ABP-C Voter Opinion Poll: ತಮಿಳುನಾಡಿನಲ್ಲಿ ಯುಪಿಎಗೆ ಮತ್ತೆ ಅಧಿಕಾರ
ನವದೆಹಲಿ, ಜನವರಿ 18: ತಮಿಳುನಾಡಿನಲ್ಲಿ ಏಪ್ರಿಲ್-ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಪ್ರಸಕ್ತ ವಿಧಾನಸಭೆಯ ಅವಧಿಯು ಮೇ ತಿಂಗಳಲ್ಲಿ ಅಂತ್ಯಗೊಳ್ಳಲಿದ್ದು, ಎಐಎಡಿಎಂಕೆ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾಗಿದೆ. ಡಿಎಂಕೆ ನೇತೃತ್ವದ ಯುಪಿಎ ಮತ್ತು ಎಐಎಡಿಎಂಕೆ ನೇತೃತ್ವದ ಎನ್ಡಿಎ ನಡುವೆ ನೇರ ಪೈಪೋಟಿ ಇರಲಿದೆ.
ಒಟ್ಟು 232 ವಿಧಾನಸಭೆ ಕ್ಷೇತ್ರಗಳು ತಮಿಳುನಾಡಿನಲ್ಲಿವೆ. 2016ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ದಿಗ್ವಿಜಯ ಸಾಧಿಸಿತ್ತು. ಆಗ ಜೆ. ಜಯಲಲಿತಾ ನೇತೃತ್ವದಲ್ಲಿ ಅದು ಚುನಾವಣೆಯನ್ನು ಎದುರಿಸಿತ್ತು. 1984ರ ಬಳಿಕ ಎರಡನೆಯ ಅವಧಿಗೆ ಆಯ್ಕೆಯಾದ ಮೊದಲ ಆಡಳಿತ ಪಕ್ಷ ಎಂಬ ಹೆಗ್ಗಳಿಕೆಗೆ ಅದು ಪಾತ್ರವಾಗಿತ್ತು. ಆದರೆ ಆಡಳಿತದ ನಡುವೆಯೇ ಮುಖ್ಯಮಂತ್ರಿ ಜೆ. ಜಯಲಲಿತಾ ನಿಧನರಾಗಿದ್ದರಿಂದ ಸಾಕಷ್ಟು ರಾಜಕೀಯ ಪಲ್ಲಟಗಳು ಉಂಟಾಗಿದ್ದವು.
ಇದೇ ಮೊದಲ ಬಾರಿಗೆ ಎಐಎಡಿಎಂಕೆ ಜಯಲಲಿತಾ ಅವರಿಲ್ಲದೆ ಚುನಾವಣೆ ಎದುರಿಸುತ್ತಿದೆ. ಅತ್ತ ಸ್ಟಾಲಿನ್ ನೇತೃತ್ವದ ಡಿಎಂಕೆ ಕೂಡ ಕರುಣಾನಿಧಿ ಅವರ ಮಾರ್ಗದರ್ಶನ ಇಲ್ಲದೆ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿದೆ. ಹೀಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆ ಕುತೂಹಲ ಹೆಚ್ಚಿಸಿದೆ.
ಎಬಿಪಿ-ಸಿ ವೋಟರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಹೇಗಿದೆ ಎನ್ನುವುದು ಬಹಿರಂಗವಾಗಿದೆ. ಮುಂದೆ ಓದಿ.

ಯಾರಿಗೆ ಎಷ್ಟು ಮತಗಳು?
ಯುಪಿಎ: 158-166
ಎನ್ಡಿಎ: 60-68
ಎಂಎನ್ಎಂ: 0-4
ಎಎಂಎಂಕೆ: 2-6
ಇತರೆ: 0-4

ಮೋದಿ ಕಾರ್ಯವೈಖರಿ ಎಷ್ಟು ತೃಪ್ತಿಕರ?
ತುಂಬಾ ತೃಪ್ತಿಕರ: 13%
ತೃಪ್ತಿಕರ: 35%
ಅತೃಪ್ತಿಕರ: 44%
ಹೇಳಲು ಅಸಾಧ್ಯ: 08%

ಕೇಂದ್ರ ಸರ್ಕಾರದ ಆಡಳಿತ ಸಮಾಧಾನಕರವೇ?
ತುಂಬಾ ತೃಪ್ತಿಕರ: 11%
ತೃಪ್ತಿಕರ: 32%
ಅತೃಪ್ತಿಕರ: 44%
ಹೇಳಲು ಅಸಾಧ್ಯ: 13%

2016ರ ಚುನಾವಣೆ ಫಲಿತಾಂಶ
ಕಾಂಗ್ರೆಸ್: 8
ಎಐಎಡಿಎಂಕೆ: 134
ಡಿಎಂಕೆ: 89
ಐಯುಎಂಎಲ್: 1
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications