ಚುನಾವಣಾ ಕಣಕ್ಕೆ ಧುಮುಕಿದ ನಟ ಕಮಲ್ ಆಸ್ತಿ ಎಷ್ಟಿದೆ?
ಕೊಯಮತ್ತೂರು, ಮಾರ್ಚ್ 16: ತಮಿಳುನಾಡು ವಿಧಾನಸಭೆ ಚುನಾವಣೆ ಮೂಲಕ ಸಕ್ರಿಯ ರಾಜಕಾರಣಕ್ಕೆ ನಟ ಕಮಲ್ ಹಾಸನ್ ಭರ್ಜರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಮಲ್ ಅವರು ನಾಮಪತ್ರ ಸಲ್ಲಿಸಿದ್ದು, ಆಸ್ತಿ ವಿವರಗಳು ಲಭ್ಯವಾಗಿವೆ.
ಕಮಲ್ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಮಕ್ಕಳ್ ನೀತಿ ಮೈಯಂ ಪಕ್ಷದ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಕಮಲ್ ಹಾಸನ್ ಒಟ್ಟಾರೆ 176.9 ಕೋಟಿ ರು ಆಸ್ತಿ ಹೊಂದಿದ್ದಾರೆ. ಇದರಲ್ಲಿ ಚರಾಸ್ತಿ 45 ಕೋಟಿ ರು ಹಾಗೂ ಸ್ಥಿರಾಸ್ತಿ 131.8 ಕೋಟಿ ರು ಇದೆ.
ಪತ್ನಿ ಮಕ್ಕಳ ಬಗ್ಗೆ ಉಲ್ಲೇಖವಿಲ್ಲ:
ಕಮಲ್ ಹಾಸನ್ ಅವರು ಬಹುಪತ್ನಿವಲ್ಲಭ ಎನಿಸಿಕೊಂಡರೂ ಸಾರಿಕಾ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಮೊದಲ ಪತ್ನಿ ವಾಣಿ ಗಣಪತಿ ನಿಧನರಾಗಿದ್ದಾರೆ. ನಟಿ ಗೌತಮಿ ಜೊತೆ ಸಹಬಾಳ್ವೆ ನಡೆಸಿದ್ದರು. ಸದ್ಯ ತಮ್ಮೊಂದಿಗೆ ಯಾರು ಅವಲಂಬಿತರಿಲ್ಲ ಎಂದಿದ್ದಾರೆ. ಸಾರಿಕಾರಿಂದ ಪಡೆದ ಶ್ರುತಿ ಹಾಸನ್, ಅಕ್ಷರ ಹಾಸನ್ ಕೂಡಾ ಅವಲಂಬಿತರಲ್ಲ ಎಂದು ಉಲ್ಲೇಖಿಸಿದ್ದಾರೆ.

ಎಂಎನ್ಎಂ ನಂ.2 ಎನಿಸಿಕೊಂಡಿರುವ ಉಪಾಧ್ಯಕ್ಷ, ವೆನಿಲ್ಲಾ ಬೆಳೆ ರಫ್ತು ಉದ್ಯಮಿ ಆರ್ ಮಹೇಂದ್ರನ್ ಅವರು ಎರಡನೇ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಮಹೇಂದ್ರನ್ ಒಟ್ಟು 160 ಕೋಟಿ ರು ಗಳಿಕೆ ಹೊಂದಿದ್ದಾರೆ. ಅವರ ಅವಲಂಬಿತರು 18 ಕೋಟಿ ಹೊಂದಿದ್ದಾರೆ. ಇದನ್ನುಸೇರಿಸಿದರೆ ಕಮಲ್ ಆಸ್ತಿ ಮೊತ್ತವನ್ನು ದಾಟಬಹುದು.
ಮಿಕ್ಕಂತೆ ತಮಿಳುನಾಡಿನ ಪ್ರಮುಖ ರಾಜಕಾರಣಿಗಳಾದ ಸಿಎಂ ಎಡಪ್ಪಾಡಿ ಪಳನಿಸ್ವಾಮಿ, ಡಿಎಂಕೆ ಅಧ್ಯಕ್ಷ ಸ್ಟಾಲಿನ್, ಡಿಸಿಎಂ ಓ ಪನ್ನೀರ್ ಸೆಲ್ವಂ, ಉದಯನಿಧಿ ಸ್ಟಾಲಿನ್, ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಸೇರಿದಂತೆ ಸೋಮವಾರದ ಅಂತ್ಯಕ್ಕೆ 980ಕ್ಕೂ ಅಧಿಕ ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ತಾಣದಲ್ಲಿ ಮಾಹಿತಿ ಸಿಗುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications