Uttarakhand ABP CVoter Exit Poll 2022: ಯಾರಿಗೆ ಜಯ?
ನವ ದೆಹಲಿ ಮಾರ್ಚ್ 7: 2022ರ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆದಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ವಿಧಾನಸಭೆ ಚುನಾವಣೆಯ ನಂತರ ಇದೀಗ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನದೊಂದಿಗೆ, ಎಲ್ಲಾ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಪೂರ್ಣಗೊಂಡಿವೆ. ಈ ಐದು ರಾಜ್ಯಗಳು 690 ವಿಧಾನಸಭಾ ಸ್ಥಾನಗಳನ್ನು ಹೊಂದಿವೆ. ಚುನಾವಣೆ ಮುಗಿದ ನಂತರ ಮಾರ್ಚ್ 10 ರಂದು ಈ ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಐದು ರಾಜ್ಯಗಳ ಜನರ ಮನಸ್ಥಿತಿ ಅರಿಯುವ ಪ್ರಯತ್ನ ನಡೆದಿದೆ. ಟೈಮ್ಸ್ ನೌ ಸಿಓಟರ್ ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಉತ್ತರಾಖಂಡದಲ್ಲಿ ಯಾರಿಗೆ ಜಯ ಸಿಗಲಿದೆ ಎನ್ನುವುದನ್ನು ತಿಳಿಸಿದೆ.
ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಪೂರ್ಣಗೊಂಡಿದೆ. ಸೋಮವಾರ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಉತ್ತರಾಖಂಡ ರಾಜ್ಯದಲ್ಲಿ Times New Cvoter ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ 31 ಸ್ಥಾನಗಳನ್ನು ಪಡೆದರೆ ಬಿಜೆಪಿ 37 ಸ್ಥಾನಗಳನ್ನು ಪಡೆಯುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆ ಹೇಳಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಉತ್ತರಾಖಂಡ ವಿಧಾನಸಭೆ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ.
ಉತ್ತರಾಖಂಡ್ ಎಕ್ಸಿಟ್ ಪೋಲ್
ಟೈಮ್ಸ್ ನೌ ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಖಾತೆಯಲ್ಲಿ 37 ಸ್ಥಾನಗಳನ್ನು ಪಡೆಯಬಹುದು. ಕಾಂಗ್ರೆಸ್ 31 ಸ್ಥಾನಗಳನ್ನು ಪಡೆಯಬಹುದು. ಆಮ್ ಆದ್ಮಿ ಪಕ್ಷದ ಖಾತೆಯಲ್ಲಿ 1 ಸ್ಥಾನ ಉಳಿಯುವ ಸಾಧ್ಯತೆ ಇದ್ದು, ಇತರರ ಪಕ್ಷಗಳಿಗೆ 1 ಸ್ಥಾನ ಸಿಗಲಿದೆ.

ಬಿಜೆಪಿ: 37 ಸ್ಥಾನಗಳು
ಕಾಂಗ್ರೆಸ್: 31 ಸ್ಥಾನಗಳು
AAP: 1 ಸ್ಥಾನ
OTH: 1 ಮತ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications