Veerendra Heggade : ಅಪ್ರತಿಮ ಧರ್ಮಸೇವಕ, ಸಮಾಜಸೇವಕ ವೀರೇಂದ್ರ ಹೆಗ್ಗಡೆ
ಐವತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ಧರ್ಮಸ್ಥಳ ಶ್ರೀ ಕ್ಷೇತ್ರದಲ್ಲಿ ಧರ್ಮಾಧಿಕಾರಿಯಾಗಿರುವ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಭಕ್ತಿ, ಧರ್ಮಸೇವೆ ಮತ್ತು ಸಮಾಜಸೇವೆಗಳಿಂದ ಜನಜನಿತವಾಗಿದ್ದಾರೆ. ಶ್ರೀ ಕ್ಷೇತ್ರಕ್ಕೆ ಒಂದು ಭವ್ಯ ಕಳೆ ಮತ್ತು ಗೌರವ ತಂದುಕೊಟ್ಟ ಕೀರ್ತಿ ಅವರದ್ದು.
Recommended Video
ಧರ್ಮಸ್ಥಳದ ಮಂಜುನಾಥನ ದರ್ಶನ ಮಾಡದ ಕನ್ನಡಿಗರು ಯಾರೂ ಇಲ್ಲ ಎಂದರೆ ಅತಿಶಯೋಕ್ತಿ ಎನಿಸಲಾರದು. ಬಹುತೇಕ ಭಕ್ತರಿಗೆ ಧರ್ಮಸ್ಥಳದ ಮಂಜುನಾಥ ಎಂದರೆ ಗಾಢವಾದ ಭಕ್ತಿ ಮತ್ತು ನಂಬಿಕೆ. ಹಾಗೆಯೇ, ಧರ್ಮಾಧಿಕಾರಿ ವೀರಂದ್ರ ಹೆಗ್ಗಡೆ ಎಂದರೆ ಅಷ್ಟೇ ಗೌರವ.
ಈಗ ಕೇಂದ್ರ ಸರಕಾರ ನಾಲ್ವರು ವ್ಯಕ್ತಿಗಳನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಅದರಲ್ಲಿ ವೀರೇಂದ್ರ ಹೆಗ್ಗಡೆ ಕೂಡ ಒಬ್ಬರು. ಚಿನ್ನದ ಓಟಗಾರ್ತಿ ಪಿಟಿ ಉಷಾ, ಬಾಹುಬಲಿ ಖ್ಯಾತಿಯ ಚಿತ್ರಸಾಹಿತಿ ವಿ ವಿಜಯೇಂದ್ರ ಪ್ರಸಾದ್, ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಗೆ ನಾಮನಿರ್ದೇಶನವಾಗಿರುವ ಇತರ ಮೂವರು.
|
ಪ್ರಧಾನಿ ಮೋದಿ ಟ್ವೀಟ್
ಪ್ರಧಾನಿ ನರೇಂದ್ರ ಮೋದಿ ಅವರು ಈ ನಾಲ್ವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ವೀರೇಂದ್ರ ಹೆಗ್ಗಡೆ ಅವರು ಸಮುದಾಯ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥಿಸುವ ಅವಕಾಶ ಸಿಕ್ಕಿತು. ಹಾಗೆಯೇ, ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಅವರು ಮಾಡುತ್ತಿರುವ ಶ್ರೇಷ್ಠ ಕಾರ್ಯವನ್ನು ನೋಡುವ ಅವಕಾಶವೂ ಸಿಕ್ಕಿತು. ಸಂಸದೀಯ ಕಲಾಪಗಳಿಗೆ ಅವರಿಂದ ಇನ್ನಷ್ಟು ಮೆರಗು ಸಿಗುತ್ತದೆ" ಎಂದು ಪ್ರಧಾನಿಗಳು ಶ್ಲಾಘಿಸಿದ್ದಾರೆ.

ಜೈನ ಕುಟುಂಬದವರು
ವೀರೇಂದ್ರ ಹೆಗ್ಗಡೆ ಅವರು ಜೈನ ಧರ್ಮೀಯರು, ಬಂಟ ಸಮುದಾಯದವರು. ಅವರದ್ದು ತುಳು ಮಾತೃಭಾಷಿಕ ಪೇರ್ಗಡೆ ವಂಶ. ಅನೇಕ ವರ್ಷಗಳಿಂದ ವೀರೇಂದ್ರ ಹೆಗ್ಗಡೆ ಕುಟುಂಬದವರೇ ಧರ್ಮಸ್ಥಳದ ಧರ್ಮಾಧಿಕಾರಿಯಾಗುತ್ತಿರುವ ಪರಂಪರೆ ಇದೆ.
ಬಂಟ್ವಾಳದಲ್ಲಿ 1948 ನವೆಂಬರ್ 25ರಂದು ಜನಿಸಿದ ವೀರೇಂದ್ರ ಹೆಗ್ಗಡೆ ಧರ್ಮಸ್ಥಳ ಧರ್ಮಾಧಿಕಾರಿಯಾಗುತ್ತಿರುವ ಪೇರ್ಗಡೆ ವಂಶದ 21ನೆಯ ತಲೆಮಾರಿನವರು. ಕೇವಲ 19ನೇ ವಯಸ್ಸಿಗೆ ಇವರು ಧರ್ಮಾಧಿಕಾರಿ ಪಟ್ಟ ಏರಿದರು. ಇವರಿಗೆ ಪುತ್ರ ಇಲ್ಲದ್ದರಿಂದ ಮುಂದಿನ ಧರ್ಮಾಧಿಕಾರಿ ಸ್ಥಾನವನ್ನು ಇವರ ಕಿರಿಯ ಸಹೋದರ ಹರ್ಷೇಂದ್ರ ಅವರಿಗೆ ನೀಡಲಾಗುತ್ತದೆ.

ಹೆಗ್ಗಡೆಯವರ ಕೈಂಕರ್ಯಗಳು
ಧರ್ಮಸ್ಥಳ ಎಂದರೆ ಪ್ರತಿಯೊಬ್ಬರಿಗೂ ಧುತ್ತನೇ ನೆನಪಿಗೆ ಬರುವುದೆಂದರೆ ಅದ್ಭುತ ಅನ್ನಸಂತರ್ಪಣೆ, ಸಾಮೂಹಿಕ ವಿವಾಹ ಕಾರ್ಯಕ್ರಮಗಳು, ಶಾಲೆ ಕಾಲೇಜು, ವಿವಿಧ ಧರ್ಮ ಛತ್ರಗಳು, ಆಸ್ಪತ್ರೆಗಳು, ಹೀಗೆ ಲೆಕ್ಕವಿಲ್ಲದಷ್ಟು ಕಾರ್ಯಗಳು ವೀರೇಂದ್ರ ಹೆಗ್ಗಡೆ ನಡೆಸಿಕೊಂಡು ಬರುತ್ತಿದ್ದಾರೆ.
ಧರ್ಮಸ್ಥಳದಲ್ಲಿರುವ ನಿಸರ್ಗ ಚಿಕಿತ್ಸೆ ಕೇಂದ್ರ ಬಹಳ ಖ್ಯಾತವಾಗಿದೆ. 1972ರಿಂದಲೂ ಇಲ್ಲಿ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸುಕೊಂಡು ಬರುತ್ತಿದ್ಧಾರೆ. ಬಂಟ್ವಾಳ, ಶ್ರವಣಬೆಳಗೊಳ, ಕಲ್ಲಹಳ್ಳಿ, ಬೆಂಗಳೂರು, ಭದ್ರಾವತಿ, ಐಸೂರು ಮೊದಲಾದೆಡೆ ಧರ್ಮಸ್ಥಳ ಛತ್ರಗಳನ್ನು ನಿರ್ಮಿಸಿದ್ದಾರೆ.
ಕರಾವಳಿಯ ಗ್ರಾಮೀಣ ಭಾಗದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಧರ್ಮಸ್ಥಳದ ವತಿಯಿಂದ ಆಯೋಜಿಸಿದ್ದಾರೆ. ಮಹಿಳಾ ಸಬಲೀಕರಣ, ಪರ್ಯಾಯ ಇಂಧನ, ಶಿಕ್ಷಣ, ಆರೋಗ್ಯ, ಕೃಷಿ ಇತ್ಯಾದಿ ವಿವಿಧ ರೀತಿಯಲ್ಲಿ ಅವರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ.
ಧರ್ಮಸ್ಥಳಕ್ಕೆ ಹೋದವರು ತಪ್ಪದೇ ಉಚಿತ ಅನ್ನಸಂತರ್ಪಣೆಯಲ್ಲಿ ಆಹಾರ ಸೇವಿಸುವುದನ್ನು ತಪ್ಪಿಸುವುದಿಲ್ಲ. ನಿತ್ಯವೂ ಇಲ್ಲಿ ಸುಮಾರು ಐವತ್ತು ಸಾವಿರ ಜನರು ಆಹಾರ ಸ್ವೀಕರಿಸುತ್ತಾರೆ.

ಪ್ರಶಸ್ತಿ ಗೌರವಗಳು
ಡಾ. ವೀರೇಂದ್ರ ಹೆಗ್ಗಡೆ ಅವರ ಕಾರ್ಯಗಳಿಗೆ ಎಷ್ಟು ಪ್ರಶಸ್ತಿ ಗೌರವಗಳು ಸಿಕ್ಕರೂ ಕಡಿಮೆಯೇ. ಭಕ್ತರು ನೀಡುವ ಗೌರವವೇ ತಮಗೆ ಅತಿ ದೊಡ್ಡ ಪ್ರಶಸ್ತಿ ಎಂದು ಹೆಗ್ಗಡೆ ಹೇಳಿಕೊಂಡಿರುವುದುಂಟು. ಪದ್ಮವಿಭೂಷಣ ಪ್ರಶಸ್ತಿ ಪಡೆದಿವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿಯೂ ಪ್ರಾಪ್ತವಾಗಿದೆ.
ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ರಾಷ್ಟ್ರಪತಿಗಳಿಂದ ರಾಜರ್ಷಿ ಗೌರವ
ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್
ಕರ್ನಾಟಕ ರತ್ನ ಪ್ರಶಸ್ತಿ
ಸರ್ ಎಂ ವಿಶ್ವೇಶ್ವರಯ್ಯ ಪ್ರಶಸ್ತಿ
ಕರ್ನಾಟಕ ಸರಕಾರದಿಂದ ಶ್ರೀ ಭಗವಾನ್ ಮಹಾವೀರ ಶಾಂತ ಪ್ರಶಸ್ತಿ
(ಒನ್ಇಂಡಿಯಾ ಸುದ್ದಿ)
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications