Uttarakhand K News Exit Poll 2022: 'ಕೈ' ಹಿಡಿಯುವ ಮತದಾನ
ಡೆಹ್ರಾಡೂನ್, ಮಾರ್ಚ್ 07: ಉತ್ತರಾಖಂಡದ 70 ವಿಧಾನಸಭೆ ಚುನಾವಣೆಯಲ್ಲಿ ಪ್ರಜೆಗಳು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ. ಯಾರಿಗೆ ಮುಂದಿನ ಅಧಿಕಾರ ಎಂಬುದಕ್ಕೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ನೀಡಿವೆ. ಕಳೆದ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ನಡೆದ ಮತದಾನದ ಭವಿಷ್ಯ ಮಾರ್ಚ್ 10ರಂದು ಹೊರ ಬೀಳಲಿದೆ.
ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 7ರ ಸಂಜೆ 6.30ರವರೆಗೂ ಯಾವುದೇ ರೀತಿ ಚುನಾವಣಾ ಸಮೀಕ್ಷೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಿತ್ತು. ಈ ಹಿನ್ನೆಲೆ ಆಯೋಗದ ಸೂಚನೆ ಮೇರೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಹಲವು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ಪ್ರಕಟಿಸಿವೆ. 70 ವಿಧಾನಸಭೆ ಕ್ಷೇತ್ರಗಳಲ್ಲಿ ಗದ್ದುಗೆ ಹಿಡಿಯಲು 36 ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ.
ಉತ್ತರಾಖಂಡದ 70 ವಿಧಾನಸಭೆ ಕ್ಷೇತ್ರಗಳ ಜನರ ನಾಡಿ ಮಿಡಿತ ಮತ್ತು ರಾಜಕೀಯ ಬೆಳವಣಿಗೆಗಳ ಸುತ್ತ ಕೆ ನ್ಯೂಸ್ ಮತ್ತು ಪೀಪಲ್ಸ್ ಪಲ್ಸ್ ನಡೆಸಿರುವ ಮತದಾನೋತ್ತರ ಸಮೀಕ್ಷೆಯ ಕುರಿತು ಒಂದು ವರದಿ ಇಲ್ಲಿದೆ ಓದಿ.

ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಕಾಂಗ್ರೆಸ್ - 32 ರಿಂದ 37
ಬಿಜೆಪಿ - 30 ರಿಂದ 35
ಆಪ್ - 0 - 1
ಬಿಎಸ್ಪಿ - 0 - 1
ಇತರೆ - 0 - 1
ಉತ್ತರಾಖಂಡದಲ್ಲಿ ಶೇ.62.51ರಷ್ಟು ಮತದಾನ:
ಒಂದೇ ಹಂತದ ಉತ್ತರಾಖಂಡ ಚುನಾವಣೆಯಲ್ಲಿ ಅಂತಿಮ ಮತದಾನದ ಶೇಕಡಾವಾರು ಶೇಕಡಾ 62.51 ರಷ್ಟಿದೆ. ಹರಿದ್ವಾರದಲ್ಲಿ ಅತಿ ಹೆಚ್ಚು ಅಂದರೆ ಶೇ.68.37 ಮತ್ತು ಕಡಿಮೆ ಅಲ್ಮೋರಾ ಜಿಲ್ಲೆಯಲ್ಲಿ ಶೇ.50.65 ಅತೀ ಕಡಿಮೆ ಮತದಾನ ದಾಖಲಾಗಿದೆ. ಬಾಗೇಶ್ವರ್ ಶೇ.57.83, ಚಮೋಲಿ ಶೇ.59.28, ಚಂಪಾವತ್ ಶೇ.56.97, ಡೆಹ್ರಾಡೂನ್ ಶೇ.52.93, ನೈನಿತಾಲ್ ಶೇ.63.12, ಪೌರಿ ಗರ್ವಾಲ್ ಶೇ.51.93, ಪಿಥೋರಗಢ್ ಶೇ.57.49, ಸಿಂಗ್ ಶೇ.60. ಉದ್ರಪ್ರಯಾಗ್ ಶೇ.60. ಗರ್ಹ್ವಾಲ್ ಶೇ. ನಗರ ಶೇ.65.13 ಮತ್ತು ಉತ್ತರಕಾಶಿ ಜಿಲ್ಲೆಯಲ್ಲಿ ಶೇ.65.55ರಷ್ಟು ಮತದಾನವಾಗಿದೆ. ರಾಜ್ಯದಲ್ಲಿ 632 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಯಿತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications