'ವಂದೇ ಭಾರತ್ ಮಿಷನ್' ವಿಶ್ವದ ಅತಿ ದೊಡ್ಡ ರಕ್ಷಣಾ ಕಾರ್ಯಾಚರಣೆ
ಬೆಂಗಳೂರು, ಆಗಸ್ಟ್ 12 : 'ವಂದೇ ಭಾರತ್ ಮಿಷನ್' ವಿಶ್ವಮಟ್ಟದಲ್ಲಿ ಕಳೆದ 30 ವರ್ಷಗಳಲ್ಲಿ ನಡೆದ ಅತಿ ದೊಡ್ಡ ರಕ್ಷಣಾ ಕಾರ್ಯಾಚರಣೆಯಾಗಿದೆ. ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಣೆ ಮಾಡಲು ಸರ್ಕಾರ ಕೈಗೊಂಡ ಬೃಹತ್ ಕಾರ್ಯಾಚರಣೆ ಇದಾಗಿದೆ.
ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಯಿತು. ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಸಂಚಾರ ಸಂಪೂರ್ಣವಾಗಿ ರದ್ದಾಯಿತು. ಆಗ ಸರ್ಕಾರ ವಿದೇಶದಿಂದ ಭಾರತೀಯರನ್ನು ಕರೆತರಲು 'ವಂದೇ ಭಾರತ್ ಮಿಷನ್' ಕೈಗೊಂಡಿತು.
ಲಾಕ್ ಡೌನ್ ಪರಿಣಾಮ ವಿಮಾನಗಳ ಸಂಚಾರಕ್ಕೆ ನಿಷೇಧ ಹೇರಲಾಯಿತು. ವಿವಿಧ ದೇಶಗಳಲ್ಲಿ ಸಿಲುಕಿದ್ದ ಭಾರತೀಯರು ಸ್ವದೇಶಕ್ಕೆ ಬರಲು ಪರದಾಡುತ್ತಿದ್ದರು. ಆಗ ಸರ್ಕಾರ ಅವರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನಡೆಸಿತು.

ಕೇಂದ್ರ ವಿದೇಶಾಂಗ ಇಲಾಖೆ ನೀಡುವ ಮಾಹಿತಿ ಪ್ರಕಾರ ಇದುವರೆಗೂ ವಿವಿಧ ದೇಶಗಳಲ್ಲಿ ಸಿಲುಕಿದ್ದ 9.5 ಲಕ್ಷ ಭಾರತೀಯರು ದೇಶಕ್ಕೆ ವಾಪಸ್ ಆಗಿದ್ದಾರೆ. ವಿದೇಶಾಂಗ ಇಲಾಖೆ ಇಂತಹ ಮಹತ್ವದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದೆ.
ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾಸ್ತವ್ ಈ ಕುರಿತು ಮಾಹಿತಿ ನೀಡಿದ್ದಾರೆ. "ವಂದೇ ಭಾರತ್ ಮಿಷನ್ ಅಡಿ ನಾವು 1 ಮಿಲಿಯನ್ ಜನರನ್ನು ಕರೆತರುವ ಸನಿಹದಲ್ಲಿದ್ದೇವೆ. 9.5 ಲಕ್ಷ ಜನರು ಈಗಾಗಲೇ ವಾಪಸ್ ಆಗಿದ್ದಾರೆ" ಎಂದು ಹೇಳಿದ್ದಾರೆ.
ಕೋವಿಡ್ ಸೋಂಕಿನ ಭೀತಿಯ ಕಾರಣ ವಿಮಾನಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಯಿತು. ಇದರಿಂದಾಗಿ ವಿಮಾನಯಾನ ಕಂಪನಿಗಳಿಗೆ ನಷ್ಟ ಉಂಟಾಗಲು ಆರಂಭವಾಯಿತು. ಇದರಿಂದಾಗಿ ಹಲವು ಕಂಪನಿಗಳು ಉದ್ಯೋಗ ಕಡಿತ ಮಾಡಿದವು. ಕೆಲವು ಕಂಪನಿಗಳು ವಿಮಾನ ಸೇವೆಯನ್ನು ಸ್ಥಗಿತಗೊಳಿದವು.
ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಜನರ ಸಂಚಾರ ಕಡಿಮೆ ಆಯಿತು. ಕೆಲವು ದೇಶಗಳು ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿ ವಿಮಾನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟವು. ಸರಕು ಸಾಗಣೆಗೆ ಬೇಡಿಕೆ ಹೆಚ್ಚಾಯಿತು.
ಭಾರತ ಹಲವು ದೇಶಗಳ ಜೊತೆ ಮಾತುಕತೆ ನಡೆಸಿ ಅಲ್ಲಿ ಸಿಲಕಿದ್ದ ಭಾರತೀಯರನ್ನು ವಾಪಸ್ ಕರೆತರಲು ಮುಂದಾಯಿತು. ಅಮೆರಿಕ, ಜರ್ಮನಿ, ಫ್ರಾನ್ಸ್ನಲ್ಲಿ ಸಿಲುಕಿದ್ದವರನ್ನು ವಾಪಸ್ ಕರೆಸಲಾಯಿತು. ಬಳಿಕ ಕೆನಡಾ, ಯುಕೆ ಮುಂತಾದ ದೇಶಗಳು ವಂದೇ ಭಾರತ್ ಮಿಷನ್ಗೆ ಒಪ್ಪಿಗೆ ನೀಡಿದವು.
ಕೋವಿಡ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ವಿಶ್ವದ್ಯಾದ್ಯಂತ ಅಮೆರಿಕ, ಆಸ್ಟ್ರೇಲಿಯಾ, ಜಪಾನ್ಗೆ ವಿಮಾನಗಳ ಹಾರಾಟದ ಸಂಖ್ಯೆ ಶೇ 80ರಷ್ಟು ಕಡಿಮೆ ಆಯಿತು. ಚೀನಾಕ್ಕೆ ವಿಮಾನಗಳ ಸಂಚಾರ ಶೇ 94ರಷ್ಟು ಕಡಿಮೆ ಆಗಿದೆ ಎಂದು ವರದಿಗಳು ಹೇಳುತ್ತಿವೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications