ಟೈಮ್ಸ್ ನೌ ಸಮೀಕ್ಷೆ: ಪುದುಚೇರಿಯಲ್ಲಿ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ
ಪುದುಚೇರಿ, ಮಾರ್ಚ್ 24: ಟೈಮ್ಸ್ ನೌ ನಡೆಸಿದ ಪುದುಚೇರಿ ಜನಾಭಿಪ್ರಾಯ ಸಂಗ್ರಹದ ಪ್ರಕಾರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಕ್ಲಿನ್ ಸ್ವೀಪ್ ಮಾಡಲಿದೆ ಎಂದು ತಿಳಿಸಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ), ಅಖಿಲ ಭಾರತ ಎನ್ಆರ್ ಕಾಂಗ್ರೆಸ್ (ಎಐಎನ್ಆರ್ಸಿ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಡಿಎಂಕೆ) ಯನ್ನು ಒಳಗೊಂಡಿರುವ ಎನ್ಡಿಎ 21 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಟೈಮ್ಸ್ ನೌ-ಸಿ-ವೋಟರ್ ಅಭಿಪ್ರಾಯ ಸಂಗ್ರಹದಲ್ಲಿ ಅಂದಾಜಿಸಲಾಗಿದೆ.
ಪುದುಚೇರಿಯಲ್ಲಿ ಏಪ್ರಿಲ್ 6 ರಂದು ಒಟ್ಟು 30 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಸಮೀಕ್ಷೆ ಪ್ರಕಾರ, ಎನ್ಡಿಎ ಮೈತ್ರಿಕೂಟ 19 ರಿಂದ 23 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಯನ್ನು ಒಳಗೊಂಡಿರುವ ಯುಪಿಎ ಮೈತ್ರಿಕೂಟ, ಮಾರ್ಚ್ನಲ್ಲಿ ನಡೆಸಿದ ಪುದುಚೇರಿ ಪೂರ್ವ-ಸಮೀಕ್ಷೆಯ ಪ್ರಕಾರ, 9 ಸ್ಥಾನಗಳೊಂದಿಗೆ (7-11 ಸ್ಥಾನಗಳು) ಎರಡನೇ ಸ್ಥಾನ ಗಳಿಸುವ ನಿರೀಕ್ಷೆಯಿದೆ ಎಂದು 1,265 ಜನರ ಅಭಿಪ್ರಾಯ ಸಂಗ್ರಹದಲ್ಲಿ ತಿಳಿದುಬಂದಿದೆ.
2021ರ ಪುದುಚೇರಿ ಚುನಾವಣೆಯ ಮತದಾನ ಪೂರ್ವ ಸಮೀಕ್ಷೆಯ ಪ್ರಕಾರ ಸ್ವತಂತ್ರರು ಸೇರಿದಂತೆ ಇತರರು ಒಂದು ಸ್ಥಾನ ಗೆಲ್ಲಬಹುದು ಅಥವಾ ಗೆಲ್ಲದಿರಬಹುದು ಎಂದು ಅಂದಾಜಿಸಲಾಗಿದೆ.
ಶೇಕಡಾವಾರು ಮತ ಹಂಚಿಕೆಯಲ್ಲಿ ಎನ್ಡಿಎ ಶೇ.47.2 ರಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದ್ದು, ಇದು ಕಳೆದ ಚುನಾವಣೆಗಿಂತ ಶೇ.16.7 ರಷ್ಟು ಹೆಚ್ಚಾಗಿದೆ. ಯುಪಿಎ ತನ್ನ 2016ರ ಮತ ಗಳಿಕೆ ಪ್ರಮಾಣ ಶೇ.39.5 ರಷ್ಟು ಉಳಿಸಿಕೊಳ್ಳುವ ನಿರೀಕ್ಷೆಯಿದ್ದು, ಇತರರು ಶೇಕಡಾವಾರು ಮತ ಗಳಿಕೆ ಪ್ರಮಾಣವನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.
ಸದ್ಯ ವಿಧಾನಸಭಾ ಚುನಾವಣೆ ನಡೆದರೆ ನೀವು ಯಾರಿಗೆ ಮತ ಹಾಕುತ್ತೀರಿ? ಎಂಬ ಪ್ರಶ್ನೆಗೆ UPA (Congress + DMK) ಮೈತ್ರಿಕೂಟಕ್ಕೆ ಶೇ.39.5, NDA (AINRC + BJP + AIADMK) ಮೈತ್ರಿಕೂಟಕ್ಕೆ ಶೇ.47.2, ಇತರರಿಗೆ ಶೇ.13.3 ಜನರು ಉತ್ತರಿಸಿದ್ದಾರೆ.
ನೀವು ಯಾವ ಪಕ್ಷಕ್ಕೆ ಮತ ಚಲಾಯಿಸುತ್ತೀರಿ ಎಂಬುದರ ಹೊರತಾಗಿಯೂ, ಪುದುಚೇರಿ ಚುನಾವಣೆಯಲ್ಲಿ ಯಾವ ಪಕ್ಷ ಅಥವಾ ಮೈತ್ರಿ ಗೆಲ್ಲುತ್ತದೆ? ಎಂಬ ಪ್ರಶ್ನೆಗೆ UPA ಪರ ಶೇ.30.2 ಒಲವು ಹೊಂದಿದ್ದರೆ, NDA ಮೈತ್ರಿಕೂಟದ ಪರ ಶೇ.52.9 ರಷ್ಟು, ಇತರೆಗೆ ಶೇ.16.9 ರಷ್ಟು ಜನರು ಒಲವು ತೋರಿಸಿದ್ದಾರೆ.
ಮುಖ್ಯಮಂತ್ರಿಯಾಗಲು ಹೆಚ್ಚು ಸೂಕ್ತ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ, ಯುಪಿಎ ಮೈತ್ರಿಕೂಟದ ವಿ.ನಾರಾಯಣಸ್ವಾಮಿ ಪರ ಶೇ.20 ರಷ್ಟು, ಎನ್ಡಿಎ ಮೈತ್ರಿಕೂಟದ ಎನ್.ರಂಗಸಾಮಿ ಪರ ಶೇ.49.8 ರಷ್ಟು ಹಾಗೂ ಇತರೆ ವ್ಯಕ್ತಿಗೆ ಶೇ.30.2 ರಷ್ಟು ಜನರು ಒಲವು ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ನೌ ಸಮೀಕ್ಷೆಯಲ್ಲಿ ತಿಳಿದುಬಂದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications