ಬೇಸಿಗೆಯ ಬಿಸಿಯೂಟ: ಕಾರ್ ಬಾನೆಟ್ ಚಪಾತಿ, ಸ್ಕೂಟರ್ ಸೀಟ್ ದೋಸೆ
ನವ ದೆಹಲಿ ಮೇ 02: ಬೇಸಿಗೆ ಕಾಲ ಮುಂದುವರಿದಿದೆ. ಬಿಸಿಲಿನ ಝಳಕ್ಕೆ ಜನ ಪರದಾಡುವಂತಾಗಿದೆ. ಉತ್ತರ ಭಾರತ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ತಾಪಮಾನ 50 ಡಿಗ್ರಿ ತಲುಪಿದೆ. ಸುಡು ಬಿಸಿಲು, ಬಿಸಿಗಾಳಿಯಿಂದ ಜನಜೀವನ ದುಸ್ತರವಾಗಿದೆ. ಈ ಬೇಸಿಗೆಯ ಬಿಸಿಯನ್ನು ತಣಿಸಲು ಮಳೆ ಬಿಟ್ಟರೆ ಬೇರೆ ಪರಿಹಾರವಿಲ್ಲ. ಹೀಗಿರುವಾಗ ಜನ ಬೇಸಿಗೆಯ ಬಿಸಿಯೂಟದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಜನರು ತಮ್ಮ ಸುತ್ತಲಿನ ಶಾಖವನ್ನು ವಿವರಿಸಲು ಅದ್ಭುತವಾದ ಮಾರ್ಗವನ್ನು ಕಂಡುಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಇಂತಹ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಕಾರ್ ಬಾನೆಟ್ ಮೇಲೆ ಚಪಾತಿ
ಇಂತಹ ಅನೇಕ ವಿಡಿಯೊಗಳು ಟ್ವಿಟರ್ನಲ್ಲಿ ವೈರಲ್ ಆಗುತ್ತಿವೆ. ಇದರಲ್ಲಿ ಅನೇಕ ಜನರು ಬೇಸಿಗೆಯ ಬಿಸಿ ನೋಟವನ್ನು ತೋರಿಸುತ್ತಿದ್ದಾರೆ. ನೀಲಾ ಮಾಧಬ್ ಪಾಂಡಾ ಎಂಬ ಭಾರತೀಯ ಚಲನಚಿತ್ರ ನಿರ್ಮಾಪಕರು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಇದೇ ರೀತಿಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಒಡಿಶಾದ ಮಹಿಳೆಯೊಬ್ಬರು ಕಾರಿನ ಬಾನೆಟ್ ಮೇಲೆ ಚಪಾತಿ ಬೇಯಿಸುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಮಹಿಳೆ ಕಾರ್ ಬಾನೆಟ್ನಲ್ಲಿ ಬಿಸಿ ಚಪಾತಿ ಬೇಯಿಸಿದ್ದಾರೆ.

ಸ್ಕೂಟರ್ ಸೀಟ್ ಮೇಲೆ ದೋಸೆ
ಒಡಿಶಾದ ಮಹಿಳೆಯೊಬ್ಬರು ಬಿಸಿಲಿನಲ್ಲಿ ಕಾರಿನ ಬಾನೆಟ್ ಮೇಲೆ ಚಪಾತಿ ಬೇಯಿಸಿದರೆ, ವ್ಯಕ್ತಿಯೊಬ್ಬರು ತಮ್ಮ ಸ್ಕೂಟರ್ನ ಹಾಟ್ ಸೀಟ್ ಮೇಲೆ ದೋಸೆ ಮಾಡಿದ್ದಾರೆ. @chittapanda ಹೆಸರಿನ ಪುಟದಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಅದರಲ್ಲಿ ವ್ಯಕ್ತಿಯೊಬ್ಬರು ಸ್ಕೂಟರ್ನ ಸೀಟಿನ ಮೇಲೆ ದೋಸೆ ಹಿಟ್ಟನ್ನು ಸುರಿಯುತ್ತಾರೆ ಮತ್ತು ನಂತರ ಒಂದು ನಿಮಿಷದಲ್ಲಿ ಆ ದೋಸೆ ಸ್ಕೂಟರ್ನ ಸೀಟಿನ ಮೇಲೆ ಸಿದ್ಧವಾಗುತ್ತದೆ.

ಈ ಹಿಂದೆ ವ್ಯಕ್ತಿಯೊಬ್ಬ ಕಾರಿನ ಬಾನೆಟ್ ಮೇಲೆ ಮೀನು ಹುರಿದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋಗೆ ಜನರು ಸಾಕಷ್ಟು ಕಾಮೆಂಟ್ ಮಾಡುತ್ತಿದ್ದಾರೆ. ಕೆಲವರು ತಮ್ಮ ಅನುಭವವನ್ನು ಹೇಳುತ್ತಿದ್ದರೆ, ಕೆಲವರು ಹವಾಮಾನ ಬದಲಾವಣೆಗೆ ಮನುಷ್ಯರನ್ನು ದೂಷಿಸುತ್ತಿದ್ದಾರೆ. ದೇಶದ ಬಹುತೇಕ ರಾಜ್ಯಗಳಲ್ಲಿ ಪಾದರಸವು 40 ಡಿಗ್ರಿ ದಾಟಿದೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications