Maha Kumbh Mela: ಮಹಾಕುಂಭ ಮೇಳದ ಕೊನೇ ಅಮೃತ ಸ್ನಾನಕ್ಕೆ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವು ಮಹಾಶಿವರಾತ್ರಿ ದಿನದಂದೇ ಸಂಪನ್ನಗೊಳ್ಳಲಿದೆ. ಈ ಹಿನ್ನೆಲೆ ಕೊನೆಯ ಅಮೃತಸ್ನಾನ ಮಾಡಲು ಭಕ್ತರು ಕೋಟ್ಯಂತರ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ನಾಳೆ ಮಹಾಕುಂಭ ಮೇಳ ಕೊನೆಗೊಳ್ಳುವುದರಿಂದ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ವಿಶೇಷ ಮಾರ್ಗಸೂಚಿಗಳನ್ನು ಕೂಡ ಜಾರಿ ಮಾಡಲಾಗಿದೆ.
ಫೆಬ್ರವರಿ 26ರಂದು ಮಹಾಶಿವರಾತ್ರಿ ಅಂತಿಮ ಪುಣ್ಯಸ್ನಾನದ ಸಿದ್ಧತೆಗಾಗಿ ಮಂಗಳವಾರ ಸಂಜೆ 4 ಗಂಟೆಯಿಂದಲೇ ಮಹಾ ಕುಂಭಮೇಳದ ಆವರಣದಲ್ಲಿ ಯಾವುದೇ ರೀತಿಯ ವಾಹನ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಭಕ್ತಾದಿಗಳ ಹೆಚ್ಚಿನ ಒಳಹರಿವಿಗೆ ಅವಕಾಶ ಕಲ್ಪಿಸಲು ಸಂಜೆ 6 ಗಂಟೆಯಿಂದ ಪ್ರಯಾಗರಾಜ್ ನಗರದಾದ್ಯಂತ ಇದೇ ರೀತಿಯ ಸಂಚಾರ ನಿರ್ಬಂಧ ಇರಲಿದೆ.

ಈ ಬೃಹತ್ ಆಧ್ಯಾತ್ಮಿಕ ಕೂಟದ ಸಮಯದಲ್ಲಿ ಜನಸಂದಣಿಯನ್ನು ಸುಗಮವಾಗಿ ನಿರ್ವಹಿಸಲು ಮತ್ತು ದಟ್ಟಣೆಯನ್ನು ತಪ್ಪಿಸಲು ಅಧಿಕಾರಿಗಳು ಈ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಈ ನಿರ್ಬಂಧಿತ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಮಾತ್ರವೇ ಅನುಮತಿ ನೀಡುವುದಾಗಿ ತಿಳಿಸಿದ್ದಾರೆ.
ಇಲ್ಲಿ ನಾಳೆಯ ಅತಿ ಜನದಟ್ಟಣೆ ಉದ್ದೇಶದಿಂದ ಈ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ. ಆದರೆ ಅಗತ್ಯ ಸೇವೆಗಳ ಪೂರೈಕೆಗೆ ಯಾವುದೇ ಅಡ್ಡಿ ಇರುವುದಿಲ್ಲ. ಹಾಲು, ತರಕಾರಿಗಳು, ಔಷಧಗಳು, ಇಂಧನ ಮತ್ತು ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರಲಿದೆ. ವೈದ್ಯರು, ಪೊಲೀಸ್ ಸಿಬ್ಬಂದಿ ಮತ್ತು ಆಡಳಿತ ಸಿಬ್ಬಂದಿಗೂ ಪ್ರವೇಶ ಇರಲಿದೆ.
ಭಕ್ತರಿಗೆ ವಿಶೇಷ ಸೂಚನೆ: ಭಕ್ತಾದಿಗಳು ತಮ್ಮ ನಿಯೋಜಿತ ಘಾಟ್ಗಳಲ್ಲಿ ಮಾತ್ರವೇ ಸ್ನಾನ ಮಾಡಲು ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಆಯಾ ಸೂಚಿತ ಶಿವನ ದೇವಾಲಯಗಳಿಗೆ ತೆರಳುವುದರಿಂದ ಈ ಭಾಗದಲ್ಲಿ ಜನಸಂದಣಿ ಕೂಡ ಕಡಿಮೆಯಾಗಲಿದೆ. ದಕ್ಷಿಣಿ ಜುನ್ಸಿ ಮಾರ್ಗದಿಂದ ಆರೈಲ್ ಘಾಟ್, ಉತ್ತರಿ ಜುನ್ಸಿ ಮಾರ್ಗದಿಂದ ಹರಿಶ್ಚಂದ್ರ ಘಾಟ್ ಮತ್ತು ಹಳೆ ಜಿಟಿ ಘಾಟ್, ಪಾಂಡೆ ಕ್ಷೇತ್ರದ ಮಾರ್ಗವಾಗಿ ಭಾರದ್ವಾಜ್ ಘಾಟ್, ನಾಗವಾಸುಕಿ ಘಾಟ್, ಮೋರಿ ಘಾಟ್, ಕಾಳಿ ಘಾಟ್, ರಾಮ್ ಘಾಟ್ ಮತ್ತು ಹನುಮಾನ್ ಘಾಟ್, ಆರೈಲ್ ವಲಯದಿಂದ ಆರೈಲ್ ಘಾಟ್ ಕಡೆಗೆ ಭಕ್ತರು ಆಗಮಿಸಲು ವ್ಯವಸ್ಥೆ ಮಾಡಲಾಗಿದೆ.

ಜನವರಿ 13ರಂದು ಶುರುವಾದ ಮಹಾ ಕುಂಭಮೇಳವು ಫೆಬ್ರವರಿ 26ರ ಮಹಾಶಿವರಾತ್ರಿಯಂದು ಮುಕ್ತಾಯಗೊಳ್ಳುತ್ತಿದೆ. ಕುಂಭಮೇಳ ಪ್ರತಿ 12 ವರ್ಷಗಳಿಗೊಮ್ಮೆ ನಡೆದರೆ, ಈಗ ನಡೆಯುತ್ತಿರುವುದು 144 ವರ್ಷಗಳಿಗೊಮ್ಮೆ ಸಂಭವಿಸುವ ಮಹಾಕುಂಭ ಮೇಳ. ಈಗಾಗಲೇ 63 ಕೋಟಿಗೂ ಹೆಚ್ಚು ಭಕ್ತರು ಮತ್ತು ಪ್ರವಾಸಿಗರು ಪ್ರಯಾಗ್ರಾಜ್ಗೆ ಭೇಟಿ ನೀಡಿ ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಉತ್ತರ ಪ್ರದೇಶ ಸರ್ಕಾರದ ನೇತೃತ್ವದಲ್ಲಿ ಈ ಮಹಾಕುಂಭ ಮೇಳ ನಡೆಯುತ್ತಿದೆ. ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾದ ಮಹಾ ಕುಂಭಮೇಳದ ಮಹಾಶಿವರಾತ್ರಿಯ ಅಂತಿಮ ಅಮೃತ ಸ್ನಾನದಲ್ಲಿ ಬುಧವಾರ 1 ಕೋಟಿಗೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications