Stories of strength: 11 ದಿನದಲ್ಲಿ ಕೋವಿಡ್ ಗೆದ್ದ ಕೇರಳದ ಶತಾಯುಷಿ ಮಹಿಳೆ
ತಿರುವನಂತಪುರ, ಜೂ.13: ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಲು ಹಲವಾರು ಯುವಕರಿಗೆ ಸುಮಾರು 14 ದಿನಕ್ಕೂ ಅಧಿಕ ದಿನ ಬೇಕಾಗುತ್ತದೆ. ಈ ನಡುವೆ ಕೇರಳದ ಕಣ್ಣೂರು ಜಿಲ್ಲೆಯ ಶತಾಯುಷಿ ಮಹಿಳೆಯೊಬ್ಬರು 11 ದಿನಗಳಲ್ಲಿ ಕೊರೊನಾವನ್ನು ಸೋಲಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ.
''104 ವರ್ಷದ ಜಾನಕಿ ಅಮ್ಮ ಮೇ 31 ರಂದು ಪರಿಯಾರಂನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ಈ ಶತಾಯುಷಿ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು'' ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಆಮ್ಲಜನಕದ ಮಟ್ಟದಲ್ಲಿ ತೀವ್ರ ಕುಸಿತದ ಹಿನ್ನೆಲೆಯಲ್ಲಿ ಜಾನಕಿ ಅಮ್ಮರನ್ನು ತಾಲಿಪರಂಬದಲ್ಲಿರುವ ಕೋವಿಡ್ ಆರೈಕೆ ಕೇಂದ್ರದಿಂದ ವೈದ್ಯಕೀಯ ಕಾಲೇಜು ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಈಗ 11 ದಿನಗಳಲ್ಲಿ ಕೊರೊನಾವನ್ನು ಸೋಲಿಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಆಸ್ಪತ್ರೆಯಿಂದ ಶತಾಯುಷಿ ಜಾನಕಿ ಅಮ್ಮ ಬಿಡುಗಡೆಯಾದ ಸಂದರ್ಭ ಪರಿಯಾರಾಮ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು, ಡಾ.ಎಸ್. ಅಜಿತ್ ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಶುಭ ಹಾರೈಸಿದರು ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಜಾನಕಿ ಅಮ್ಮನ ಸೊಸೆ ಮತ್ತು ಸೊಸೆಯ ತಾಯಿ ಇನ್ನೂ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಕೊರೊನಾ ಗೆದ್ದ ಈ ಶತಾಯುಷಿ ಮಹಿಳೆಯನ್ನು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಭಿನಂದಿಸಿದ್ದಾರೆ. "ಈ ವಯಸ್ಸಿನಲ್ಲಿ ಜಾನಕಿ ಅಮ್ಮನ ವಿಶ್ವಾಸವು ರೋಗದ ವಿರುದ್ಧ ಹೋರಾಡಲು ಎಲ್ಲರಿಗೂ ಸ್ಫೂರ್ತಿಯಾಗಿದೆ" ಎಂದು ವೀಣಾ ಜಾರ್ಜ್ ಹೇಳಿದ್ದಾರೆ.
ಇನ್ನು ಜಾನಕಿ ಅಮ್ಮ ಕೊರೊನಾದಿಂದ ಗುಣಮುಖರಾಗಲು ತಮ್ಮ ಆರೈಕೆಯ ಮೂಲಕ ಸಹಾಯ ಮಾಡಿದ ಆಸ್ಪತ್ರೆಯ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳನ್ನು ಸಚಿವರು ಶ್ಲಾಘಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications