ಬಾಲ ವಿವೇಕಾನಂದರಿಗೆ ತಾಯಿ ಭುವನೇಶ್ವರಿ ಹೇಳಿದ ಅದ್ಭುತ ಕತೆ
ವಿವೇಕಾನಂದರು ವಿಶ್ವಮಾನ್ಯರಾಗಿ ಹೊರಹೊಮ್ಮಿದ್ದರ ಹಿಂದೆ ಗುರು ರಾಮಕೃಷ್ಣ ಪರಮಹಂಸರ ಪ್ರಭಾವ ಎಷ್ಟಿದೆಯೋ ಅವರ ವಿವೇಕಾನಂದರ ಪೋಷಕರ ಪ್ರಭಾವವೂ ಅಷ್ಟೇ ಇದೆ.
ವಿವೇಕಾನಂದರ ಪೋಷಕರಾದ ತಾಯಿ ಭುವನೇಶ್ವರಿ ಅವರ ಪ್ರಭಾವವಂತೂ ವಿವೇಕಾನಂದರ ಮೇಲೆ ತುಸು ಹೆಚ್ಚೇ ಇದೆ. ಬಾಲ್ಯದಲ್ಲಿ ನರೇಂದ್ರ ನಾಥ ದತ್ತ ಎಂಬ ಹೆಸರಿನಿಂದ ಕರೆಸಿಕೊಳ್ಳುತ್ತಿದ್ದ ವಿವೇಕಾನಂದರಿಗೆ ತಾಯಿ ಭುವನೇಶ್ವರಿ ಹೇಳಿದ ಕತೆ ಇಲ್ಲಿದೆ.
ನರೇಂದ್ರರ ತಂದೆ ವಿಶ್ವನಾಥ ದತ್ತರು ಕೊಲ್ಕತ್ತಾದಲ್ಲಿ ಖ್ಯಾತ ವಕೀಲರಾಗಿದ್ದರು. ಮಗ ನರೇಂದ್ರನೂ ತಮ್ಮಂತೆಯೇ ವಕೀಲನಾಗಬೇಕೆಂಬುದು ಅವರ ಆಸೆಯಾಗಿತ್ತು. ಆದರೆ ನಾಲಕ ನರೇಂದ್ರರ ಆಸೆ ಬೇರೆಯದ್ದೇ ಆಗಿತ್ತು.

ಆಗಿನ ಕಾಲದಲ್ಲಿ ಬ್ರಿಟೀಷ್ ಅಧಿಕಾರಿಗಳು, ಪ್ರಖ್ಯಾತರು, ಜಮೀನ್ದಾರುಗಳು ಎಲ್ಲರೂ ಸಾರೋಟಿನಲ್ಲಿ ಓಡಾಡುತ್ತಿದ್ದರು. ಸಾರೋಟಿನಲ್ಲಿ ಪ್ರಯಾಣಿಸುವುದು ಗೌರವದ ವಿಷಯವಾಗಿತ್ತು. ಇದನ್ನು ನರೇಂದ್ರ ಗಮನಿಸಿದ್ದರು.
ಒಮ್ಮೆ ಮನೆಗೆ ಬಂದ ಅತಿಥಿಗಳ ಮುಂದೆ ನರೇಂದ್ರರ ತಂದೆ ವಿಶ್ವನಾಥರು 'ದೊಡ್ಡವನಾಗಿ ಏನಾಗಬೇಕೆಂದುಕೊಂಡಿದ್ದೀಯ ಮಗು?' ಎಂದು ಕೇಳಿದರು. 'ಸಾರೋಟಿನ ಚಾಲಕ ಆಗಬೇಕೆಂದಿದ್ದೇನೆ' ಎಂದರು ಬಾಲಕ ನರೇಂದ್ರ.
ಮಗನ ಉತ್ತರ ಕೇಳಿ ಸಿಟ್ಟು ನೆತ್ತಿಗೆ ಹತ್ತಿದ ವಿಶ್ವನಾಥರು, ನರೇಂದ್ರನಿಗೆ ಕೆನ್ನೆಗೆ ಬಾರಿಸಿದರು. ನರೇಂದ್ರ ಅಳುತ್ತಾ ಓಡಿ ಅಮ್ಮ ಭುವನೇಶ್ವರಿ ಬಳಿ ಹೋಗಿ ನಡೆದ ಘಟನೆ ಹೇಳಿದ.
ಶಾಂತವಾಗಿ ಕೇಳಿಸಿಕೊಂಡ ಭುವನೇಶ್ವರಿ, ಗೋಡೆಯ ಮೇಲೆ ತೂಗು ಹಾಕಲಾಕಿದ್ದ ಶ್ರೀಕೃಷ್ಣ ಅರ್ಜುನನ್ನು ಕೂರಿಸಿಕೊಂಡು ಸಾರೋಟು ಓಡಿಸುತ್ತಿದ್ದ ಚಿತ್ರ ತೋರಿಸಿ, 'ಮಗು ಸಾರೋಟು ಓಡಿಸುವುದು ಕೆಟ್ಟ ಉದ್ಯೋಗವಲ್ಲ, ಆದರೆ ನೀನು ಓಡಿಸಬೇಕಾದುದು ಜನರು ಓಡಾಡುವ ರಥವನ್ನಲ್ಲ, ಬದಲಿಗೆ ಧರ್ಮದ ಸಾರೋಟನ್ನು' ಎಂದರು.
ಅಮ್ಮ ಹೇಳಿದ ಮಾತು ನರೇಂದ್ರರ ಮನದಲ್ಲಿ ಅಚ್ಚೊತ್ತಿತು. ಅಂತೆಯೇ ತಂದೆ ವಿಶ್ವನಾಥರಿಗೂ ತಮ್ಮ ತಪ್ಪಿನ ಅರಿವಾಯಿತು. ಶ್ರೀಕೃಷ್ಣನೇ ಮಾಡಿದ ಸಾರೋಟು ಚಾಲಕನ ಉದ್ಯೋಗವನ್ನು ನಾನು ನೀಚವೆಂಬಂತೆ ಕಂಡೆ ಎಂದು ಬೇಸರಿಸಿಕೊಂಡು, ಮಗ ನರೇಂದ್ರನನ್ನು ಮುದ್ದಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications