ಪರಿಸರ ದಿನ; ಇರುವುದೊಂದು ಭೂಮಿ, ಪ್ರಕೃತಿಯೊಂದಿಗೆ ಸಾಮರಸ್ಯವಿರಲಿ
ವಿಶ್ವದಲ್ಲಿ ಕೋಟ್ಯಾಂತರ ನಕ್ಷತ್ರ ಪುಂಜಗಳಿವೆ, ನಮ್ಮ ನಕ್ಷತ್ರ ಪುಂಜದಲ್ಲಿ ಕೋಟ್ಯಾಂತರ ಗ್ರಹಗಳಿವೆ. ಆದರೆ ಅವುಗಳಲ್ಲಿ ವಾಸಿಸಲು ಯೋಗ್ಯವಾದ ಗ್ರಹ ಭೂಮಿಯೊಂದೆ.
ಜಾಗತಿಕ ತಾಪಮಾನ, ಮಾಲಿನ್ಯ, ಸಂಪನ್ಮೂಲಗಳ ಅತಿಯಾದ ಬಳಕೆಯಿಂದಾಗಿ ಭೂಮಿ ಇಂದು ವಿನಾಶದೆಡೆಗೆ ಸಾಗುತ್ತಿದೆ. ಇದಕ್ಕೆಲ್ಲ ಮಾನವನ ದುರಾಸೆಯೇ ಕಾರಣ. ಆಧುನಿಕತೆ ಬೆಳೆದಂತೆಲ್ಲ ಭೂಮಿ ಮೇಲೆ ನಿರಂತರವಾಗಿ ಶೋಷಣೆ ನಡೆಯುತ್ತಿದೆ.
ಆದ್ದರಿಂದ ಪರಿಸರ ಸಂರಕ್ಷಣೆ ಮಾಡಿ ಎಂದು ಕರೆ ನೀಡಬೇಕಾದ ಪರಿಸ್ಥಿತಿಗೆ ಬಂದು ನಾವು ನಿಂತಿದ್ದೇವೆ. ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 1974 ರಿಂದ ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5 ರಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ.
2022ರ ವಿಶ್ವ ಪರಿಸರ ದಿನವನ್ನು 'ಕೇವಲ ಒಂದೇ ಭೂಮಿ'ಯೆಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ, ಸಂಪನ್ಮೂಲಗಳ ಅತಿಯಾದ ಬಳಕೆ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಉದ್ದೇಶವಾಗಿದೆ.

ಜೀವಿಗಳಿಗೆ ಮಾರಕವಾಗಿದೆ
ಭೂಮಿಯು ಸುಮಾರು 8 ಮಿಲಿಯನ್ ಪ್ರಬೇಧದ ಜೀವಿಗಳು, ಮನುಷ್ಯರು ಮತ್ತು ಸಸ್ಯವರ್ಗವನ್ನು ಒಳಗೊಂಡಿದೆ. ಆದರೆ ಅವುಗಳಿಗೆ ಮಾನವ ನಿರ್ಮಿತ ಅಂಶಗಳು ಅಪಾಯವನ್ನು ತಂದೊಡ್ಡಿದೆ. ಭೂಮಿಯ ಮೇಲೆ ಹೆಚ್ಚುತ್ತಿರುವ ಸಂಪನ್ಮೂಲಗಳ ಮೇಲಿನ ಶೋಷಣೆ ಮತ್ತು ಮಾಲಿನ್ಯವು ಪರಿಸರಕ್ಕೆ ಹಲವು ಸಮಸ್ಯೆಗಳನ್ನು ಸೃಷ್ಟಿಸುವುದರಿಂದ ಭೂಮಿಯ ಮೇಲಿನ ಎಲ್ಲಾ ಜೀವಿಗಳಿಗೂ ಮಾರಕವಾಗಿದೆ.ಭೂಕಂಪ, ಪ್ರವಾಹ, ಬರಗಾಲಗಳಂತಹ ಅಪಾಯಕಾರಿ ಕ್ರಿಯೆಗಳು ಉದ್ಭವಿಸುತ್ತಿದೆ. ಇಂದು ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಪ್ರತಿವರ್ಷ 7 ಮಿಲಿಯನ್ ಜನರು ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಸಾವಿಗೀಡಾಗುತ್ತಿದ್ದಾರೆ.

ಜಾಗತಿಕ ತಾಪಮಾನ ಏರಿಕೆ
ಅರಣ್ಯನಾಶದಿಂದಾಗಿ ಇಂದು ಮಳೆಯ ಕೊರತೆ ಮತ್ತು ಜಾಗತಿಕ ತಾಪಮಾನ ಏರುತ್ತಲೇ ಇದೆ. ಅಧಿಕ ತಾಪಮಾನದಿಂದಾಗಿ ಭೂಮಿಯ ಮೇಲಿನ ಹಿಮ ರಾಶಿಯು ಕರಗಿ ಪ್ರವಾಹವಾಗುವುದರ ಜೊತೆಗೆ ಸಮುದ್ರದಲ್ಲಿ ನೀರಿನ ಪ್ರಮಾಣ ಏರಿಕೆಯಾಗಿ ಕರಾವಳಿ ತೀರ ಪ್ರದೇಶಗಳಿಗೆ ಅಪಾಯವನ್ನು ತಂದೊಡ್ಡಿದೆ. ಇಂದು ಭೂಮಿಯ ಮೇಲಾಗುತ್ತಿರುವ ಶೋಷಣೆಗಳನ್ನು ತಡೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಪ್ರತೀವರ್ಷ ಸುಮಾರು 90 ಬಿಲಿಯನ್ ಟನ್ಗಳಷ್ಟು ಸಂಪನ್ಮೂಲಗಳನ್ನು ಭೂಮಿಯಿಂದ ಹೊರತೆಗೆಯಲಾಗುತ್ತಿದೆ ಹಾಗೂ ಸುಮಾರು ಶೇ 70 ರಷ್ಟು ಸಂಪನ್ಮೂಲಗಳನ್ನು ಅತಿಯಾಗಿ ಬಳಸಲಾಗುತ್ತಿದೆ.

ನೀರು ಮತ್ತು ಆಹಾರ ಸಮಸ್ಯೆಗಳು
ಪ್ರತಿ ವರ್ಷ 12 ಶತಕೋಟಿ ಟನ್ಗಳಷ್ಟು ತ್ಯಾಜ್ಯ ಭೂಮಿಯ ಮೇಲೆ ಸೃಷ್ಟಿಯಾಗುತ್ತಿದೆ. ಇದರಲ್ಲಿ 50 ಮಿಲಿಯನ್ ಟನ್ನಷ್ಟು ಇ-ತ್ಯಾಜ್ಯ ಸೇರಿದೆ. 2050ರ ವೇಳೆಗೆ ವಿಶ್ವದಲ್ಲಿನ ಜನಸಂಖ್ಯೆ ಆಹಾರಕ್ಕಾಗಿ ಹಲವು ಸಮಸ್ಯೆಗಳನ್ನು ಎದುರಿಸಲಿದೆ. 2070ರ ವೇಳೆಗೆ ಸಮುದ್ರದಲ್ಲಿನ ಹವಳದ ದಿಬ್ಬಗಳು ಸಂಪೂರ್ಣವಾಗಿ ಮಾಯವಾಗಲಿದೆ. ಮೇಲಿನ ಎಲ್ಲಾ ಸಮಸ್ಯೆಗಳು ಸೃಷ್ಟಿಯಾಗಿರುವುದು ಮನುಷ್ಯನ ದುರಾಸೆಯಿಂದಲೇ ಆಗಿವೆ. ಆದ್ದರಿಂದ ಭವಿಷ್ಯದಲ್ಲಿ ಕಾಡುವ ಪರಿಸರ ಸಮಸ್ಯೆಗಳನ್ನು ತಡೆಯಲು ಮನುಷ್ಯನಿಂದಲೇ ಸಾಧ್ಯವಾದ್ದರಿಂದ ನಾವೆಲ್ಲರು ಮಾಡಬೇಕಾದ ಕೆಲಸಗಳೆಂದರೆ- ಯಾವ ವಸ್ತುವನ್ನು ಪುನರ್ಬಳಕೆ ಮಾಡಲು ಸಾಧ್ಯವಿಲ್ಲವೋ ಆ ವಸ್ತುವನ್ನು ಬಳಸಲೇಬಾರದು.
ಹಸಿರಿನೊಂದಿಗೆ ಜೀವಿಸುವುದಕ್ಕಾಗಿ ಗಿಡಗಳನ್ನು ನೆಡುವುದು, ಭೂಮಿಯ ಮೇಲಿನ ಸಂಪನ್ಮೂಲಗಳ ಸರಿಯಾದ ಬಳಕೆ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದು, ತ್ಯಾಜ್ಯವಸ್ತುಗಳ ಸರಿಯಾದ ವಿಲೇವಾರಿ, ಜನರಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು ಹಾಗು ಸ್ವಯಂ ಸೇವಕರಾಗಿ ಪರಿಸರದ ಸಂರಕ್ಷಣೆಯಲ್ಲಿ ತೊಡಗುವುದಾಗಿದೆ.

ಮಾಲಿನ್ಯದಿಂದಾಗಿ ಅಪಾರ ಹಾನಿ
ಪ್ಲಾಸ್ಟಿಕ್ ತ್ಯಾಜ್ಯವು ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತದೆ, ಅದರ ಮಾಲಿನ್ಯವನ್ನು ತಡೆಯಲು ವ್ಯವಸ್ಥಿತ ಬದಲಾವಣೆಯ ಅಗತ್ಯವಿದೆ. ಉದಾಹರಣೆಗೆ ಸಾಗರಗಳಿಗೆ ಪ್ಲಾಸ್ಟಿಕ್ ತ್ಯಾಜ್ಯದ ಸೇರ್ಪಡೆಯು ಭೀಕರ ಮಾಲಿನ್ಯದೊಂದಿಗೆ ಅಪಾರ ಹಾನಿಯನ್ನುಂಟು ಮಾಡುತ್ತದೆ. ನಿರಂತರವಾಗಿ ಬದಲಾಗುತ್ತಿರುವ ಹವಾಮಾನದಿಂದಾಗಿ, ಉಂಟಾಗುವ ಸಮುದ್ರಮಟ್ಟದ ಏರಿಕೆಯಿಂದಾಗಿ ಕರಾವಳಿ ಪ್ರದೇಶಗಳಿಗೆ ಹಾನಿಯಾಗುತ್ತಿದೆ. ಹಾಗಾಗಿ ಪರಿಸರ ವ್ಯವಸ್ಥೆಯನ್ನು ಮರು ಸ್ಥಾಪಿಸುವ ಮೂಲಕ ಹವಾಮಾನ ವೈಪರೀತ್ಯಗಳನ್ನು ಕಡಿಮೆ ಮಾಡಬೇಕಾಗಿದೆ.
ಭೂಮಿಯ ಮೇಲೆ ವಾಸಿಸುವ ಸಕಲ ಜೀವಿಗಳಿಗೂ ಭೂಮಿಯೊಂದೆ ಜೀವಿಸಲು ಯೋಗ್ಯವಾದ್ದರಿಂದ ಭೂಮಿಯ ಸಂರಕ್ಷಣೆ ಇಂದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇದನ್ನು ಅರಿತು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ನಾವು ಬದುಕಲು, ಪ್ರೀತಿಸಲು ಮತ್ತು ಏಳಿಗೆ ಹೊಂದಲು ಭೂಮಿಯ ಸರ್ವತೋಮುಖ ಸಂರಕ್ಷಣೆಗಾಗಿ ಶ್ರಮಿಸುವುದು ಅಗತ್ಯವಾಗಿದೆ.
(ಬರಹ ಕೃಪೆ; ಡಿಐಪಿಆರ್, ಶಿವಮೊಗ್ಗ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications