ಕಾಕಾಸುರ ಮಾದಪ್ಪರ ಪಾಕ ಮೈಸೂರ್ ಪಾಕ್ ಆಯ್ತು-ಮೈಸೂರ್ ಪಾಕ್ ಹಿಂದಿನ ಪುಟ್ಟ ಕಥೆ
ಮೈಸೂರ್ ಪಾಕ್ ಎಂದಾಕ್ಷಣ ಎಲ್ಲರಿಗೂ ಮೈಸೂರು ನೆನಪಾಗಿ ಬಿಡುತ್ತದೆ. ಮೈಸೂರ್ ಪಾಕ್ ಎಂಬ ಈ ಸಿಹಿ ತಿನಿಸು ಮೈಸೂರನ್ನು ದೇಶ ವಿದೇಶಗಳ ಮಟ್ಟಕ್ಕೆ ಕರೆದೊಯ್ದಿದೆ. ಇಷ್ಟಕ್ಕೂ ಈ ಮೈಸೂರ್ ಪಾಕ್ ನಲ್ಲಿ ಅಂಥದ್ದೇನಿದೆ? ಇದರ ಸೃಷ್ಟಿಯ ಕಥೆಯೇ ರೋಮಾಂಚನಕಾರಿ.
ಮೈಸೂರು ಅರಮನೆಯ ಪಾಕ ಶಾಲೆಯಲ್ಲಿ ನೂರಾರು ವರ್ಷಗಳ ಹಿಂದೆ ಜನ್ಮ ತಾಳಿದ ಮೈಸೂರ್ ಪಾಕ್ ಜನಪ್ರಿಯ ಖಾದ್ಯ. ಇದನ್ನು ತಯಾರು ಮಾಡಿದವರು ಮೈಸೂರು ಅರಮನೆಯ ಪಾಕಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಕಾಕಾಸುರ ಮಾದಪ್ಪನವರು. ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಜಯ ಚಾಮರಾಜ ಒಡೆಯರ್ ಆಡಳಿತಾವಧಿಯಲ್ಲಿ ಅರಮನೆಯಲ್ಲಿ ರಾಜ ಕುಟುಂಬಕ್ಕೆ ಬೇಕಾದ ಸಿಹಿ ಮತ್ತು ಖಾರದ ತಿನಿಸನ್ನು ಇವರೇ ತಯಾರಿಸುತ್ತಿದ್ದರು.
ಒಮ್ಮೆ ಮಹಾರಾಜರು ತಿಂಡಿ ತಯಾರಿಸುವುದರಲ್ಲಿ ಜಾಣ್ಮೆ ಹೊಂದಿದ್ದ ಕಾಕಾಸುರ ಮಾದಪ್ಪನವರಿಗೆ ಹೊಸದಾದ ಯಾವುದಾದರೊಂದು ತಿಂಡಿ ತಯಾರಿಸುವಂತೆ ಆಜ್ಞೆ ಮಾಡಿದರು. ಹೀಗಾಗಿ ಏನು ಹೊಸ ತಿಂಡಿ ತಯಾರಿಸುವುದು ಎಂದು ಅವರು ಆಲೋಚಿಸತೊಡಗಿದರು. ಕೊನೆಗೆ ಕಡಲೆ ಹಿಟ್ಟು, ಸಕ್ಕರೆ, ತುಪ್ಪ, ಎಣ್ಣೆ ಸೇರಿಸಿ ತಿಂಡಿಯೊಂದನ್ನು ಮಾಡಿ ಅದನ್ನು ಮಹಾರಾಜ ನಾಲ್ವಡಿ ಕೃಷ್ಣರಾಜಒಡೆಯರಿಗೆ ಕೊಟ್ಟರು. ಇದರ ರುಚಿ ನೋಡಿದ ಮಹಾರಾಜರಿಗೆ ತುಂಬಾ ಖುಷಿಯಾಗಿ ಕಾಕಾಸುರ ಮಾದಪ್ಪನವರನ್ನು ಬೆನ್ನು ತಟ್ಟಿ ಪ್ರಶಂಶಿಸಿದರು.

ಆದರೆ ಈ ಹೊಸ ತಿಂಡಿಗೆ ಏನಾದರೊಂದು ಹೆಸರಿಡಬೇಕಲ್ಲವೆ? ಏನು ಹೆಸರು ಇಡುವುದೆಂದು ಮಹಾರಾಜರು ಆಲೋಚಿಸಿದರು. ಆಗ ಅವರಿಗೊಂದು ಯೋಚನೆ ಬಂದಿತು. ರುಚಿ ಶುಚಿಯಾದ ಅಡುಗೆಗೆ ನಳಪಾಕ ಎಂದು ಕರೆಯುತ್ತೇವೆ. ಇದು ಮೈಸೂರು ಅರಮನೆಯಲ್ಲಿ ತಯಾರಾಗಿದ್ದರಿಂದ "ಮೈಸೂರು ಪಾಕ" ಎಂದು ಹೆಸರಿಡೋಣ ಎಂದು ನಿರ್ಧರಿಸಿದರು. ಅವತ್ತಿನಿಂದಲೇ ಆ ತಿಂಡಿಯನ್ನು ಮೈಸೂರು ಪಾಕ ಎಂದು ಕರೆಯಲಾಯಿತು. ಮುಂದೆ ಅದು ಮೈಸೂರ್ ಪಾಕ್ ಆಗಿ ಮೈಸೂರಿನ ಖ್ಯಾತಿಯನ್ನು ವಿಶ್ವಕ್ಕೆ ಸಾರಿತು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications