ಚೀನಿ, ರಷ್ಯನ್ ಭಾಷೆಗೆ ಅನುವಾದಗೊಂಡ ಎಸ್.ಎಲ್ ಭೈರಪ್ಪರ 'ಪರ್ವ' ಕಾದಂಬರಿ
ಮೈಸೂರು, ಡಿಸೆಂಬರ್ 11: ನಾಡಿನ ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಎಲ್ ಭೈರಪ್ಪ ಅವರ "ಪರ್ವ' ಕಾದಂಬರಿ ದೇಶದಲ್ಲಷ್ಟೆ ಅಲ್ಲದೆ ವಿದೇಶಗಳಲ್ಲಿ ಜನ ಮನ್ನಣೆಗೊಂಡಿದ್ದು, ಇದೀಗ ರಷ್ಯಾ ಹಾಗೂ ಚೀನಾ ಭಾಷೆಗೆ ಭಾಷಾಂತರಗೊಂಡಿದೆ.
ಮಹಾಭಾರತದ ಕಥೆಯನ್ನು ವೈಚಾರಿಕ ದೃಷ್ಟಿಯಿಂದ ಹೇಳಲಾದ ಈ ಕಾದಂಬರಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯು ಚೀನಿ ಹಾಗೂ ರಷ್ಯನ್ ಭಾಷೆಗಳಿಗೂ ಭಾಷಾಂತರ ಮಾಡಿದೆ.
1979ರಲ್ಲಿ ಮೊದಲು ಮುದ್ರಣ ಕಂಡ ಪರ್ವ ಕಾದಂಬರಿ ನಂತರ 23 ಬಾರಿ ಮರು ಮುದ್ರಣಗೊಂಡು ಅಪಾರ ಜನಪ್ರಿಯತೆ ಗಳಿಸಿದೆ. ಇದೀಗ ಚೀನಿ ಹಾಗೂ ರಷ್ಯಾ ಭಾಷೆಗೆ ಭಾಷಾಂತರ ಗೊಂಡಿರುವುದು ಭೈರಪ್ಪನವರ ಅಭಿಮಾನಿಗಳಿಗೆ ಸಂತೋಷ ತಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಕಲೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ದೃಷ್ಟಿಯಿಂದ ಭಾರತದ 10 ಕೃತಿಗಳನ್ನು ಇತರ ದೇಶದ ಭಾಷೆಗಳಿಗೆ ಭಾಷಾಂತರಿಸಬೇಕು ಎಂದು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೇಶದ ಹಿರಿಯ ಸಾಹಿತಿಗಳಲ್ಲೊಬ್ಬರಾದ ಎಸ್.ಎಲ್ ಭೈರಪ್ಪ ಅವರ "ಪರ್ವ' ಕಾದಂಬರಿ ಸಹ ಭಾಷಾಂತರಗೊಂಡಿದೆ.
ಈ ಸುದ್ದಿಯ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾಹಿತಿ ಎಸ್.ಎಲ್ ಭೈರಪ್ಪ, ""ರಷ್ಯಾ ಮತ್ತು ಚೀನಾ ಭಾಷೆಗಳಿಗೆ "ಪರ್ವ'ಅನುವಾದ ಗೊಂಡಿರುವುದು ಸಂತಸ ತಂದಿದೆ. ದೇಶ ದೇಶಗಳ ನಡುವೆ ಸಾಹಿತ್ಯದ ಮೂಲಕ ಸಾಂಸ್ಕೃತಿಕ ವಿನಿಮಯ ಆಗುತ್ತಿರುವುದು ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯಾಗಲಿದೆ'' ಎಂದರು.
ರಷ್ಯಾ ಮತ್ತು ಚೀನಾ ದೇಶಗಳಿಂದ ಸಹ ಉತ್ತಮ ಸಾಹಿತ್ಯಗಳು ಹೊರ ಬಂದಿದೆ. ಆ ಸಾಹಿತ್ಯಗಳು-ನಮ್ಮ ದೇಶಕ್ಕೆ ಅನುವಾದಗೊಂಡರೆ, ಅಲ್ಲಿನ ಕಲೆ, ಸಂಸ್ಕೃತಿ ತಿಳಿಯಲು ಸಾಧ್ಯವಾಗಲಿದೆ. ಈ ರೀತಿ ಕಾರ್ಯಗಳು ಹೆಚ್ಚಾದರೆ ಸಾಹಿತಿಗಳಿಗೂ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾತನಾಡಿ, ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ 'ಪರ್ವ' ಕಾದಂಬರಿಯನ್ನು ರಂಗ ಪದ್ಯಗೊಳಿಸಿ ನಂತರ ರಂಗ ಪ್ರದರ್ಶನ ಮಾಡಲು ಮುಂದಾಗಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ, ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ "ಪರ್ವ' ಕಾದಂಬರಿ ಚೀನಾ ಮತ್ತು ರಷ್ಯಾ ಭಾಷೆಗೆ ಅನುವಾದಗೊಂಡಿರುವುದು ಸಂತಸ ತಂದಿದೆ ಎಂದರು.
ಮುಂದಿನ ಜನವರಿಯಲ್ಲಿ ರಂಗಾಯಣವು ಎಸ್.ಎಲ್ ಭೈರಪ್ಪನವರ ಸಾಹಿತ್ಯ ಪ್ರತಿಷ್ಠಾನ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮೆ ಸಂಸ್ಥೆಗಳ ಆಶ್ರಯದಲ್ಲಿ ಅನುವಾದಗೊಂಡ ಪುಸ್ತಕಗಳನ್ನು ಬಿಡುಗಡೆಗೊಳಿಸುತ್ತೇವೆ ಎಂದು ತಿಳಿಸಿದರು.
ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆ ಬಳಿ 3 ಹಾಗೂ 4 BHK ಐಷಾರಾಮಿ ಅಪಾರ್ಟ್ಮೆಂಟ್. ಹೆಚ್ಚಿನ ವಿವರಗಳಿಗೆ ಕ್ಲಿಕ್ ಮಾಡಿ
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications