Exit Poll : ಆರ್. ಆರ್. ನಗರದಲ್ಲಿ ಬಿಜೆಪಿ, ಕಾಂಗ್ರೆಸ್ ನೇರ ಹಣಾಹಣಿ
ಬೆಂಗಳೂರು, ನವೆಂಬರ್ 07: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ನವೆಂಬರ್ 10ರಂದು ಪ್ರಕಟವಾಗಲಿದೆ. ನವೆಂಬರ್ 3ರಂದು ನಡೆದ ಚುನಾವಣೆಯಲ್ಲಿ ಶೇ 45.24ರಷ್ಟು ಮತದಾನವಾಗಿತ್ತು.
Recommended Video
ಉಪ ಚುನಾವಣೆ ಘೋಷಣೆಯಾದ ದಿನದಿಂದ ಆರ್. ಆರ್. ನಗರ ಕ್ಷೇತ್ರ ಕುತೂಹಕ್ಕೆ ಕಾರಣವಾಗಿತ್ತು. ಬಿಜೆಪಿ ಅಭ್ಯರ್ಥಿ ಯಾರು? ಎಂಬ ಕುತೂಹಲ ನಾಮಪತ್ರ ಸಲ್ಲಿಕೆ ಮಾಡಲು 2 ದಿನ ಬಾಕಿ ಇರುವ ತನಕ ಇತ್ತು.

ಚುನಾವಣಾ ಅಧಿಸೂಚನೆ ಪ್ರಕಟವಾಗುವ ಮೊದಲೇ ಕಾಂಗ್ರೆಸ್ ಪಕ್ಷ ಹೆಚ್. ಕುಸುಮಾ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಉಪ ಚುನಾವಣೆ ಕಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ ಎಂಬ ಲೆಕ್ಕಾಚಾರವಿತ್ತು.
2018ರ ಚುನಾವಣೆಯಲ್ಲಿ ಆರ್. ಆರ್. ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ 60 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದರು. ಆದ್ದರಿಂದ, ಜೆಡಿಎಸ್ ಸಹ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿತ್ತು. ವಿ. ಕೃಷ್ಣಮೂರ್ತಿ ಅವರನ್ನು ಅಭ್ಯರ್ಥಿಯಾಗ ಕಣಕ್ಕಿಳಿಸಿತ್ತು.
ಈ ಬಾರಿಯ ಉಪ ಚುನಾವವಣೆಯಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ನಿಂದ ಹೆಚ್. ಕುಸುಮಾ ಮತ್ತು ಜೆಡಿಎಸ್ನಿಂದ ವಿ. ಕೃಷ್ಣಮೂರ್ತಿ ಸೇರಿದಂತೆ 16 ಅಭ್ಯರ್ಥಿಗಳು ಆರ್. ಆರ್. ನಗರ ಕ್ಷೇತ್ರದಲ್ಲಿ ಕಣದಲ್ಲಿದ್ದರು.
ಸಿ-ವೋಟರ್ ನಡೆಸಿದ ಚುನಾವಣೋತ್ತರ ಸಮೀಕ್ಷೆ ಶನಿವಾರ ಪ್ರಕಟವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಡೆದಿದೆ. ಬಿಜೆಪಿಯ ಮುನಿರತ್ನ ಅವರು ಗೆಲುವು ಸಾಧಿಸಲಿದ್ದಾರೆ. ಉಪ ಚುನಾವಣೆಯಲ್ಲಿ ಮುನಿರತ್ನ ಶೇ 37.8ರಷ್ಟು ಮತಗಳನ್ನು ಪಡೆಯಲಿದ್ದಾರೆ.
ಕಾಂಗ್ರೆಸ್ನ ಹೆಚ್. ಕುಸುಮಾ ಶೇ 31.1ರಷ್ಟು ಮತಗಳನ್ನು ಪಡೆಯಲಿದ್ದಾರೆ. ಜೆಡಿಎಸ್ನ ವಿ. ಕೃಷ್ಣಮೂರ್ತಿ ಶೇ 14ರಷ್ಟು ಮತ ಪಡೆದರೆ, ಇತರ ಅಭ್ಯರ್ಥಿಗಳು ಶೇ 17.2ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಕ್ಷೇತ್ರದ ಸಂಸದರು ಡಿ. ಕೆ. ಸುರೇಶ್. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹೋದರ ಡಿ. ಕೆ. ಸುರೇಶ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಬಿರುಸಿನ ಪ್ರಚಾರವನ್ನು ನಡೆಸಿದ್ದರು.
ಆರ್. ಆರ್. ನಗರ ಕ್ಷೇತ್ರದಲ್ಲಿ ಇದುವರೆಗೂ ಬಿಜೆಪಿ ಸೋತರೆ ಅದಕ್ಕೆ ಕಾರಣ ಮುನಿರತ್ನ. ಈ ಬಾರಿ ಗೆದ್ದರೆ ಅದಕ್ಕೂ ಮುನಿರತ್ನ ಕಾರಣ ಎಂಬ ಮಾತು ಚಾಲ್ತಿಯಲ್ಲಿತ್ತು. ಅದರಂತೆ ಕ್ಷೇತ್ರದಲ್ಲಿ ಎರಡು ಬಾರಿ ಗೆದ್ದಿದ್ದ ಮುನಿರತ್ನ ಅವರು ಬಿಜೆಪಿ ಸೇರಿ ಉಪ ಚುನಾವಣೆ ಅಭ್ಯರ್ಥಿಯಾಗಿದ್ದರು.
ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದಲ್ಲಿ ಹಿಂದುಳಿದಿರಲಿಲ್ಲ. ಹೆಚ್. ಕುಸುಮಾ ಅವರು ಮೊದಲ ಬಾರಿಗೆ ಚುನಾವಣೆ ಕಣಕ್ಕೆ ಇಳಿದರೂ ಕ್ಷೇತ್ರದ ತುಂಬಾ ಸಂಚಾರ ನಡೆಸಿ ಪ್ರಚಾರವನ್ನು ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಚಾರಕ್ಕೆ ಕೈ ಜೋಡಿಸಿದ್ದರು.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications