ವಿಡಿಯೋ: ಮದುವೆ ಉಡುಪು ಧರಿಸಿ ರಾಯಲ್ ಎನ್ಫೀಲ್ಡ್ ಓಡಿಸಿದ ವಧು
ಹುಡುಗಿಯೊಬ್ಬಳು ವಧುವಿನ ಉಡುಪು ಧರಿಸಿ ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ತನ್ನ ಮದುವೆ ಸ್ಥಳಕ್ಕೆ ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಮೇಕಪ್ ಆರ್ಟಿಸ್ಟ್ ದೀಪಾಲಿ ಹಾಗೂ ವಧು ವೈಶಾಲಿ ಚೌಧರಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈಶಾಲಿ ಎಂಬ ಹೆಸರಿನ ವಧು ದೆಹಲಿಯವರು (ವಿಡಿಯೊ ಶೀರ್ಷಿಕೆಯ ಪ್ರಕಾರ). ಇದು ಸದ್ಯಕ್ಕೆ 1 ಮಿಲಿಯನ್ಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ.
ತನ್ನ ಮದುವೆ ದಿನದಂದು ಕಲ್ಯಾಣ ಮಂಟಪಕ್ಕೆ ವಿಶೇಷವಾಗಿ ಎಂಟ್ರಿ ಕೊಡುವುದು ಪ್ರತಿಯೊಬ್ಬ ವಧುವಿನ ಕನಸಾಗಿರುತ್ತದೆ. ಆದರೆ ಈ ವಧುವಿನ ಎಂಟ್ರಿಯನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಭಾರವಾದ ಲೆಹೆಂಗಾವನ್ನು ಧರಿಸಿ ವೈಶಾಲಿ ರಾಯಲ್ ಎನ್ಫೀಲ್ಡ್ ಅನ್ನು ತುಂಬಾ ಚತುರತೆಯಿಂದ ಓಡಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅವರು ಆತ್ಮವಿಶ್ವಾಸ ಮತ್ತು ತನ್ನ ಸವಾರಿಯನ್ನು ಸಂಪೂರ್ಣವಾಗಿ ಆನಂದಿಸಿದ್ದಾರೆ. ಭಾರವಾದ ಆಭರಣಗಳು ಮತ್ತು ಲೆಹೆಂಗಾವನ್ನು ಧರಿಸಿ ಹೆಲ್ಮೆಟ್ ಇಲ್ಲದೆ ಅವರು ಮುಖ್ಯ ರಸ್ತೆಯಲ್ಲಿ ಬೈಕ್ ಸವಾರಿ ಓಡಿಸಿದ್ದಾರೆ.

ವಿಡಿಯೊವನ್ನು ಇಲ್ಲಿ ವೀಕ್ಷಿಸಿ:
ಇತ್ತೀಚೆಗೆ ಮದುವೆ ಸಮಾರಂಭಗಳು ವಿಭಿನ್ನತೆ ಪಡೆದುಕೊಳ್ಳುತ್ತಿವೆ. ಕಾರು, ಕುದುರೆಯಲ್ಲಿ ವರ ಮದುವೆ ಸಮಾರಂಭಕ್ಕೆ ಆಗಮಿಸುವ ರೂಢಿ ಈಗ ಬದಲಾಗಿದೆ. ಈಗೇನಿದ್ದರೂ ವಧು ಹೇಗೆ ಮದುವೆ ಮನೆಗೆ ಆಗಮಿಸುತ್ತಾಳೆ ಎನ್ನುವುದು ಟ್ರೆಂಡ್ ಆಗಿದೆ. ಮೇ ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ ಟ್ಯ್ರಾಕ್ಟರ್ ಓಡಿಸುವ ಮೂಲಕ ವಧುವಿನ ಮೆರವಣಿಗೆ ಮಾಡಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಏಪ್ರಿಲ್ 20ರಂದು ಹರಿಯಾಣದಲ್ಲಿ ವಧು ಕುದುರೆ ಮೇಲೆ ಮೆರವಣಿಗೆ ಮಾಡಿರುವುದು ಕಂಡುಬಂದಿತ್ತು. ಇಲ್ಲಿ ರಮೇಶ್ ಕುಮಾರ್ ಅವರು ತಮ್ಮ ಮಗಳ ಮದುವೆಯಲ್ಲಿ ಪುತ್ರರಂತೆ ಮಗಳನ್ನು ಕುದುರೆ ಮೇಲೆ ಮೆರವಣಿಗೆ ಮಾಡಿಸಿದ್ದರು. ಇದರ ಮೂಲಕ ಪುರುಷರಿಗಿಂತ ಹೆಣ್ಣು ಮಕ್ಕಳು ಕಡಿಮೆ ಇಲ್ಲ ಎಂಬ ಸಂದೇಶ ನೀಡಿದ್ದರು. ಈ ವರ್ಷದ ಆರಂಭದಲ್ಲಿ, ಹರಿಯಾಣದ ಅಂಬಾಲಾದಲ್ಲಿ ನಡೆದ ಮದುವೆಯೊಂದರಲ್ಲಿ ವಧು ತನ್ನ ಕೈಯಲ್ಲಿ ಕತ್ತಿಯೊಂದಿಗೆ ಕುದುರೆಯ ಮೇಲೆ ಸವಾರಿ ಮಾಡುತ್ತಾ ವರನ ಮನೆಗೆ ಹೋಗಿ ಮದುವೆಯಾದ್ದಳು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications