ವಿಡಿಯೋ: ಮದುವೆ ಉಡುಪು ಧರಿಸಿ ರಾಯಲ್ ಎನ್ಫೀಲ್ಡ್ ಓಡಿಸಿದ ವಧು
ಹುಡುಗಿಯೊಬ್ಬಳು ವಧುವಿನ ಉಡುಪು ಧರಿಸಿ ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ತನ್ನ ಮದುವೆ ಸ್ಥಳಕ್ಕೆ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಮೇಕಪ್ ಆರ್ಟಿಸ್ಟ್ ದೀಪಾಲಿ ಹಾಗೂ ವಧು ವೈಶಾಲಿ ಚೌಧರಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈಶಾಲಿ ಎಂಬ ಹೆಸರಿನ ವಧು ದೆಹಲಿಯವರು (ವಿಡಿಯೊ ಶೀರ್ಷಿಕೆಯ ಪ್ರಕಾರ). ಇದು ಸದ್ಯಕ್ಕೆ 1 ಮಿಲಿಯನ್ಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ.
ತನ್ನ ಮದುವೆ ದಿನದಂದು ಕಲ್ಯಾಣ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡುವುದು ಪ್ರತಿಯೊಬ್ಬ ವಧುವಿನ ಕನಸಾಗಿರುತ್ತದೆ. ಆದರೆ ಈ ವಧುವಿನ ಎಂಟ್ರಿಯನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಭಾರವಾದ ಲೆಹೆಂಗಾವನ್ನು ಧರಿಸಿ ವೈಶಾಲಿ ರಾಯಲ್ ಎನ್ಫೀಲ್ಡ್ ಅನ್ನು ತುಂಬಾ ಚತುರತೆಯಿಂದ ಓಡಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅವರು ಆತ್ಮವಿಶ್ವಾಸ ಮತ್ತು ತನ್ನ ಸವಾರಿಯನ್ನು ಸಂಪೂರ್ಣವಾಗಿ ಆನಂದಿಸಿದ್ದಾರೆ. ಭಾರವಾದ ಆಭರಣಗಳು ಮತ್ತು ಲೆಹೆಂಗಾವನ್ನು ಧರಿಸಿ ಹೆಲ್ಮೆಟ್ ಇಲ್ಲದೆ ಅವರು ಮುಖ್ಯ ರಸ್ತೆಯಲ್ಲಿ ಬೈಕ್ ಸವಾರಿ ಓಡಿಸಿದ್ದಾರೆ.

ವಿಡಿಯೊವನ್ನು ಇಲ್ಲಿ ವೀಕ್ಷಿಸಿ:
ಇತ್ತೀಚೆಗೆ ಮದುವೆ ಸಮಾರಂಭಗಳು ವಿಭಿನ್ನತೆ ಪಡೆದುಕೊಳ್ಳುತ್ತಿವೆ. ಕಾರು, ಕುದುರೆಯಲ್ಲಿ ವರ ಮದುವೆ ಸಮಾರಂಭಕ್ಕೆ ಆಗಮಿಸುವ ರೂಢಿ ಈಗ ಬದಲಾಗಿದೆ. ಈಗೇನಿದ್ದರೂ ವಧು ಹೇಗೆ ಮದುವೆ ಮನೆಗೆ ಆಗಮಿಸುತ್ತಾಳೆ ಎನ್ನುವುದು ಟ್ರೆಂಡ್ ಆಗಿದೆ. ಮೇ ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ ಟ್ಯ್ರಾಕ್ಟರ್ ಓಡಿಸುವ ಮೂಲಕ ವಧುವಿನ ಮೆರವಣಿಗೆ ಮಾಡಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಏಪ್ರಿಲ್ 20ರಂದು ಹರಿಯಾಣದಲ್ಲಿ ವಧು ಕುದುರೆ ಮೇಲೆ ಮೆರವಣಿಗೆ ಮಾಡಿರುವುದು ಕಂಡುಬಂದಿತ್ತು. ಇಲ್ಲಿ ರಮೇಶ್ ಕುಮಾರ್ ಅವರು ತಮ್ಮ ಮಗಳ ಮದುವೆಯಲ್ಲಿ ಪುತ್ರರಂತೆ ಮಗಳನ್ನು ಕುದುರೆ ಮೇಲೆ ಮೆರವಣಿಗೆ ಮಾಡಿಸಿದ್ದರು. ಇದರ ಮೂಲಕ ಪುರುಷರಿಗಿಂತ ಹೆಣ್ಣು ಮಕ್ಕಳು ಕಡಿಮೆ ಇಲ್ಲ ಎಂಬ ಸಂದೇಶ ನೀಡಿದ್ದರು. ಈ ವರ್ಷದ ಆರಂಭದಲ್ಲಿ, ಹರಿಯಾಣದ ಅಂಬಾಲಾದಲ್ಲಿ ನಡೆದ ಮದುವೆಯೊಂದರಲ್ಲಿ ವಧು ತನ್ನ ಕೈಯಲ್ಲಿ ಕತ್ತಿಯೊಂದಿಗೆ ಕುದುರೆಯ ಮೇಲೆ ಸವಾರಿ ಮಾಡುತ್ತಾ ವರನ ಮನೆಗೆ ಹೋಗಿ ಮದುವೆಯಾದ್ದಳು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್












Click it and Unblock the Notifications