ಡೆಂಗ್ಯೂ ಜ್ವರ ಬಾರದಂತೆ ಎಚ್ಚರ ವಹಿಸಲು ಕ್ರಮಗಳು
ಡೆಂಗ್ಯೂ ಜ್ವರ ಸೊಳ್ಳೆಗಳಿಂದ ಬರುವ ಕಾಯಿಲೆಯಾಗಿದೆ. ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವ ಮೂಲಕ ಜ್ವರ ಬಾರದಂತೆ ತಡೆಯಬಹುದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮಗಳನ್ನು ವಿವರಿಸಿದ್ದಾರೆ.
ಡೆಂಗ್ಯೂ ರೋಗವು ಇಡೀಸ್ ಈಜೀಪ್ಟಿ ಎಂಬ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸ್ವಚ್ಛವಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳೆಸುವ ಈ ಸೊಳ್ಳೆಯು ಹಗಲಿನಲ್ಲಿ ಮಾತ್ರ ಕಚ್ಚುತ್ತದೆ.
7 ದಿನಗಳಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ. ಜನರು ನೀರು ಸಂಗ್ರಹಿಸುವ ತೊಟ್ಟಿ, ಬ್ಯಾರಲ್, ಪಾತ್ರೆಗಳನ್ನು ಪ್ರತಿ 3-4 ದಿನಗಳಿಗೊಮ್ಮೆ ಸ್ವಚ್ಛವಾಗಿ ತಿಕ್ಕಿ ತೊಳೆದು ಬಿಸಿಲಿನಲ್ಲಿ ಒಣಗಿಸಿದ ನಂತರ ನೀರನ್ನು ತುಂಬಿಡಬೇಕು.

ಮನೆ ಅಥವ ಕಚೇರಿಯ ಏರ್ಕೂಲರ್ನಲ್ಲಿ ಸಂಗ್ರಹವಾದ ನೀರು ಮತ್ತು ಹೂವಿನ ಕುಂಡಲಿಗಳಲ್ಲಿ ಸಂಗ್ರಹಿಸಿದ ನೀರನ್ನು ಕೂಡ ಪ್ರತಿ 3-4 ದಿನಗಳಿಗೊಮ್ಮೆ ಬದಲಾಯಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ರೋಗದ ಲಕ್ಷಣಗಳು : ತೀವ್ರ ತಲೆನೋವು, ಕಣ್ಣು ನೋವು, ಕೀಲು ಮತ್ತು ಸ್ನಾಯು ನೋವು, ಹಸಿವಾಗದೇ ಇರುವುದು, ತುರಿಕೆ ಹಾಗೂ ತೀವ್ರ ಜ್ವರ ಡೆಂಗ್ಯೂ ಜ್ವರದ ಲಕ್ಷಣಗಳಾಗಿವೆ. ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರನ್ನು ಭೇಟಿಯಾಗಬೇಕು.
ರೋಗಕ್ಕೆ ತುತ್ತಾದವರು ಹೆಚ್ಚಿನ ವಿಶ್ರಾಂತಿ ಪಡೆಯಬೇಕು. ನೀರಿನ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಪದಾರ್ಥಗಳನ್ನು ಸೇವಿಸಬೇಕು. ಸೊಳ್ಳೆಯು ಕಚ್ಚದಂತೆ ಎಚ್ಚರಿಕೆಯನ್ನು ವಹಿಸಬೇಕು.
ಸೊಳ್ಳೆ ಕಡಿತದಿಂದ ಪಾರಾಗಲು ಉದ್ದನೆಯ ತೋಳಿನ ಅಂಗಿ ಮತ್ತು ಪ್ಯಾಂಟ್ಗಳನ್ನು ಧರಿಸಬೇಕು. ಸೊಳ್ಳೆ ಬತ್ತಿ, ಸೊಳ್ಳೆ ಪರದೆಯನ್ನು ಬಳಸಬೇಕು.
ಕುಡಿಯುವ ನೀರಿನ ಮೂಲಗಳಾದ ಬಾವಿ, ಬೋರ್ವೆಲ್ ಹಾಗೂ ಕೈ ಪಂಪ್ಗಳ ಕನಿಷ್ಠ 100 ಅಡಿ ಸುತ್ತಮುತ್ತಲು ತಿಪ್ಪೆಗುಂಡಿ, ಕಸ-ಕಡ್ಡಿ ಹಾಗೂ ಮಲ ವಿಸರ್ಜನೆ ಮಾಡದಂತೆ ನೋಡಿಕೊಳ್ಳಬೇಕು.
ಕುಡಿಯುವ ನೀರಿನ ಮೂಲಗಳಿಗೆ ಮೇಲ್ಮಟ್ಟದ ಸಂಗ್ರಹಗಾರಗಳಲ್ಲಿ ಪ್ರತಿದಿನ ಹಾಗೂ ತೆರೆದ ಬಾವಿಗಳಲ್ಲಿ ವಾರಕ್ಕೊಮ್ಮೆ ಕ್ಲೋರಿನೇಷನ್ ಮಾಡಬೇಕು. ಕ್ಲೋರಿನೇಷನ್ ಮಾಡಿದ ನೀರನ್ನು ಬಳಸಬೇಕು.
-
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications