ಶಿವಗಂಗಾ ಲೋಕಸಭಾ ಕ್ಷೇತ್ರದ ಪರಿಚಯ
ಶಿವಗಂಗಾ ಅಥವ ಸಿವಗಂಗೆ ತಮಿಳುನಾಡಿನ ಒಂದು ಲೋಕಸಭಾ ಕ್ಷೇತ್ರ. ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ಹುಟ್ಟೂರು ಕಣಾದುಕಥನ್ ಗ್ರಾಮ ಇದೇ ಜಿಲ್ಲೆಯ ವ್ಯಾಪ್ತಿಯಲ್ಲಿದೆ. 6 ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಈ ಲೋಕಸಭಾ ಕ್ಷೇತ್ರವನ್ನು ರಚನೆ ಮಾಡಲಾಗಿದೆ.
ಶಿವಗಂಗಾ ಲೋಕಸಭಾ ಕ್ಷೇತ್ರದ ಜನಸಂಖ್ಯೆ 18,67,198 . ಇವರಲ್ಲಿ 75.23ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ, 24.77ರಷ್ಟು ಜನರು ನಗರ ಪ್ರದೇಶದಲ್ಲಿದ್ದಾರೆ. ಶೇ 16.38ರಷ್ಟು ಎಸ್ಸಿ, ಶೇ 0.05ರಷ್ಟು ಎಸ್ಟಿ ಸಮುದಾಯದವರಿದ್ದಾರೆ.

ರಸ್ತೆ ಮಾರ್ಗದ ಮೂಲಕ ಶಿವಗಂಗಾ ಕ್ಷೇತ್ರ ಸಾರಿಗೆ ಸಂಪರ್ಕವನ್ನು ಹೆಚ್ಚು ಹೊಂದಿದೆ. ರೈಲುಗಳ ಸಂಪರ್ಕವೂ ಕ್ಷೇತ್ರಕ್ಕೆ ಇದೆ. 189 ಕಿ.ಮೀ.ದೂರದಲ್ಲಿರುವ ತೂತುಕಡಿ ಬಂದರು ಕ್ಷೇತ್ರಕ್ಕೆ ಹತ್ತಿರದಲ್ಲಿರುವ ಬಂದರಾಗಿದೆ. ವಿಮಾನ ಸಂಪರ್ಕಕ್ಕಾಗಿ 53 ಕಿ.ಮೀ.ದೂರದ ಮಧುರೈ ವಿಮಾನ ನಿಲ್ದಾಣಕ್ಕೆ ಬರಬೇಕು.
ಕ್ಷೇತ್ರದ ಶೇ 72ರಷ್ಟು ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಭತ್ತ ಇಲ್ಲಿನ ಪ್ರಮುಖವಾದ ವಾಣಿಜ್ಯ ಬೆಳೆಯಾಗಿದೆ. ಕಬ್ಬು, ಕಡಲೆಗಳನ್ನು ಬೆಳೆಯಲಾಗುತ್ತದೆ. ಕ್ಷೇತ್ರ ಕೆಂಪುಮಣ್ಣಿನಿಂದ ಕೂಡಿದ್ದು, ತಮಿಳುನಾಡಿನ ಕೃಷಿ ವಿಶ್ವವಿದ್ಯಾಲಯ ಕ್ಷೇತ್ರದಲ್ಲಿ ರಾಜ್ಯದ ಪ್ರಥಮ ಕೆಂಪುಮಣ್ಣಿನ ಸಂಶೋಧನಾ ಘಟಕ ಸ್ಥಾಪನೆ ಮಾಡಲು ಮುಂದಾಗಿದೆ.

ಶಿವಗಂಗಾ ಜಿಲ್ಲೆಯ ಪ್ರಮುಖ ನಗರ ಶಿವಗಂಗಾ. ಇಲ್ಲಿ ಸಿಗುವ ಗ್ರಾಫೈಟ್ ಕಲ್ಲುಗಳು ಬಹಳ ಪ್ರಸಿದ್ಧಿ ಪಡೆದಿದೆ. ಪಡುಕೊಟ್ಟಿ, ರಾಮನಾಥಪುರಂ, ತಿರುಚಿರಾಪಳ್ಳಿ, ಮಧುರೈ ಜಿಲ್ಲೆಗಳು ಅಕ್ಕಪಕ್ಕದಲ್ಲಿವೆ. ರಾಜಕೀಯವಾಗಿ 1971ರ ಬಳಿಕ ಕಾಂಗ್ರೆಸ್ 7ಬಾರಿ, ಎಐಎಡಿಎಂಕೆ 2 ಬಾರಿ ಕ್ಷೇತ್ರದಲ್ಲಿ ಜಯಗಳಿಸಿವೆ.
ಶಿವಗಂಗಾ ಕ್ಷೇತ್ರದ ಒಟ್ಟು ಮತದಾರರು 14,12,373. ಇವರಲ್ಲಿ 7,04,489 ಪುರುಷರು ಮತ್ತು 7,07,884 ಮಹಿಳೆಯರು. 2014ರ ಚುನಾವಣೆಯಲ್ಲಿ ಶೇ 73ರಷ್ಟು ಮತದಾನವಾಗಿತ್ತು. 10,27,036 ಜನರು ಮತಚಲಾಯಿಸಿದ್ದರು. ಇವರಲ್ಲಿ 4,75,004 ಪುರುಷರು ಮತ್ತು 5,52,032 ಮಹಿಳೆಯರು.

ಕ್ಷೇತ್ರದ ಹಾಲಿ ಸಂಸದರು ಎಐಎಡಿಎಂಕೆ ಪಕ್ಷದ ಪಿ.ಆರ್.ಸೆಂಥಿಲ್ನಾಥ್. 2014ರ ಚುನಾವಣೆಯಲ್ಲಿ ಅವರು 4,75,993 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಇವರ ಎದುರಾಳಿಯಾಗಿದ್ದ ಡಿಎಂಕೆಯ ಧ್ರುವರಾಜಾ ಶುಭ ಅವರು 2,46,608 ಮತಗಳನ್ನು ಪಡೆದು ಸೋಲು ಕಂಡಿದ್ದರು. ಸೆಂಥಿಲ್ನಾಥ್ ಅವರು ಬರೋಬ್ಬರಿ 2,29,385 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮಾಜಿ ಕೇಂದ್ರ ಸಚಿವರ ಪಿ.ಚಿದಂಬರಂ ಅವರ ಹುಟ್ಟೂರು ಕಣಾದುಕಥನ್ ಗ್ರಾಮ ಇದೇ ಜಿಲ್ಲೆಯಲ್ಲಿದೆ. ಒಟ್ಟು 7 ಬಾರಿ ಈ ಕ್ಷೇತ್ರದಿಂದ ಪಿ.ಚಿದಂಬರಂ ಅವರು ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 2014ರ ಚುನಾವಣೆಯಲ್ಲಿ ಕ್ಷೇತ್ರವನ್ನು ಎಐಎಡಿಎಂಕೆ ವಶಕ್ಕೆ ಪಡೆದುಕೊಂಡಿದೆ.
ಹಾಲಿ ಸಂಸದ ಪಿ.ಆರ್.ಸೆಂಥಿಲ್ನಾಥ್ ಅವರು ಸಂಸತ್ನಲ್ಲಿ ಶೇ 69ರಷ್ಟು ಹಾಜರಾತಿ ಹೊಂದಿದ್ದಾರೆ. 46 ಚರ್ಚೆಗಳಲ್ಲಿ ಅವರು ಪಾಲ್ಗೊಂಡಿದ್ದಾರೆ. 488 ಪ್ರಶ್ನೆಗಳನ್ನು ಕೇಳಿದ್ದಾರೆ. 24.95 ಕೋಟಿ ರೂ.ಗಳ ಸಂಸದರ ಅನುದಾನದಲ್ಲಿ 20.63 ಕೋಟಿ ರೂ.ಗಳನ್ನು ವಿವಿಧ ಕಾಮಗಾರಿಗಳಿಗೆ ಖರ್ಚು ಮಾಡಿದ್ದಾರೆ. 2.54 ಕೋಟಿ ಅನುದಾನ ಬಾಕಿ ಉಳಿದಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications