ಡೆಂಗ್ಯೂ ಜ್ವರ ಬಾರದಂತೆ ಎಚ್ಚರ ವಹಿಸಲು ಕ್ರಮಗಳು
ಡೆಂಗ್ಯೂ ಜ್ವರ ಸೊಳ್ಳೆಗಳಿಂದ ಬರುವ ಕಾಯಿಲೆಯಾಗಿದೆ. ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವ ಮೂಲಕ ಜ್ವರ ಬಾರದಂತೆ ತಡೆಯಬಹುದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮಗಳನ್ನು ವಿವರಿಸಿದ್ದಾರೆ.
ಡೆಂಗ್ಯೂ ರೋಗವು ಇಡೀಸ್ ಈಜೀಪ್ಟಿ ಎಂಬ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸ್ವಚ್ಛವಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳೆಸುವ ಈ ಸೊಳ್ಳೆಯು ಹಗಲಿನಲ್ಲಿ ಮಾತ್ರ ಕಚ್ಚುತ್ತದೆ.
7 ದಿನಗಳಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ. ಜನರು ನೀರು ಸಂಗ್ರಹಿಸುವ ತೊಟ್ಟಿ, ಬ್ಯಾರಲ್, ಪಾತ್ರೆಗಳನ್ನು ಪ್ರತಿ 3-4 ದಿನಗಳಿಗೊಮ್ಮೆ ಸ್ವಚ್ಛವಾಗಿ ತಿಕ್ಕಿ ತೊಳೆದು ಬಿಸಿಲಿನಲ್ಲಿ ಒಣಗಿಸಿದ ನಂತರ ನೀರನ್ನು ತುಂಬಿಡಬೇಕು.

ಮನೆ ಅಥವ ಕಚೇರಿಯ ಏರ್ಕೂಲರ್ನಲ್ಲಿ ಸಂಗ್ರಹವಾದ ನೀರು ಮತ್ತು ಹೂವಿನ ಕುಂಡಲಿಗಳಲ್ಲಿ ಸಂಗ್ರಹಿಸಿದ ನೀರನ್ನು ಕೂಡ ಪ್ರತಿ 3-4 ದಿನಗಳಿಗೊಮ್ಮೆ ಬದಲಾಯಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ರೋಗದ ಲಕ್ಷಣಗಳು : ತೀವ್ರ ತಲೆನೋವು, ಕಣ್ಣು ನೋವು, ಕೀಲು ಮತ್ತು ಸ್ನಾಯು ನೋವು, ಹಸಿವಾಗದೇ ಇರುವುದು, ತುರಿಕೆ ಹಾಗೂ ತೀವ್ರ ಜ್ವರ ಡೆಂಗ್ಯೂ ಜ್ವರದ ಲಕ್ಷಣಗಳಾಗಿವೆ. ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರನ್ನು ಭೇಟಿಯಾಗಬೇಕು.
ರೋಗಕ್ಕೆ ತುತ್ತಾದವರು ಹೆಚ್ಚಿನ ವಿಶ್ರಾಂತಿ ಪಡೆಯಬೇಕು. ನೀರಿನ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಪದಾರ್ಥಗಳನ್ನು ಸೇವಿಸಬೇಕು. ಸೊಳ್ಳೆಯು ಕಚ್ಚದಂತೆ ಎಚ್ಚರಿಕೆಯನ್ನು ವಹಿಸಬೇಕು.
ಸೊಳ್ಳೆ ಕಡಿತದಿಂದ ಪಾರಾಗಲು ಉದ್ದನೆಯ ತೋಳಿನ ಅಂಗಿ ಮತ್ತು ಪ್ಯಾಂಟ್ಗಳನ್ನು ಧರಿಸಬೇಕು. ಸೊಳ್ಳೆ ಬತ್ತಿ, ಸೊಳ್ಳೆ ಪರದೆಯನ್ನು ಬಳಸಬೇಕು.
ಕುಡಿಯುವ ನೀರಿನ ಮೂಲಗಳಾದ ಬಾವಿ, ಬೋರ್ವೆಲ್ ಹಾಗೂ ಕೈ ಪಂಪ್ಗಳ ಕನಿಷ್ಠ 100 ಅಡಿ ಸುತ್ತಮುತ್ತಲು ತಿಪ್ಪೆಗುಂಡಿ, ಕಸ-ಕಡ್ಡಿ ಹಾಗೂ ಮಲ ವಿಸರ್ಜನೆ ಮಾಡದಂತೆ ನೋಡಿಕೊಳ್ಳಬೇಕು.
ಕುಡಿಯುವ ನೀರಿನ ಮೂಲಗಳಿಗೆ ಮೇಲ್ಮಟ್ಟದ ಸಂಗ್ರಹಗಾರಗಳಲ್ಲಿ ಪ್ರತಿದಿನ ಹಾಗೂ ತೆರೆದ ಬಾವಿಗಳಲ್ಲಿ ವಾರಕ್ಕೊಮ್ಮೆ ಕ್ಲೋರಿನೇಷನ್ ಮಾಡಬೇಕು. ಕ್ಲೋರಿನೇಷನ್ ಮಾಡಿದ ನೀರನ್ನು ಬಳಸಬೇಕು.
-
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications