Budget 2022; ಪಿಎಂ ಗತಿಶಕ್ತಿ ರಾಷ್ಟ್ರೀಯ ಯೋಜನೆ ವಿವರಗಳು
ನವದೆಹಲಿ, ಫೆಬ್ರವರಿ 01; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಪಿಎಂ ಗತಿಶಕ್ತಿ ಯೋಜನೆ ಬಗ್ಗೆ ಅವರು ವಿಷಯ ಪ್ರಸ್ತಾಪಿಸಿದರು. ವಿವಿಧ ವಲಯಗಳ ಘೋಷಣೆಗಳನ್ನು ಮಾಡುವಾಗ ಈ ಯೋಜನೆ ಬಗ್ಗೆ ಅವರು ಪ್ರಸ್ತಾಪ ಮಾಡಿದರು.
ಮಂಗಳವಾರ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದರು. ಪಿಎಂ ಗತಿಶಕ್ತಿ ಯೋಜನೆಯಡಿ ರಾಷ್ಟ್ರೀಯ ಹೆದ್ದಾರಿ ಜಾಲವನ್ನು 25,000 ಕಿ. ಮೀ. ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದರು. ಪಿಎಂ ಗತಿಶಕ್ತಿ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ ಸರಕು ಸಾಗಣೆಗಾಗಿ 100 ಕಾರ್ಗೊ ರೈಲು ನಿಲ್ದಾಣಗಳನ್ನು ಸಹ ನಿರ್ಮಾಣ ಮಾಡಲಾಗುತ್ತದೆ ಎಂದು ಬಜೆಟ್ ಭಾಷಣದಲ್ಲಿ ಹೇಳಿದರು.
2021ರ ಅಕ್ಟೋಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಪ್ರಗತಿ ಮೈದಾನದಲ್ಲಿ ಪಿಎಂ ಗತಿಶಕ್ತಿ ಯೋಜನೆಗೆ ಚಾಲನೆ ನೀಡಿದರು. ದೇಶದ ಮೂಲ ಸೌಕರ್ಯ ಅಭಿವೃದ್ಧಿಯಲ್ಲಿ ಇದೊಂದು ಐತಿಹಾಸಿಕ ಹೆಜ್ಜೆ ಎಂದು ಬಣ್ಣಿಸಲಾಗುತ್ತಿದೆ. ಬಹುಮಾದರಿ ಸಂಪರ್ಕ ಏರ್ಪಡಿಸುವ 100 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆ ಇದಾಗಿದೆ. ಸಾಗಣೆ ವೆಚ್ಚ ಕಡಿಮೆ ಮಾಡುವ, ಆರ್ಥಿಕತೆ ಉತ್ತೇಜಿಸುವ ಜೊತೆ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ಗುರಿಯನ್ನು ಯೋಜನೆ ಹೊಂದಿದೆ.

ಯೋಜನೆಯು ಎಲ್ಲಾ ಸಂಬಂಧಿತ ಇಲಾಖೆಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ಮೂಲಕ ಯೋಜನೆ ಪೂರ್ಣಗೊಳಿಸಲು ಹೆಚ್ಚು ಶಕ್ತಿ ಮತ್ತು ವೇಗವನ್ನು ನೀಡುತ್ತದೆ. ಈ ಮೂಲಕ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳ ಮೂಲಸೌಕರ್ಯ ಯೋಜನೆಗಳನ್ನು ಒಂದೇ ದೃಷ್ಟಿಕೋನದಿಂದ ವಿನ್ಯಾಸಗೊಳಿಸಿ ಕಾರ್ಯಗತಗೊಳಿಸಲಾಗುತ್ತದೆ.
ದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಹಲವು ಸಮಸ್ಯೆಗಳಿವೆ. ವಿವಿಧ ಇಲಾಖೆಗಳ ನಡುವೆ ಸಮನ್ವಯದ ಕೊರತೆಯೂ ಇದೆ. ಒಮ್ಮೆ ರಸ್ತೆ ನಿರ್ಮಾಣ ಮಾಡಿದರೆ ಇತರ ಸಂಸ್ಥೆಗಳು ಕೇಬಲ್ ಅಳವಡಿಕೆಗಾಗಿ, ಅನಿಲ ಕೊಳವೆ ಮಾರ್ಗ ನಿರ್ಮಿಸಲು ಮತ್ತೆ ರಸ್ತೆಯನ್ನು ಅಗೆಯುತ್ತಾರೆ. ಇದರಿಂದ ಅನಾನುಕೂಲತೆ ಆಗುವುದಷ್ಟೇ ಅಲ್ಲ, ಇದು ಆರ್ಥಿಕ ವೆಚ್ಚವೂ ಆಗುತ್ತದೆ.
ಇಂತಹ ಸಮನ್ವಯತೆ ಕೊರತೆ ಪರಿಹರಿಸಲು ಯೋಜನೆ ನೆರವಾಗಲಿದದೆ. ಕೇಬಲ್, ಕೊಳವೆ ಮಾರ್ಗ ಅಳವಡಿಕೆ ಇತ್ಯಾದಿಗಳನ್ನು ಏಕಕಾಲದಲ್ಲಿ ಪೂರ್ಣಗೊಳಿಸಲು ಸಮನ್ವಯತೆ ತರಲು ಪ್ರಯತ್ನ ನಡೆದಿದೆ. ಈ ಯೋಜನೆಯಡಿ ಅನುಮೋದನೆ ಪ್ರಕ್ರಿಯೆ, ಬಹು ನಿಯಂತ್ರಣ ಅನುಮತಿ ಇತ್ಯಾದಿಗಳನ್ನೂ ಪರಿಹರಿಸಲು ಕ್ರಮ ಕೊಳ್ಳಲಾಗಿದೆ. ಮೂಲಸೌಕರ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಕೋನ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಯೋಜನೆಯಡಿ ಕೇಂದ್ರದ ವಿವಿಧ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳ ಅಂದರೆ ಭಾರತ್ ಮಾಲಾ, ಸಾಗರ ಮಾಲಾ, ಒಳನಾಡ ಜಲ ಸಾರಿಗೆ, ಒಣ/ ಭೂಮಿ ಬಂದರುಗಳು, ಉಡಾನ್ ಇತ್ಯಾದಿ, ರಕ್ಷಣಾ ಕಾರಿಡಾರ್, ವಿದ್ಯುನ್ಮಾನ ಉದ್ಯಾನಗಳು, ಕೈಗಾರಿಕಾ ಕಾರಿಡಾರ್, ಮೀನುಗಾರಿಕೆ, ಕೃಷಿ ವಲಯಗಳನ್ನು ಮೂಲಸೌಕರ್ಯ ಯೋಜನೆಗಳಲ್ಲಿ ಸೇರ್ಪಡೆ ಮಾಡಲಾಗುತ್ತದೆ.
ಈ ಮೂಲಕ ಪ್ರತ್ಯೇಕವಾಗಿ ಯೋಜನೆ, ವಿನ್ಯಾಸ ಮಾಡುವುದರ ಬದಲಾಗಿ, ಯೋಜನೆಗಳನ್ನು ಸಮಾನ ದೃಷ್ಟಿಯೊಂದಿಗೆ ವಿನ್ಯಾಸ ಮಾಡಿ ಅನುಷ್ಠಾನಗೊಳಿಸಲಾಗುತ್ತದೆ. ಇದರಿಂದಾಗಿ ಕಾಮಗಾರಿಗೆ ವೇಗ, ಶಕ್ತಿ ದೊರೆಯುವ ಜೊತೆಗೆ ಆರ್ಥಿಕ ವೆಚ್ಚ ಸಹ ಕಡಿಮೆಯಾಗುತ್ತದೆ.
6 ಪ್ರಮುಖ ಅಂಶಗಳು; ಪಿಎಂ ಗತಿಶಕ್ತಿ ಯೋಜನೆ ಸಮಗ್ರತೆ, ಆದ್ಯತೆ, ಅತ್ಯಂತ ಪ್ರಶಸ್ತವಾಗಿಸುವುದು, ಸಮನ್ವಯತೆ, ವಿಶ್ಲೇಷಣಾತ್ಮಕತೆ, ಕ್ರಿಯಾತ್ಮಕತೆ ಎಂಬ ಆರು ಅಂಶಗಳನ್ನು ಒಳಗೊಂಡಿದೆ. ಉತ್ತಮ ಮೂಲಸೌಕರ್ಯದ ಜೊತೆಗೆ ಜನರ ಜೀವನಮಟ್ಟವನ್ನು ಉತ್ತಮಪಡಿಸುವ ಮತ್ತು ಅದರ ಜೊತೆಗೆ ವಾಣಿಜ್ಯೋದ್ಯಮಕ್ಕೂ ದಾರಿ ಮಾಡಿಕೊಡುವುದು ಯೋಜನೆಯ ಉದ್ದೇಶವಾಗಿದೆ.
ಬಹು ಮಾದರಿ ಸಂಪರ್ಕ, ಜನರ ಸಂಚಾರ, ಸರಕು ಮತ್ತು ಸೇವೆಗಳ ಸಾಗಾಟವನ್ನು ಒಂದು ಸಾರಿಗೆ ಮಾಧ್ಯಮದಿಂದ ಮತ್ತೊಂದಕ್ಕೆ ಸಾಗಿಸಲು ಸಮಗ್ರ ಮತ್ತು ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ. ಇದು ಮೂಲಸೌಕರ್ಯದ ಕೊನೆಯ ಮೈಲಿಯ ಸಂಪರ್ಕಕ್ಕೆ ಅನುವು ಮಾಡಿಕೊಡಲಿದ್ದು, ಜನರ ಸಂಚಾರದ ಸಮಯವನ್ನು ಸಹ ತಗ್ಗಿಸಲಿದೆ.
ಮುಂಬರುವ ಸಂಪರ್ಕ ಯೋಜನೆಗಳು, ಇತರ ವ್ಯಾಪಾರ ತಾಣಗಳು, ಕೈಗಾರಿಕಾ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪರಿಸರದ ಕುರಿತು ಸಾರ್ವಜನಿಕ ಮತ್ತು ವ್ಯಾಪಾರ ಸಮುದಾಯದ ಮಾಹಿತಿಯನ್ನು ಯೋಜನೆ ಒದಗಿಸುತ್ತದೆ. ಇದು ಹೂಡಿಕೆದಾರರಿಗೆ ತಮ್ಮ ವ್ಯಾಪಾರಕ್ಕೆ ಸೂಕ್ತ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲು ಸಹಾಯಕವಾಗಿದೆ.
ಯೋಜನೆಯಡಿ ಉದ್ಯೋಗವಕಾಶಗಳನ್ನು ಸೃಷ್ಟಿಸಲಾಗುತ್ತದೆ ಮತ್ತು ಆರ್ಥಿಕತೆಗೆ ಉತ್ತೇಜನ ನೀಡುತ್ತದೆ. ಸಾಗಣೆ ವೆಚ್ಚವನ್ನು ಕಡಿತಗೊಳಿಸುವ ಮೂಲಕ ಮ ಸ್ಥಳೀಯ ಉತ್ಪನ್ನಗಳ ಜಾಗತಿಕ ಸ್ಪರ್ಧಾತ್ಮಕತೆಯನ್ನು ಸುಧಾರಿಸುತ್ತದೆ. ಸ್ಥಳೀಯ ಉದ್ಯಮ ಮತ್ತು ಗ್ರಾಹಕರಿಗೆ ಸರಿಯಾದ ಸಂಪರ್ಕವನ್ನು ಖಚಿತಪಡಿಸುತ್ತದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications