BJP Leader Wife: ಬಿಜೆಪಿ ನಾಯಕನ ಪತ್ನಿ ಪೊಲೀಸ್ ಕಾನ್ಸ್ಟೆಬಲ್ ಜೊತೆ ಪರಾರಿ
ಬಿಜೆಪಿ ನಾಯಕನ ಪತ್ನಿ ತನಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಪರಾರಿಯಾದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಭದೋಹಿಯ ಗೋಪಿಗಂಜ್ ನಗರದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ನಾಯಕ ಸ್ಥಳೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದರು. ಈತನ ಪತ್ನಿ ಕೂಡ ಬಿಜೆಪಿ ಸದಸ್ಯೆಯಾಗಿದ್ದು, ಈ ಹಿಂದೆ ಸ್ಥಳೀಯ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
45 ವರ್ಷದ ಬಿಜೆಪಿ ನಾಯಕನ ಪತ್ನಿ ತನಗಿಂತ 15 ವರ್ಷ ಕಿರಿಯ ಪೊಲೀಸ್ ಸಿಬ್ಬಂದಿಯೊಂದಿಗೆ ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬಿಜೆಪಿ ಮುಖಂಡ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುಮಾರು ಒಂದು ವರ್ಷದ ಹಿಂದೆ ಗೊಂಡಾ ಮೂಲದ ವಿನಯ್ ತಿವಾರಿ (ಅಲಿಯಾಸ್ ರಾಜ್ ತಿವಾರಿ) ಎನ್ನುವಾತ ನನ್ನ ಮನೆಯ ಕೊಠಡಿಯೊಂದನ್ನು ಬಾಡಿಗೆಗೆ ಪಡೆದಿದ್ದನ್ನು. ನನ್ನಿಂದಲೇ ಸಹಾಯ ಪಡೆದ ಆತ ನನಗೆ ಗೊತ್ತಿಲ್ಲದೇ ನನ್ನ ಪತ್ನಿಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆ. ಮೊದಲು ಸ್ನೇಹ ಬಳಿಕ ಪ್ರೀತಿಯೆಂದು ಯಾಮಾರಿಸಿ ನನ್ನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದನ್ನು.
ಪ್ರೀತಿ ಹಾಗೂ ಸುಳ್ಳಿ ಭರವಸೆಗಳನ್ನು ಆಕೆ ನೀಡಿ ತನ್ನ ಬಲೆಗೆ ಬೀಳಿಸಿಕೊಂಡಿದ್ದನ್ನು. ಬಳಿಕ ಆಕೆಯ ಜೊತೆ ಸಲುಗೆಯಿಂದಿರುವ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದನ್ನು. ತನ್ನ ಜೊತೆಗಿನ ಸಂಬಂಧವನ್ನು ಎಲ್ಲರಿಗೆ ತಿಳಿಸುವುದಾಗಿ ಆಕೆಯನ್ನು ಬೆದರಿಸಿ ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ ಎಂದು ಬಿಜೆಪಿ ಮುಖಂಡ ಆರೋಪಿಸಿದ್ದಾರೆ.
ಮನೆಯಲ್ಲಿದ್ದ ₹2.5 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣವನ್ನು ಪತ್ನಿ ಹಾಗೂ ಕಾನ್ಸ್ಟೆಬಲ್ ತೆಗೆದುಕೊಂಡು ಹೋಗಿದ್ದಾರೆ. ಆತ ಹಣಕ್ಕಾಗಿ ನನ್ನ ಹೆಂಡತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ಆತನೊಂದಿಗಿರುವ ನನ್ನ ಹೆಂಡತಿಯ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಈ ಹಿಂದೆ ಇವರ ಸಂಬಂಧದ ಬಗ್ಗೆ ತಿಳಿದು ಬರುತ್ತಿದ್ದಂತೆ ಆತನಿಗೆ ಮನೆಯನ್ನು ಖಾಲಿ ಮಾಡುವಂತೆ ಹೇಳಿ ನನ್ನ ಹೆಂಡತಿಗೆ ಬುದ್ಧಿ ಹೇಳಿದ್ದೆ. ಆದರೆ ಅದು ಪ್ರಯೋಜನವಾಗಲಿಲ್ಲ. ಈ ಬಳಿಕ ಇಬ್ಬರು ಸ್ವಲ್ಪ ಸಮಯ ತೆಗೆದುಕೊಂಡು ಸಂಚು ರೂಪಿಸಿ ಮನೆಯಿಂದ ಹಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಇಬ್ಬರು ನಾಪತ್ತೆಯಾಗಲು ಸ್ಥಳೀಯರು ಕೂಡ ಸಹಾಯ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಆರೋಪಿಸಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಮಹಿಳೆ ಮತ್ತು ಕಾನ್ಸ್ಟೆಬಲ್ಗಾಗಿ ಹುಡುಕಾಟ ಆರಂಭಿಸಿದ್ದಾರೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications