Stories of strength: 11 ದಿನದಲ್ಲಿ ಕೋವಿಡ್ ಗೆದ್ದ ಕೇರಳದ ಶತಾಯುಷಿ ಮಹಿಳೆ
ತಿರುವನಂತಪುರ, ಜೂ.13: ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಲು ಹಲವಾರು ಯುವಕರಿಗೆ ಸುಮಾರು 14 ದಿನಕ್ಕೂ ಅಧಿಕ ದಿನ ಬೇಕಾಗುತ್ತದೆ. ಈ ನಡುವೆ ಕೇರಳದ ಕಣ್ಣೂರು ಜಿಲ್ಲೆಯ ಶತಾಯುಷಿ ಮಹಿಳೆಯೊಬ್ಬರು 11 ದಿನಗಳಲ್ಲಿ ಕೊರೊನಾವನ್ನು ಸೋಲಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ.
''104 ವರ್ಷದ ಜಾನಕಿ ಅಮ್ಮ ಮೇ 31 ರಂದು ಪರಿಯಾರಂನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ಈ ಶತಾಯುಷಿ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು'' ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಆಮ್ಲಜನಕದ ಮಟ್ಟದಲ್ಲಿ ತೀವ್ರ ಕುಸಿತದ ಹಿನ್ನೆಲೆಯಲ್ಲಿ ಜಾನಕಿ ಅಮ್ಮರನ್ನು ತಾಲಿಪರಂಬದಲ್ಲಿರುವ ಕೋವಿಡ್ ಆರೈಕೆ ಕೇಂದ್ರದಿಂದ ವೈದ್ಯಕೀಯ ಕಾಲೇಜು ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಈಗ 11 ದಿನಗಳಲ್ಲಿ ಕೊರೊನಾವನ್ನು ಸೋಲಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಆಸ್ಪತ್ರೆಯಿಂದ ಶತಾಯುಷಿ ಜಾನಕಿ ಅಮ್ಮ ಬಿಡುಗಡೆಯಾದ ಸಂದರ್ಭ ಪರಿಯಾರಾಮ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು, ಡಾ.ಎಸ್. ಅಜಿತ್ ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಶುಭ ಹಾರೈಸಿದರು ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಜಾನಕಿ ಅಮ್ಮನ ಸೊಸೆ ಮತ್ತು ಸೊಸೆಯ ತಾಯಿ ಇನ್ನೂ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಕೊರೊನಾ ಗೆದ್ದ ಈ ಶತಾಯುಷಿ ಮಹಿಳೆಯನ್ನು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಭಿನಂದಿಸಿದ್ದಾರೆ. "ಈ ವಯಸ್ಸಿನಲ್ಲಿ ಜಾನಕಿ ಅಮ್ಮನ ವಿಶ್ವಾಸವು ರೋಗದ ವಿರುದ್ಧ ಹೋರಾಡಲು ಎಲ್ಲರಿಗೂ ಸ್ಫೂರ್ತಿಯಾಗಿದೆ" ಎಂದು ವೀಣಾ ಜಾರ್ಜ್ ಹೇಳಿದ್ದಾರೆ.
ಇನ್ನು ಜಾನಕಿ ಅಮ್ಮ ಕೊರೊನಾದಿಂದ ಗುಣಮುಖರಾಗಲು ತಮ್ಮ ಆರೈಕೆಯ ಮೂಲಕ ಸಹಾಯ ಮಾಡಿದ ಆಸ್ಪತ್ರೆಯ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳನ್ನು ಸಚಿವರು ಶ್ಲಾಘಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications