Twitter: ಸಂಸ್ಥೆಯಲ್ಲಿ ಎಲಾನ್ ಮಸ್ಕ್ ಪಾತ್ರವೇನು? ಇಲ್ಲಿದೆ ಮಾಹಿತಿ
ವಾಸಿಂಗ್ಟನ್, ನವೆಂಬರ್ 1: ಟ್ವಿಟ್ಟರ್ನ ಹೊಸ ಮುಖ್ಯಸ್ಥ ಎಲಾನ್ ಮಸ್ಕ್ ಅವರು ದೊಡ್ಡ ಕ್ರಮವನ್ನು ಕೈಗೊಂಡಿದ್ದಾರೆ. ಅವರು ಟ್ವಿಟ್ಟರ್ ಮಂಡಳಿಯ ನಿರ್ದೇಶಕರನ್ನು ತೆಗೆದು ಹಾಕಿದ್ದಾರೆ. ವಿಲೀನದ ದಾಖಲೆಗಳ ಪ್ರಕಾರ, ಎಲಾನ್ ಮಸ್ಕ್ ಈಗ ಕಂಪನಿಯ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಸೋಮವಾರ ಅವರು ಹೊಸ ಅರ್ಜಿಯೊಂದನ್ನು ಸಲ್ಲಿಸಿದ್ದಾರೆ. ಕಂಪನಿಯ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂಬತ್ತು ಮಂದಿಯನ್ನು ವಜಾಗೊಳಿಸಲಾಗುತ್ತಿದ್ದು, ಎಲಾನ್ ಮಸ್ಕ್ ಮಾತ್ರ ನಿರ್ದೇಶಕ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಆ ಅರ್ಜಿಯಲ್ಲಿ ಹೇಳಲಾಗಿದೆ. ಅಂದಹಾಗೆ, ಈಗ ಉದ್ಯಮಿ ಎಲಾನ್ ಮಸ್ಕ್ ಟ್ವಿಟ್ಟರ್ ಕಂಪನಿಯ ಏಕೈಕ ನಿರ್ದೇಶಕರಾಗಿದ್ದಾರೆ.
ಟ್ವಿಟ್ಟರ್ನ ಹೊಸ ಮುಖ್ಯಸ್ಥ ಎಲಾನ್ ಮಸ್ಕ್ ಅವರು ದೊಡ್ಡ ಕ್ರಮವನ್ನು ಕೈಗೊಂಡು ಮಂಡಳಿಯ ಎಲ್ಲಾ ನಿರ್ದೇಶಕರನ್ನು ತೆಗೆದುಹಾಕಿದ್ದಾರೆ. ಇದರೊಂದಿಗೆ ಅವರು ಕಂಪನಿಯ ಸಂಪೂರ್ಣ ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ.
ಎಲಾನ್ ಮಸ್ಕ್ ಕಂಪನಿಯ ಏಕೈಕ ನಿರ್ದೇಶಕರಾಗಿದ್ದಾರೆ. ಟ್ವಿಟ್ಟರ್ ಸಿಇಒ ಆಗಿದ್ದ ಪರಾಗ್ ಅಗರ್ವಾಲ್ ಮತ್ತು ಕಂಪನಿಯ ಇತರ ಹಲವು ಕಾರ್ಯನಿರ್ವಾಹಕರನ್ನು ಮಸ್ಕ್ ಅವರು ವಜಾಗೊಳಿಸಿದ್ದರು. ಟ್ವಿಟ್ಟರ್ನಲ್ಲಿ ತಮ್ಮ ಏಕಸ್ವಾಮ್ಯವನ್ನು ಬಲಪಡಿಸಲು ಮಸ್ಕ್ ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಟ್ವಿಟ್ಟರ್ ಮಂಡಳಿಯಲ್ಲಿದ್ದ ಒಂಬತ್ತು ಮಂದಿ
ಟ್ವಿಟ್ಟರ್ನ ಏಕೈಕ ನಿರ್ದೇಶಕರಾಗಿದ್ದೇನೆ ಎಂದು ಮಸ್ಕ್ ಬಹಿರಂಗಪಡಿಸಿದರು. 'ವಿಲೀನ ಅನುಷ್ಟಾನಕ್ಕೂ ಮೊದಲು ಟ್ವಿಟ್ಟರ್ನ ನಿರ್ದೇಶಕರಾಗಿದ್ದ ಈ ಕೆಳಗಿನ ವ್ಯಕ್ತಿಗಳು ಇನ್ನು ಮುಂದೆ ಟ್ವಿಟರ್ನ ನಿರ್ದೇಶಕರಾಗಿಲ್ಲವೆಂದು ಹೇಳಲಾಗಿದೆ. ಬ್ರೆಟ್ ಟೇಲರ್, ಪರಾಗ್ ಅಗರ್ವಾಲ್, ಒಮಿಡ್ ಕೊರ್ಡೆಸ್ತಾನಿ, ಡೇವಿಡ್ ರೋಸೆನ್ಬ್ಲಾಟ್, ಮಾರ್ಥಾ ಲೇನ್ ಫಾಕ್ಸ್, ಪ್ಯಾಟ್ರಿಕ್ ಪಿಚೆಟ್, ಎಗಾನ್ ಡರ್ಬನ್, ಫೀ- ಫೀ ಲೀ ಮತ್ತು ಮಿಮಿ ಅಲೆಮಾಯೆಹೌ ಅವರನ್ನು ಹೆಸರಿಸಲಾಗಿದೆ. ಮಂಡಳಿಯನ್ನು ವಿಸರ್ಜಿಸುವ ಕ್ರಮವು 'ಕೇವಲ ತಾತ್ಕಾಲಿಕ' ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ.

ಎಲಾನ್ ಮಸ್ಕ್ ಸಿಎಒ: ಕಂಪನಿ ಹೇಳಿಕೆ
ಎಲಾನ್ ಮಸ್ಕ್ ಸೋಮವಾರ ಸಂಸ್ಥೆಯ ಪರವಾಗಿ ಹೇಳಿಕೆ ನೀಡಿ ಈ ಕುರಿತು ಮಾಹಿತಿ ನೀಡಿದ್ದಾರೆ. ವಿಲೀನ ಒಪ್ಪಂದಗಳ ನಿಯಮಗಳಿಗೆ ಅನುಸಾರವಾಗಿ, ಟ್ವಿಟ್ಟರ್ನ ಎಲ್ಲಾ ನಿರ್ದೇಶಕರ ಮಂಡಳಿಯನ್ನು ತೆಗೆದುಹಾಕಲಾಗಿದೆ ಎಂದು ಹೇಳಿದೆ. ಈ ಮೂಲಕ ಇತ್ತೀಚೆಗೆ ಕಂಪನಿಯಿಂದ ವಜಾಗೊಂಡಿರುವ ಮಾಜಿ ಸಿಇಒ ಪರಾಗ್ ಅಗರ್ವಾಲ್ ಮತ್ತು ಅಧ್ಯಕ್ಷ ಬ್ರೆಟ್ ಟೇಲರ್ ಕೂಡ ಕಂಪನಿಯ ಮಾಜಿ ನಿರ್ದೇಶಕರಾಗಿ ನಿಲ್ಲುತ್ತಾರೆ. ಈ ಹೇಳಿಕೆಯ ಪ್ರಕಾರ, ಈಗ ಎಲಾನ್ ಮಸ್ಕ್ ಟ್ವಿಟ್ಟರ್ನ ಏಕೈಕ ನಿರ್ದೇಶಕರಾಗಲಿದ್ದಾರೆ.

$ 44 ಬಿಲಿಯನ್ ಒಪ್ಪಂದದ ನಂತರ ಟ್ವಿಟ್ಟರ್ನ ಮಾಲೀಕ
ಗಮನಾರ್ಹವಾಗಿ ಸುಮಾರು $ 44 ಬಿಲಿಯನ್ ಮೌಲ್ಯದ ಒಪ್ಪಂದದ ನಂತರ ಮಸ್ಕ್ ಟ್ವಿಟ್ಟರ್ನ ಮಾಲೀಕರಾಗಿದ್ದಾರೆ. ಇದರ ನಂತರ, ಅವರು ಕಂಪನಿಯ ಸಿಇಒ ಪರಾಗ್ ಅಗರ್ವಾಲ್ ಸೇರಿದಂತೆ ನಾಲ್ವರು ಅಧಿಕಾರಿಗಳಿಗೆ ಪ್ರಮುಖ ಹುದ್ದೆಯಿಂದ ವಜಾಗೊಳಿಸಿದ್ದಾರೆ. ಇದಲ್ಲದೇ ನೀತಿ ಮತ್ತು ಕಾನೂನು ಮುಖ್ಯಸ್ಥ ವಿಜಯಾ ಗಡ್ಡೆ ಅವರನ್ನು ವಜಾಗೊಳಿಸಿದ್ದಾರೆ.
ಕಂಪನಿಯ ಕಂಟೆಂಟ್ ಮಾಡರೇಶನ್ ನೀತಿಗಳನ್ನು ಮರುಪರಿಶೀಲಿಸಲು ಮಸ್ಕ್ ಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಈ ಹಿಂದೆ ಸಾಮಾಜಿಕ ಮಾಧ್ಯಮದ ನೀತಿಗಳನ್ನು ಉಲ್ಲಂಘಿಸಿದ ಜನರನ್ನು ಶಾಶ್ವತವಾಗಿ ನಿರ್ಬಂಧಿಸುವ ಯೋಜನೆಯೂ ನಡೆಯುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ಅಧಿಕಾರಿಗಳ ತೆಗೆದುಹಾಕುವಿಕೆಯ ಬಗ್ಗೆ ಪ್ರತಿಕ್ರಿಯಿಸಲು ಸದ್ಯ ಟ್ವಿಟ್ಟರ್ ನಿರಾಕರಿಸಿದೆ. ಆದರೆ ಮಸ್ಕ್ ಅವರ ಈ ಕ್ರಮ ಟ್ವಿಟರ್ ಉದ್ಯೋಗಿಗಳಲ್ಲಿ ತಲ್ಲಣ ಮೂಡಿಸಿದೆ. ಮಸ್ಕ್ ಪರವಾಗಿ ಟ್ವಿಟ್ಟರ್ ಉದ್ಯೋಗಿಗಳಿಗೆ ಅವರು ಶೇಕಡಾ 75ರಷ್ಟು ಉದ್ಯೋಗಿಗಳನ್ನು ವಜಾ ಮಾಡುವುದಿಲ್ಲ ಎಂದು ಭರವಸೆ ನೀಡಿದೆ. ಆದರೆ, ಈ ಹಿಂದೆ ಮಸ್ಕ್ ಟ್ವಿಟ್ಟರ್ ಉದ್ಯೋಗಿಗಳಿಂದ ಶೇಕಡಾ 75 ಅಥವಾ 5,600 ಉದ್ಯೋಗಿಗಳನ್ನು ವಜಾಗೊಳಿಸಲಿದ್ದಾರೆ ಎಂದು ವರದಿಗಳು ಬಂದಿದ್ದವು. ಟೆಕ್ಕ್ರಂಚ್ ವರದಿಯ ಪ್ರಕಾರ, ಮಸ್ಕ್ ಬುಧವಾರ ತಡರಾತ್ರಿ ಟ್ವಿಟ್ಟರ್ ಪ್ರಧಾನ ಕಛೇರಿಗೆ ಭೇಟಿ ನೀಡಿದ್ದು, ತಾವು ಉದ್ಯೋಗಿಗಳನ್ನು ವಜಾ ಮಾಡುವುದಿಲ್ಲ ಎಂದು ಉದ್ಯೋಗಿಗಳಿಗೆ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರದವರೆಗೆ ಗಡುವು ನೀಡಿದ್ದ ನ್ಯಾಯಾಲಯ
ಎಲಾನ್ ಮಸ್ಕ್ ಟ್ವಿಟರ್ ಸ್ವಾಧೀನಪಡಿಸಿಕೊಂಡ ಮೇಲೆ ಹಲವಾರು ತಿಂಗಳುಗಳ ಕಾಲ ಇಕ್ಕಟ್ಟಿಗೆ ಸಿಲುಕಿದ್ದರು. ಟ್ವಿಟ್ಟರ್ನ ಸ್ವಾಧೀನವನ್ನು ಪೂರ್ಣಗೊಳಿಸಲು ಅಮೆರಿಕದ ನ್ಯಾಯಾಲಯವು ಶುಕ್ರವಾರದೊಳಗೆ ಗಡುವು ನೀಡಿತ್ತು. ಹಾಗೆ ಮಾಡಲು ವಿಫಲವಾದರೆ, ಡೆಲವೇರ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಬೇಕಾಗುತ್ತದೆ ಎಂದು ಮಸ್ಕ್ಗೆ ಎಚ್ಚರಿಕೆ ನೀಡಲಾಗಿತ್ತು. ಈ ಗಡುವಿನ ಮೊದಲು ಮಸ್ಕ್ ಶುಕ್ರವಾರ ಟ್ವಿಟ್ಟರ್ನ ಅಧಿಕಾರ ವಹಿಸಿಕೊಂಡರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications