ಯೋಗಿ ಸಂಪುಟ; ಡಿಸಿಎಂ ಬ್ರಜೇಶ್ ಪಾಠಕ್ ಪರಿಚಯ
ಲಕ್ನೋ, ಮಾರ್ಚ್ 25; ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಆಡಳಿತ ಆರಂಭವಾಗಿದೆ. ಮುಖ್ಯಮಂತ್ರಿಯಾಗಿ ಶುಕ್ರವಾರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ಬ್ರಜೇಶ್ ಪಾಠಕ್ ಉಪಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಸಂಪುಟ ಸೇರಿದ್ದಾರೆ.
57 ವರ್ಷದ ಬ್ರಜೇಶ್ ಪಾಠಕ್ ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯದ ಪ್ರಭಾವಿ ನಾಯಕ. ಉಪ ಮುಖ್ಯಮಂತ್ರಿಯಾಗಿ, ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಕಾನೂನು, ನ್ಯಾಯಾಂಗ, ಗ್ರಾಮೀಣ ಇಂಜಿನಿಯರಿಂಗ್ ಖಾತೆಗಳನ್ನು ನಿರ್ವಹಣೆ ಮಾಡಿದ್ದಾರೆ. ಬ್ರಜೇಶ್ ಪಾಠಕ್ ಸಂಘ ಪರಿವಾರದ ಮೂಲಕ ರಾಜಕೀಯ ಆರಂಭ ಮಾಡಿದವರಲ್ಲ. ಮೊದಲು ಕಾಂಗ್ರೆಸ್ನಲ್ಲಿದ್ದ ಅವರು ಬಳಿಕ ಬಿಎಸ್ಪಿ ಸೇರಿದ್ದರು.

1964ರ ಜೂನ್ 25ರಂದು ಹರೋಡಿ ಜಿಲ್ಲೆಯ ಮಲ್ಲವನ್ನಲ್ಲಿ ಬ್ರಜೇಶ್ ಪಾಠಕ್ ಜನಿಸಿದರು. ತಂದೆ ಸುರೇಶ್ ಪಾಠಕ್ ವಕೀಲರಾಗಿದ್ದರು. ಬ್ರಜೇಶ್ ಲಕ್ನೋ ವಿಶ್ವವಿದ್ಯಾಲಯದಿಂದ ಎಲ್ಎಲ್ಬಿ ಪದವಿ ಪಡೆದರು.
90ರ ದಶಕದಲ್ಲಿಯೇ ಕಾಂಗ್ರೆಸ್ ಮೂಲಕ ಬ್ರಜೇಶ್ ಪಾಠಕ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು. 2002ರಲ್ಲಿ ಮಲ್ಲವನ್ ಕ್ಷೇತ್ರದಿಂದ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದರು. ಆದರೆ ಬಿಎಸ್ಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡರು.
ಬಳಿಕ ಅವರು ಬಿಎಸ್ಪಿ ಸೇರಿದರು. ಆದರೆ ಪಕ್ಷ 2004ರ ಲೋಕಸಭೆ ಚುನಾವಣೆಯಲ್ಲಿ ಉನ್ನಾವ್ ಕ್ಷೇತ್ರದಿಂದ ಪಕ್ಷ ಟಿಕೆಟ್ ನೀಡಿತು. ಚುನಾವಣೆಯಲ್ಲಿ ಬ್ರಜೇಶ್ ಪಾಠಕ್ ಗೆಲುವು ಸಾಧಿಸಿದರು.
2009ರಲ್ಲಿ ಬಿಎಸ್ಪಿ ಪಕ್ಷ ಅವರನ್ನು ರಾಜ್ಯಸಭೆಗೆ ಕಳುಹಿಸಿತು ಮತ್ತು 2014ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ 2016ರಲ್ಲಿ ಬ್ರಜೇಶ್ ಪಾಠಕ್ ಬಿಜೆಪಿ ಸೇರಿದರು. ಲಕ್ನೋ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದರು ಮತ್ತು ಬಿಜೆಪಿ ಸರ್ಕಾರದಲ್ಲಿ ಸಚಿವರಾದರು.
ಬ್ರಜೇಶ್ ಪಾಠಕ್ ಪತ್ನಿ ನಮ್ರತಾ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಉನ್ನಾವ್ ಸರ್ದಾರ್ ಕ್ಷೇತ್ರದಲ್ಲಿ 2012ರ ಚುನಾವಣೆಯಲ್ಲಿ ಸೋತ ಅವರು ಮಾಯಾವತಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಹಿಳಾ ಆಯೋಗದ ಉಪಾಧ್ಯಕ್ಷೆಯಾಗಿದ್ದರು.
2017ರ ಚುನಾವಣೆಯಲ್ಲಿ ಬ್ರಜೇಶ್ ಪಾಠಕ್ ಲಕ್ನೋ ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರು ಮತ್ತು ಗೆಲವು ಸಾಧಿಸಿ ಸಚಿವರಾದರು.
Recommended Video
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications