀಜಿ ಶಾಲೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜು, ನರ್ಸಿಂಗ್ ಕಾಲೇಜು, ಗೋಮಟೇಶ ವಿದ್ಯಾಪೀಠ ಹಾಗೂ ಪ್ರಾಕೃತ ಭಾಷೆಯ ಅಭಿವೃದ್ಧಿಗಾಗಿ ಬೆಂಗಳೂರಲ್ಲಿ 'ಪ್ರಾಕೃತಜ್ಞಾನ ಭಾರತ ಟ್ರಸ್ಟ್' ನಿರ್ಮಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪ್ರಾಕೃತ ಅಧ್ಯಯನ-ಸಂಶೋಧನ ಸಂಸ್ಥೆಯಲ್ಲಿ ತಾಳೆಗರಿಗಳನ್ನು ಸಂರಕ್ಷಿಸುವ, ಪ್ರಾಕೃತ ಗ್ರಂಥಗಳ ಕನ್ನಡ ಅನುವಾದ ಯೋಜನೆ ಕಾರ್ಯ ನಡೆದಿದೆ. ಆಯುರ್ವೇದ ಆಸ್ಪತ್ರೆ, ಸಂಬೂರಿ ಆಸ್ಪತ್ರೆ, ಕ್ಲಿನಿಕಲ್ ಲ್ಯಾಬ್ಗಳನ್ನು ಸ್ಥಾಪಿಸಿರುವ ಸ್ವಾಮೀಜಿ ಮಸ್ತಕಾಭಿಷೇಕದಲ್ಲಿ ಉಳಿದ ಹಣದಿಂದ ಆಧುನಿಕ ಮಕ್ಕಳ ಆಸ್ಪತ್ರೆ ನಿರ್ಮಿಸಿದ್ದರು.

ಹಲವು ದೇಶಗಳಲ್ಲಿ ಜೈನ ಧರ್ಮ ಪ್ರಸಾರ ಮಾಡಿ ಅಹಿಂಸೆಯ ಸಂದೇಶ ಬಿತ್ತರಿಸಿರುವ ಸ್ವಾಮೀಜಿಗಳ ವಿಶೇಷತೆಯೆಂದರೆ, 2006ರಿಂದ ದೂರವಾಣಿಯಲ್ಲಿ ಅಥವಾ ಮೊಬೈಲ್ನಲ್ಲಿ ಮಾತನಾಡದಿರುವುದು. ಚಾತುರ್ಮಾಸಕ್ಕೆ ವಿಜಾಪುರಕ್ಕೆ ತೆರಳಿ ಮರಳಿದ ಬಳಿಕ, 2001ರಲ್ಲಿ ಧವಳ ಮತ್ತು ಜಯಧವಳ ಆಗಮ ಗ್ರಂಥಗಳ ಪ್ರಕಟಣೆ ವೇಳೆ ಅವರು 12 ವರ್ಷ ಕಾಲ ವಾಹನ ಸಂಚಾರವನ್ನೇ ತ್ಯಜಿಸಿದ್ದರು. ಅವರ ನೇತೃತ್ವದಲ್ಲಿ ಸುಮಾರು ಏಳು ಮಹಾಮಸ್ತಕಾಭಿಷೇಕಗಳು ಯಶಸ್ವಿಯಾಗಿ ನಡೆದಿದ್ದವು.
ಭಗವಾನ್ ಮಹಾವೀರರ 2,500ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ದಕ್ಷಿಣ ಭಾರತದಾದ್ಯಂತ 'ಧರ್ಮಚಕ್ರ' ಎಂಬ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸುವಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಪ್ರಮುಖ ಪಾತ್ರವಹಿಸಿದ್ದರು. 'ಸರಕಾರಗಳು ಮತ್ತು ಸಮಾಜ ಕೈಜೋಡಿಸಿದಾಗ ಮಾತ್ರ ಇಂಥ ಉತ್ಸವಗಳು ಯಶಸ್ವಿಯಾಗಲು ಸಾಧ್ಯ' ಎಂಬ ಸರಳ ಸೌಜನ್ಯದ ನುಡಿ ಶ್ರೀಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರದಾಗಿತ್ತು.
ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications