ಆರೆಸ್ಸೆಸ್ ಕಾರ್ಯಕ್ರಮಕ್ಕೆ ಪ್ರಣವ್ ಮುಖರ್ಜಿ, ಕಾಂಗ್ರೆಸ್ ನಲ್ಲಿ ಕಂಪನ
ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ನಿರ್ಧಾರ ಕಾಂಗ್ರೆಸ್ ನಲ್ಲಿ ಅಚ್ಚರಿಗೂ ಹಾಗೂ ಮುಜುಗರಕ್ಕೂ ಕಾರಣವಾಗಿದೆ. ನಾಗ್ ಪುರ್ ನಲ್ಲಿ ನಡೆಯಲಿರುವ ಆರೆಸ್ಸೆಸ್ ನ ವಾರ್ಷಿಕ ಕಾರ್ಯಕ್ರಮವೊಂದರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಪ್ರಣವ್ ಮುಖರ್ಜಿ ಒಪ್ಪಿಗೆ ಸೂಚಿಸಿರುವುದು ಕಾಂಗ್ರೆಸ್ ಪಕ್ಷದೊಳಗೆ ಹಲವರು ಹುಬ್ಬೇರಿಸುವಂತೆ ಮಾಡಿದೆ.
ಇನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಇಬ್ಬರೂ ದೇಶದಲ್ಲಿ ಇಲ್ಲ ಆದ್ದರಿಂದ ತಕ್ಷಣಕ್ಕೆ ಅವರ ಪ್ರತಿಕ್ರಿಯೆ ಏನು ಎಂಬುದು ಗೊತ್ತಾಗಿಲ್ಲ. ಇನ್ನು ಕಾಂಗ್ರೆಸ್ ನ ಹಲವು ನಾಯಕರು ಸಾರ್ವಜನಿಕವಾಗಿ ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ನಿರಾಕರಿಸುತ್ತಿದ್ದಾರೆ.
ಆರೆಸ್ಸೆಸ್ ಮೂಲಗಳ ಪ್ರಕಾರ, ತೃತೀಯ ವರ್ಷ ವರ್ಗದ ಸಮಾರೋಪ ಸಮಾರಂಭಕ್ಕೆ ಜೂನ್ ಏಳರಂದು ಪ್ರಣವ್ ಮುಖರ್ಜಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. "ಮಾಜಿ ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಅದಕ್ಕೆ ಅವರು ಒಪ್ಪಿಗೆ ಕೂಡ ಸೂಚಿಸಿದ್ದಾರೆ" ಎಂದು ಆರೆಸ್ಸೆಸ್ ನ ಪ್ರಮುಖರೊಬ್ಬರು ತಿಳಿಸಿದ್ದಾರೆ.

ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದರು
"ಎಂಟು ವರ್ಷದ ಹಿಂದೆ ಇದೇ ಪ್ರಣವ್ ಮುಖರ್ಜಿ ಆಗಿನ ಯುಪಿಎ ಸರಕಾರವನ್ನು ಒತ್ತಾಯಿಸಿದ್ದರು: ಆರೆಸ್ಸೆಸ್ ಮತ್ತು ಅದರ ಸಹವರ್ತಿ ಸಂಸ್ಥೆಗಳ ಜತೆಗೆ ಉಗ್ರಗಾಮಿಗಳ ನಂಟಿನ ಬಗ್ಗೆ ತನಿಖೆ ಆಗಬೇಕು ಎಂದಿದ್ದರು" ಎಂಬುದನ್ನು ಕಾಂಗ್ರೆಸ್ ಮುಖಂಡರೊಬ್ಬರು ನೆನಪಿಸಿಕೊಂಡಿದ್ದಾರೆ.

ಪ್ರತಿಕ್ರಿಯಿಸಲು ನಿರಾಕರಿಸಿದ ಎ.ಕೆ.ಆಂಟನಿ
ಕಾಂಗ್ರೆಸ್ ನ ಹಿರಿಯ ನಾಯಕರಾದ ಎ.ಕೆ.ಆಂಟನಿ ಸೇರಿದಂತೆ ಹಲವರು ಈ ವಿಚಾರವಾಗಿ ಅಭಿಪ್ರಾಯ ವ್ಯಕ್ತಪಡಿಸಲು ನಿರಾಕರಿಸಿದ್ದಾರೆ. "ಅವರು ಬುದ್ಧಿವಂತರು. ಭಾರತದ ರಾಷ್ಟ್ರಪತಿಯಾಗಿದ್ದರು. ಅಲ್ಲಿಗೆ ಹೋಗುವುದರಿಂದ ಅವರ ನಡವಳಿಕೆಯಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ. ಅವರು ಅವರಾಗಿಯೇ ಇರುತ್ತಾರೆ" ಎಂದಿದ್ದಾರೆ ಕೇಂದ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ.

ಪ್ರಣವ್ ಮುಖರ್ಜಿ ಮಾತ್ರ ಉತ್ತರಿಸಬಲ್ಲರು
"ನಿಮ್ಮ ಪ್ರಶ್ನೆಗೆ ಉತ್ತರಿಸುವುದಕ್ಕೆ ಪ್ರಣವ್ ಮುಖರ್ಜಿ ಅವರೇ ಸರಿ. ಆಹ್ವಾನವನ್ನು ಅವರು ಒಪ್ಪಿದ್ದಾರೆ. ಈ ಬಗ್ಗೆ ಯಾವುದೇ ಪ್ರಶ್ನೆ ಉದ್ಭವ ಆದರೆ ಅದಕ್ಕೆ ಉತ್ತರಿಸುವುದಕ್ಕೆ ಪ್ರಣವ್ ಮುಖರ್ಜಿ ಅವರೇ ಸರಿಯಾದ ವ್ಯಕ್ತಿ" ಎಂದು ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ ಪ್ರತಿಕ್ರಿಯಿಸಿದ್ದಾರೆ.

ಮೋಹನ್ ಭಾಗ್ವತ್ ಜತೆ ನಾಲ್ಕು ಸಲ ಭೇಟಿ
ಆರೆಸ್ಸೆಸ್ ನ ಮೂಲಗಳ ಪ್ರಕಾರ, ರಾಷ್ಟ್ರಪತಿ ಸ್ಥಾನದ ಅವಧಿ ಪೂರೈಸಿದ ನಂತರ ನಾಲ್ಕು ಬಾರಿ ಆರೆಸ್ಸೆಸ್ ನ ಮುಖ್ಯಸ್ಥ ಮೋಹನ್ ಭಾಗ್ವತ್ ರನ್ನು ಪ್ರಣವ್ ಮುಖರ್ಜಿ ಭೇಟಿಯಾಗಿದ್ದಾರೆ. ಇನ್ನು ಆರೆಸ್ಸೆಸ್ ನ ಸಂಪ್ರದಾಯದ ಪ್ರಕಾರ, ನಾಗ್ ಪುರ್ ನಲ್ಲಿ ನಡೆಯುವ ಅದರ ಎರಡು ಮುಖ್ಯ ಕಾರ್ಯಕ್ರಮಗಳಿಗೆ ಆರೆಸ್ಸೆಸೇತರ ಸಿದ್ಧಾಂತಗಳನ್ನು ಅನುಸರಿಸುವ ವ್ಯಕ್ತಿಗಳನ್ನು ಆಹ್ವಾನಿಸಲಾಗುತ್ತದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications