ಟೈಮ್ಸ್ ನೌ ಸಮೀಕ್ಷೆ: ಕೇರಳ, ತಮಿಳುನಾಡು, ಅಸ್ಸಾಂ ಯಾರ ಪಾಲು?
ಪಂಚ ರಾಜ್ಯಗಳ ಚುನಾವಣೆ ಇಂದಷ್ಟೆ ಮುಗಿದಿದ್ದು ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಹಲವಾರು ಸಂಸ್ಥೆಗಳು, ಮಾಧ್ಯಮಗಳು ಪಂಚರಾಜ್ಯಗಳ ಚುನಾವಣಾ ಸಮೀಕ್ಷೆ ನೀಡಿವೆ.
ಟೈಮ್ಸ್ ನೌ ಹಾಗೂ ಸಿವೋಟರ್ ಜಂಟಿಯಾಗಿ ಚುನಾವಣಾ ಸಮೀಕ್ಷೆ ನೀಡಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯೇ ಮತ್ತೆ ಅಧಿಕಾರ ಹಿಡಿಯಲಿದೆ ಎಂದಿದೆ.
ಸಮೀಕ್ಷೆ ವರದಿಯಂತೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷಗಳು 115 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಮಮತಾ ನೇತೃತ್ವದ ಟಿಎಂಸಿ ಹಾಗೂ ಮಿತ್ರ ಪಕ್ಷಗಳು 158 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಅಲ್ಪ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಪಶ್ಚಿಮ ಬಂಗಾಳದ ಇತರೆ ಎಡಪಕ್ಷಗಳು 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿವೆ.

ಕೇರಳಕ್ಕೆ ಮತ್ತೆ ಪಿಣರಾಯಿ ವಿಜಯನ್
ಕೇರಳ ರಾಜ್ಯದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಮೈತ್ರಿಕೂಟವು 75 ಸ್ಥಾನಗಳಲ್ಲಿ ಜಯಗಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು 65 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಲಿದೆ. ಕೇರಳದಲ್ಲಿ 140 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು 71 ಮ್ಯಾಜಿಕ್ ಸಂಖ್ಯೆಯಾಗಿದೆ.

ತಮಿಳನಾಡಿನಲ್ಲಿ ಆಡಳಿತ ವಿರೋಧಿ ಅಲೆ
ಇನ್ನು ತಮಿಳುನಾಡಿನಲ್ಲಿ ಆಡಿತಾರೂಢ ಎಐಎಡಿಎಂಕೆ ಪಕ್ಷವು ಹೀನಾಯ ಸೋಲು ಕಂಡು ಸ್ಟ್ಯಾನಿಲ್ ನೇತೃತ್ವದ ಡಿಎಂಕೆ ಪಕ್ಷ ಭಾರಿ ಬಹುಮತದೊಂದಿಗೆ ಆಯ್ಕೆ ಆಗಲಿದೆ ಎನ್ನುತ್ತಿದೆ ಸಮೀಕ್ಷೆ. ಆಡಿತಾರೂಢ ಎಐಎಡಿಎಂಕೆ ಪಕ್ಷವು 64 ಸ್ಥಾನಗಳಲ್ಲಿ ಗೆಲ್ಲಲಿದ್ದರೆ ಡಿಎಂಕೆ ಪಕ್ಷವು 166 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದಿದೆ ಸಮೀಕ್ಷೆ.

ಅಸ್ಸಾಂನಲ್ಲಿ ಬಿಜೆಪಿಗೆ ಅತ್ಯಲ್ಪ ಬಹುಮತ
ಅಸ್ಸಾಂ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಮೈತ್ರಿಕೂಟಕ್ಕೆ ಅತ್ಯಲ್ಪ ಬಹುಮತವಷ್ಟೆ ಬರುತ್ತದೆ ಎಂದಿದೆ ಟೈಮ್ಸ್ ನೌ-ಸಿವೋಟರ್ ಸಮೀಕ್ಷೆ. ಬಿಜೆಪಿ ಮೈತ್ರಿಕೂಟವು 65 ಕ್ಷೇತ್ರಗಳಲ್ಲಿ ಜಯಗಳಿಸಿದರೆ ಕಾಂಗ್ರೆಸ್ ಮೈತ್ರಿಕೂಟವು 59 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಎಜೆಪಿ ಒಂದೂ ಸ್ಥಾನ ಗೆಲ್ಲುತ್ತಿಲ್ಲ ಇತರರು ಎರಡು ಸ್ಥಾನಗಳನ್ನು ಗೆಲ್ಲಲಿದ್ದಾರೆ. 126 ವಿಧಾನಸಭಾ ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಮ್ಯಾಜಿಕ್ ಸಂಖ್ಯೆ 64.

ಪುದುಚೆರಿಯಲ್ಲಿ ಬಿಜೆಪಿ ಜಯಭೇರಿ
ಇನ್ನು ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದೆ ಸಮೀಕ್ಷೆ. ಪುದುಚೆರಿಯ ಒಟ್ಟು 30 ಕ್ಷೇತ್ರಗಳಲ್ಲಿ 21 ಕ್ಷೇತ್ರಗಲ್ಲಿ ಬಿಜೆಪಿ ಮೈತ್ರಿಕೂಟ ಜಯಭೇರಿ ಭಾರಿಸಲಿದೆ. ಕಾಂಗ್ರೆಸ್ ಮೈತ್ರಿಕೂಟವು 8 ಸ್ಥಾನಗಳಲ್ಲಿ ಜಯಗಳಿಸಲಿದೆ. ಇತರೆ ಒಂದು ಕ್ಷೇತ್ರದಲ್ಲಿ ಗೆಲ್ಲಲಿದ್ದಾರೆ ಎಂದಿದೆ ಸಮೀಕ್ಷೆ.
-
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ











Click it and Unblock the Notifications