ವಿಡಿಯೋ: ಆನೆಯ ಪ್ರತಿಮೆಯ ಕಾಲುಗಳ ನಡುವೆ ಸಿಲುಕಿದ ಭಕ್ತ
ದೇವರ ಆಶೀರ್ವಾದ ಪಡೆಯಲು ಜನರು ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಕೆಲವೊಮ್ಮೆ ಜನರು ದೇವರನ್ನು ಮೆಚ್ಚಿಸಲು ಸವಾಲಿನ ಕೆಲಸವನ್ನು ಮಾಡಲು ಪ್ರಯತ್ನಿಸುತ್ತಾರೆ. ಇಂಥಹ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬ ಆನೆಯ ಪ್ರತಿಮೆಯ ಕಾಲುಗಳ ಮಧ್ಯದಿಂದ ತೆವಳುವ ಮೂಲಕ ಹೊರಬರಲು ಪ್ರಯತ್ನಿಸಿದ್ದಾನೆ. ಈ ವೇಳೆ ವ್ಯಕ್ತಿ ಹೊರಬರಲು ಆಗದೆ ಆನೆ ಪ್ರತಿಮೆಯ ಕಾಲುಗಳ ನಡುವೆ ಸಿಲುಕಿಕೊಂಡಿದ್ದಾನೆ.
ನಿತಿನ್ ಎಂಬುವವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಗುಜರಾತ್ನಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರತಿಮೆಯೊಳಗೆ ಸಿಲುಕಿಕೊಂಡಾಗ ವ್ಯಕ್ತಿ ಅದೆಷ್ಟೇ ಪ್ರಯತ್ನ ಪಟ್ಟರು ಹೊರಬರಲು ಸಾಧ್ಯವಾಗಿಲ್ಲ. ವಿಡಿಯೋದಲ್ಲಿ ರಚನೆಯಿಂದ ಹೊರಬರಲು ಮನುಷ್ಯ ತನ್ನ ಕೈ ಮತ್ತು ದೇಹವನ್ನು ಬಳಸುತ್ತಿರುವುದನ್ನು ಗಮನಿಸಬಹುದು. ಪುರೋಹಿತರು ಸಹ ವ್ಯಕ್ತಿಗೆ ಪ್ರತಿಮೆಯಿಂದ ಹೊರಬರಲು ಸಹಾಯ ಮಾಡುತ್ತಾರೆ. ಅನೇಕ ಸಂದರ್ಶಕರು ಭಕ್ತನಿಗೆ ಸಲಹೆಗಳನ್ನು ನೀಡುವುದನ್ನು ಕಾಣಬಹುದು. ಜನ ಸಹಾಯ ಹಸ್ತವನ್ನು ನೀಡಿದರೂ ಭಕ್ತ ಪ್ರತಿಮೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ವಿಡಿಯೋದ ಕೊನೆಯವರಿಗೂ ವ್ಯಕ್ತಿ ಸಿಲುಕಿಕೊಂಡೇ ಇರುತ್ತಾನೆ. ವ್ಯಕ್ತಿ ಪ್ರತಿಮೆಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾನೆಯೇ ಎಂಬುದು ವಿಡಿಯೊದಲ್ಲಿ ಸ್ಪಷ್ಟವಾಗಿಲ್ಲ. ವಿಡಿಯೋ ಹಂಚಿಕೊಂಡ ನಂತರ 40,000 ವೀಕ್ಷಣೆಗಳನ್ನು ಸಂಗ್ರಹಿಸಿದೆ.

ವಿಡಿಯೊವನ್ನು ಇಲ್ಲಿ ವೀಕ್ಷಿಸಿ:
Any kind of excessive bhakti is injurious to health 😮 pic.twitter.com/mqQ7IQwcij
— ηᎥ†Ꭵղ (@nkk_123) December 4, 2022
ಈ ಹಿಂದೆ ಇಂತಹುದೇ ಒಂದು ಘಟನೆ ನಡೆದಿತ್ತು. ಆಚರಣೆಯ ಭಾಗವಾಗಿ ಸಣ್ಣ ಆನೆಯ ಪ್ರತಿಮೆಯ ಕಾಲುಗಳ ನಡುವೆ ತೆವಳುತ್ತಿದ್ದಾಗ ಮಹಿಳಾ ಭಕ್ತೆಯೊಬ್ಬಳು 2019 ರಲ್ಲಿ ಸಿಲುಕಿಕೊಂಡಿದ್ದಳು. ಅವಳು ಪ್ರತಿಮೆಯಿಂದ ಹೊರಬರಲು ಪ್ರಯತ್ನಿಸಿದಳು. ಆದರೆ ಆಕೆ ಹೊರಬರಲು ಆಗಲಿಲ್ಲ. ಜನರು ಅವಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಹಳೆಯ ವಿಡಿಯೊದ ಪ್ರಕಾರ, ಸ್ವಲ್ಪ ಸಮಯದ ಯುದ್ಧದ ನಂತರ ಅವಳು ಗಾಯಗೊಳ್ಳದೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಳು. ಆಕೆಯ ಪ್ರಯತ್ನಗಳಿಗೆ ಚಪ್ಪಾಳೆ ತಟ್ಟಿ ಭಕ್ತರು ಹುರಿದುಂಬಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications