ಮಗುವಿನ ಚಿಕಿತ್ಸೆಗೆ ಹಣ ಸಂಗ್ರಹ: ಮಂಗಳಮುಖಿಯರ ಮಾನವೀಯ ಮುಖ
ಉಡುಪಿ, ನವೆಂಬರ್ 18: ಮಂಗಳಮುಖಿಯರೆಂದರೆ ನಿರ್ಲಕ್ಷ್ಯದಿಂದ ಕಾಣುವವರೇ ಹೆಚ್ಚು. ಸಮಾಜದಲ್ಲಿ ಅವರನ್ನು ಒಂದಾಗಿಸಿಕೊಳ್ಳುವ ಪ್ರಯತ್ನಗಳು ನಡೆದಿರುವುದು ವಿರಳವೇ. ಅವರಿಗೆ ಒಂದು ಗೌರವಾನ್ವಿತ ಬದುಕು ರೂಪಿಸುವುದು ನಮ್ಮ ಸಮಾಜದಲ್ಲಿ ಇನ್ನೂ ಸಾಧ್ಯವಾಗಿಲ್ಲ.
ಆದರೆ ಎಲ್ಲರಿಂದಲೂ ಅವಮಾನಕ್ಕೆ, ಅವಹೇಳನಕ್ಕೆ ಈಡಾಗಿಯೂ, ತಮ್ಮಿಂದ ಸಮಾಜಕ್ಕೆ ಒಳ್ಳೆಯದಾಗಬೇಕು ಎಂದು ಉಡುಪಿಯ ಮಂಗಳಮುಖಿಯರ ತಂಡವೊಂದು ಮಾಡಿರುವ ಮಾನವೀಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಉಡುಪಿ ಜಿಲ್ಲೆಯಲ್ಲಿ ಒಟ್ಟಾರೆ ಎರಡು ಸಾವಿರದಷ್ಟು ಮಂಗಳಮುಖಿಯರಿದ್ದಾರೆ. ಈ ಪೈಕಿ ಮುಖ್ಯವಾಹಿನಿಯಲ್ಲಿ 283 ಮಂಗಳಮುಖಿಯರು ಭಿಕ್ಷಾಟನೆ ಮಾಡುತ್ತಾ, ಸೆಕ್ಸ್ ವರ್ಕ್ ಮಾಡುತ್ತಾ ನಮ್ಮ ನಡುವೆ ಬದುಕುತ್ತಿದ್ದಾರೆ. ಅವರ ಒಂದು ತಂಡದಿಂದ ಸಮಾಜಕ್ಕೆ ಮಾದರಿ ಎನಿಸುವಂಥ ಕಾರ್ಯವೊಂದು ನಡೆದಿದೆ. ಮುಂದೆ ಓದಿ...

ಮಗುವಿನ ನೆರವಿಗೆ ಬಂದ ಮಂಗಳಮುಖಿಯರು
ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರಿನ ನಿವಾಸಿ ಆರಾಧ್ಯ ಎಂಬ ಎರಡೂವರೆ ವರ್ಷದ ಹೆಣ್ಣು ಮಗುವಿಗೆ ಸಂಪೂರ್ಣ ಶ್ರವಣದೋಷ ಇತ್ತು. ಜೊತೆಗೆ ಮಗುವಿಗೆ ಮಾತನಾಡಲಾಗುತ್ತಿರಲಿಲ್ಲ. ಮಗುವಿನ ಕಿವಿಯ ಸರ್ಜರಿಗೆ ಬರೋಬ್ಬರಿ 14 ಲಕ್ಷ ರೂಪಾಯಿಗಳ ಅಗತ್ಯ ಇತ್ತು. ಮಾತ್ರವಲ್ಲ, ಮೂರು ತಿಂಗಳ ಒಳಗಾಗಿ ಈ ಸರ್ಜರಿ ಮಾಡಲೇಬೇಕಿತ್ತು. ಆಗ ಈ ಮಗುವಿನ ನೆರವಿಗೆ ಬಂದಿದ್ದು ಮಂಗಳಮುಖಿಯರ ಒಂದು ಗುಂಪು.

ಮಾನವೀಯತೆಗೆ ಬೆಲೆ ಕಟ್ಟಲು ಸಾಧ್ಯವೇ?
ಮಗುವಿನ ವಿಷಯ ತಿಳಿದುಕೊಂಡ ಉಡುಪಿಯ ಮಂಗಳಮುಖಿಯರ ತಂಡ ಆ ಹೆಣ್ಣು ಮಗುವಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಿ ಹಣಸಂಗ್ರಹ ಮಾಡಿದೆ. ಈ ತಂಡದ ನೇತೃತ್ವ ವಹಿಸಿದವರು ಸಮೀಕ್ಷಾ ಎಂಬಾಕೆ. ಈಕೆ ಎಂಬಿಎ ಪದವೀಧರೆ. ಸಮೀಕ್ಷಾ, ಸಾನ್ವಿ, ರೇಖಾ, ಸಂಧ್ಯಾ,ನಿಶಾ ಲಾವಣ್ಯ ಎಂಬುವರು ಉಡುಪಿ ಜಿಲ್ಲೆಯ ಕಾರ್ಕಳ, ಮಣಿಪಾಲ ಮತ್ತಿತರ ಕಡೆ ಸಂಚರಿಸಿ ಅಂಗಡಿ-ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಮತ್ತು ಮನೆಗಳಿಗೆ ತೆರಳಿ ಎರಡೂವರೆ ವರ್ಷದ ಪುಟ್ಟ ಕಂದನಿಗಾಗಿ ಹಣ ಸಂಗ್ರಹ ಮಾಡಿದ್ದಾರೆ. ಸುಮಾರು 21 ಸಾವಿರ ರೂಪಾಯಿಯನ್ನು ಸಂಗ್ರಹಿಸಿ ಅದನ್ನು ಮಗುವಿಗೆ ತಲುಪಿಸಿದ್ದಾರೆ. ಈ ಮೂಲಕ ಮಂಗಳಮುಖಿಯರು ಮಾನವೀಯತೆ ಮೆರೆದಿದ್ದಾರೆ. ಈ ಹಣ ಸಣ್ಣ ಮೊತ್ತದ್ದೇ ಆಗಿದ್ದರೂ ಮಗುವಿಗಾಗಿ ಮಿಡಿದ ಮಂಗಳಮುಖಿಯರ ಮಾನವೀಯತೆ ಬೆಲೆ ಕಟ್ಟಲಾಗದ್ದು.

ತಂಡದಿಂದ ಹತ್ತು ಹಲವು ಸಮಾಜ ಕಾರ್ಯ
ಉಡುಪಿ ಜಿಲ್ಲೆಯಲ್ಲಿ ಆಶ್ರಯ ಸಮುದಾಯ ಎಂಬ ಸಂಘಟನೆಯನ್ನು ಮಂಗಳಮುಖಿಯರು ಮಾಡಿಕೊಂಡಿದ್ದಾರೆ. ಇದರಲ್ಲಿ 283 ಸದಸ್ಯರಿದ್ದಾರೆ. ಪಿಯುಸಿ ಮಾಡಿದವರು, ಪದವಿ ಮಾಡಿದವರು, ಎಂಬಿಎ ಕಲಿತವರು ಮತ್ತು ಬಿಬಿಎಂ ಕಲಿತವರು ಈ ಸಂಘಟನೆಯಲ್ಲಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಸಮೀಕ್ಷಾ ಎಂಬಾಕೆಯ ತಂಡ ಉಡುಪಿಯ ಬಸ್ ನಿಲ್ದಾಣದಲ್ಲಿದ್ದ ನಿರ್ಗತಿಕರು, ಅಶಕ್ತರು ಮತ್ತು ಮನೆಯಿಲ್ಲದವರಿಗೆ ಊಟ ನೀಡಿದೆ. ಸಮೀಕ್ಷಾ ಎಂಬಾಕೆ ತನ್ನ ಸ್ವಂತ ದುಡ್ಡಿನಲ್ಲಿ ಹತ್ತು ಮನೆಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದಾರೆ. ಎರಡೂವರೆ ವರ್ಷದ ಹೆಣ್ಣು ಮಗುವಿನ ಆಪರೇಷನ್ ಗಾಗಿ ಯಾವುದೇ ಪ್ರಚಾರ ಬಯಸದೆ ಹಣ ಸಂಗ್ರಹ ಮಾಡಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿರುವ ಜನರಿಗೂ ಮಾದರಿಯಾಗಿದ್ದಾರೆ.

"ಮಂಗಳಮುಖಿಯರ ಬಗ್ಗೆ ಅರಿವು ಮೂಡಿಸಬೇಕು"
ಮಂಗಳಮುಖಿಯರ ಬಗ್ಗೆ ಈ ಸಮಾಜದಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಜನಸಾಮಾನ್ಯರಲ್ಲಿ ಈ ಕುರಿತು ಅರಿವು ಮೂಡಿಸಬೇಕು. ಮಾನವೀಯ ನೆಲೆಯಲ್ಲಿ ಇವರಿಗೂ ಮೀಸಲಾತಿ ಒದಗಿಸಬೇಕು. ಮಂಗಳಮುಖಿಯರನ್ನೂ ಮುಖ್ಯವಾಹಿನಿಗೆ ತರುವ ಪ್ರಯತ್ನ ಆಗಬೇಕು. ಶಾಲಾ ಹಂತದಲ್ಲೇ ಮಂಗಳಮುಖಿಯರ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರೆ ಮಂಗಳಮುಖಿಯರ ಕುರಿತು ಸಮಾಜಕ್ಕೆ ಬೇರೆಯೇ ದೃಷ್ಟಿಕೋನ ಬರುತ್ತದೆ ಎನ್ನುತ್ತಾರೆ ಮಂಗಳಮುಖಿಯರು ಮತ್ತು ಪರಿತ್ಯಕ್ತರ ಬಗ್ಗೆ ಸಾಮಾಜಿಕ ಕೆಲಸ ಮಾಡುತ್ತಿರುವ ಆಪ್ತಸಮಾಲೋಚಕಿ ಜಯಶ್ರೀ ಭಟ್.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications