BJP Leader Wife: ಬಿಜೆಪಿ ನಾಯಕನ ಪತ್ನಿ ಪೊಲೀಸ್ ಕಾನ್ಸ್ಟೆಬಲ್ ಜೊತೆ ಪರಾರಿ
ಬಿಜೆಪಿ ನಾಯಕನ ಪತ್ನಿ ತನಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಪರಾರಿಯಾದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಭದೋಹಿಯ ಗೋಪಿಗಂಜ್ ನಗರದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ನಾಯಕ ಸ್ಥಳೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದರು. ಈತನ ಪತ್ನಿ ಕೂಡ ಬಿಜೆಪಿ ಸದಸ್ಯೆಯಾಗಿದ್ದು, ಈ ಹಿಂದೆ ಸ್ಥಳೀಯ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
45 ವರ್ಷದ ಬಿಜೆಪಿ ನಾಯಕನ ಪತ್ನಿ ತನಗಿಂತ 15 ವರ್ಷ ಕಿರಿಯ ಪೊಲೀಸ್ ಸಿಬ್ಬಂದಿಯೊಂದಿಗೆ ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬಿಜೆಪಿ ಮುಖಂಡ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುಮಾರು ಒಂದು ವರ್ಷದ ಹಿಂದೆ ಗೊಂಡಾ ಮೂಲದ ವಿನಯ್ ತಿವಾರಿ (ಅಲಿಯಾಸ್ ರಾಜ್ ತಿವಾರಿ) ಎನ್ನುವಾತ ನನ್ನ ಮನೆಯ ಕೊಠಡಿಯೊಂದನ್ನು ಬಾಡಿಗೆಗೆ ಪಡೆದಿದ್ದನ್ನು. ನನ್ನಿಂದಲೇ ಸಹಾಯ ಪಡೆದ ಆತ ನನಗೆ ಗೊತ್ತಿಲ್ಲದೇ ನನ್ನ ಪತ್ನಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆ. ಮೊದಲು ಸ್ನೇಹ ಬಳಿಕ ಪ್ರೀತಿಯೆಂದು ಯಾಮಾರಿಸಿ ನನ್ನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದನ್ನು.
ಪ್ರೀತಿ ಹಾಗೂ ಸುಳ್ಳಿ ಭರವಸೆಗಳನ್ನು ಆಕೆ ನೀಡಿ ತನ್ನ ಬಲೆಗೆ ಬೀಳಿಸಿಕೊಂಡಿದ್ದನ್ನು. ಬಳಿಕ ಆಕೆಯ ಜೊತೆ ಸಲುಗೆಯಿಂದಿರುವ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದನ್ನು. ತನ್ನ ಜೊತೆಗಿನ ಸಂಬಂಧವನ್ನು ಎಲ್ಲರಿಗೆ ತಿಳಿಸುವುದಾಗಿ ಆಕೆಯನ್ನು ಬೆದರಿಸಿ ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ ಎಂದು ಬಿಜೆಪಿ ಮುಖಂಡ ಆರೋಪಿಸಿದ್ದಾರೆ.
ಮನೆಯಲ್ಲಿದ್ದ ₹2.5 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣವನ್ನು ಪತ್ನಿ ಹಾಗೂ ಕಾನ್ಸ್ಟೆಬಲ್ ತೆಗೆದುಕೊಂಡು ಹೋಗಿದ್ದಾರೆ. ಆತ ಹಣಕ್ಕಾಗಿ ನನ್ನ ಹೆಂಡತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ಆತನೊಂದಿಗಿರುವ ನನ್ನ ಹೆಂಡತಿಯ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಈ ಹಿಂದೆ ಇವರ ಸಂಬಂಧದ ಬಗ್ಗೆ ತಿಳಿದು ಬರುತ್ತಿದ್ದಂತೆ ಆತನಿಗೆ ಮನೆಯನ್ನು ಖಾಲಿ ಮಾಡುವಂತೆ ಹೇಳಿ ನನ್ನ ಹೆಂಡತಿಗೆ ಬುದ್ಧಿ ಹೇಳಿದ್ದೆ. ಆದರೆ ಅದು ಪ್ರಯೋಜನವಾಗಲಿಲ್ಲ. ಈ ಬಳಿಕ ಇಬ್ಬರು ಸ್ವಲ್ಪ ಸಮಯ ತೆಗೆದುಕೊಂಡು ಸಂಚು ರೂಪಿಸಿ ಮನೆಯಿಂದ ಹಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಇಬ್ಬರು ನಾಪತ್ತೆಯಾಗಲು ಸ್ಥಳೀಯರು ಕೂಡ ಸಹಾಯ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಆರೋಪಿಸಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಮಹಿಳೆ ಮತ್ತು ಕಾನ್ಸ್ಟೆಬಲ್ಗಾಗಿ ಹುಡುಕಾಟ ಆರಂಭಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications