ಬೇಸಿಗೆಯ ಬಿಸಿಯೂಟ: ಕಾರ್ ಬಾನೆಟ್ ಚಪಾತಿ, ಸ್ಕೂಟರ್ ಸೀಟ್ ದೋಸೆ
ನವ ದೆಹಲಿ ಮೇ 02: ಬೇಸಿಗೆ ಕಾಲ ಮುಂದುವರಿದಿದೆ. ಬಿಸಿಲಿನ ಝಳಕ್ಕೆ ಜನ ಪರದಾಡುವಂತಾಗಿದೆ. ಉತ್ತರ ಭಾರತ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ತಾಪಮಾನ 50 ಡಿಗ್ರಿ ತಲುಪಿದೆ. ಸುಡು ಬಿಸಿಲು, ಬಿಸಿಗಾಳಿಯಿಂದ ಜನಜೀವನ ದುಸ್ತರವಾಗಿದೆ. ಈ ಬೇಸಿಗೆಯ ಬಿಸಿಯನ್ನು ತಣಿಸಲು ಮಳೆ ಬಿಟ್ಟರೆ ಬೇರೆ ಪರಿಹಾರವಿಲ್ಲ. ಹೀಗಿರುವಾಗ ಜನ ಬೇಸಿಗೆಯ ಬಿಸಿಯೂಟದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಜನರು ತಮ್ಮ ಸುತ್ತಲಿನ ಶಾಖವನ್ನು ವಿವರಿಸಲು ಅದ್ಭುತವಾದ ಮಾರ್ಗವನ್ನು ಕಂಡುಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಇಂತಹ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಕಾರ್ ಬಾನೆಟ್ ಮೇಲೆ ಚಪಾತಿ
ಇಂತಹ ಅನೇಕ ವಿಡಿಯೊಗಳು ಟ್ವಿಟರ್ನಲ್ಲಿ ವೈರಲ್ ಆಗುತ್ತಿವೆ. ಇದರಲ್ಲಿ ಅನೇಕ ಜನರು ಬೇಸಿಗೆಯ ಬಿಸಿ ನೋಟವನ್ನು ತೋರಿಸುತ್ತಿದ್ದಾರೆ. ನೀಲಾ ಮಾಧಬ್ ಪಾಂಡಾ ಎಂಬ ಭಾರತೀಯ ಚಲನಚಿತ್ರ ನಿರ್ಮಾಪಕರು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಇದೇ ರೀತಿಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಒಡಿಶಾದ ಮಹಿಳೆಯೊಬ್ಬರು ಕಾರಿನ ಬಾನೆಟ್ ಮೇಲೆ ಚಪಾತಿ ಬೇಯಿಸುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಮಹಿಳೆ ಕಾರ್ ಬಾನೆಟ್ನಲ್ಲಿ ಬಿಸಿ ಚಪಾತಿ ಬೇಯಿಸಿದ್ದಾರೆ.

ಸ್ಕೂಟರ್ ಸೀಟ್ ಮೇಲೆ ದೋಸೆ
ಒಡಿಶಾದ ಮಹಿಳೆಯೊಬ್ಬರು ಬಿಸಿಲಿನಲ್ಲಿ ಕಾರಿನ ಬಾನೆಟ್ ಮೇಲೆ ಚಪಾತಿ ಬೇಯಿಸಿದರೆ, ವ್ಯಕ್ತಿಯೊಬ್ಬರು ತಮ್ಮ ಸ್ಕೂಟರ್ನ ಹಾಟ್ ಸೀಟ್ ಮೇಲೆ ದೋಸೆ ಮಾಡಿದ್ದಾರೆ. @chittapanda ಹೆಸರಿನ ಪುಟದಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಅದರಲ್ಲಿ ವ್ಯಕ್ತಿಯೊಬ್ಬರು ಸ್ಕೂಟರ್ನ ಸೀಟಿನ ಮೇಲೆ ದೋಸೆ ಹಿಟ್ಟನ್ನು ಸುರಿಯುತ್ತಾರೆ ಮತ್ತು ನಂತರ ಒಂದು ನಿಮಿಷದಲ್ಲಿ ಆ ದೋಸೆ ಸ್ಕೂಟರ್ನ ಸೀಟಿನ ಮೇಲೆ ಸಿದ್ಧವಾಗುತ್ತದೆ.

ಈ ಹಿಂದೆ ವ್ಯಕ್ತಿಯೊಬ್ಬ ಕಾರಿನ ಬಾನೆಟ್ ಮೇಲೆ ಮೀನು ಹುರಿದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋಗೆ ಜನರು ಸಾಕಷ್ಟು ಕಾಮೆಂಟ್ ಮಾಡುತ್ತಿದ್ದಾರೆ. ಕೆಲವರು ತಮ್ಮ ಅನುಭವವನ್ನು ಹೇಳುತ್ತಿದ್ದರೆ, ಕೆಲವರು ಹವಾಮಾನ ಬದಲಾವಣೆಗೆ ಮನುಷ್ಯರನ್ನು ದೂಷಿಸುತ್ತಿದ್ದಾರೆ. ದೇಶದ ಬಹುತೇಕ ರಾಜ್ಯಗಳಲ್ಲಿ ಪಾದರಸವು 40 ಡಿಗ್ರಿ ದಾಟಿದೆ.
-
ಕೇರಳ ಸ್ಟೋರಿ: ಸಿನಿಮಾ ಶೂಟಿಂಗ್ ನಡುವೆಯೇ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನ ಮದುವೆಯಾದ ಮೋನಾಲಿಸಾ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications