ವಿಡಿಯೋ: ಆನೆಯ ಪ್ರತಿಮೆಯ ಕಾಲುಗಳ ನಡುವೆ ಸಿಲುಕಿದ ಭಕ್ತ
ದೇವರ ಆಶೀರ್ವಾದ ಪಡೆಯಲು ಜನರು ಆಗಾಗ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಕೆಲವೊಮ್ಮೆ ಜನರು ದೇವರನ್ನು ಮೆಚ್ಚಿಸಲು ಸವಾಲಿನ ಕೆಲಸವನ್ನು ಮಾಡಲು ಪ್ರಯತ್ನಿಸುತ್ತಾರೆ. ಇಂಥಹ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬ ಆನೆಯ ಪ್ರತಿಮೆಯ ಕಾಲುಗಳ ಮಧ್ಯದಿಂದ ತೆವಳುವ ಮೂಲಕ ಹೊರಬರಲು ಪ್ರಯತ್ನಿಸಿದ್ದಾನೆ. ಈ ವೇಳೆ ವ್ಯಕ್ತಿ ಹೊರಬರಲು ಆಗದೆ ಆನೆ ಪ್ರತಿಮೆಯ ಕಾಲುಗಳ ನಡುವೆ ಸಿಲುಕಿಕೊಂಡಿದ್ದಾನೆ.
ನಿತಿನ್ ಎಂಬುವವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಗುಜರಾತ್ನಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರತಿಮೆಯೊಳಗೆ ಸಿಲುಕಿಕೊಂಡಾಗ ವ್ಯಕ್ತಿ ಅದೆಷ್ಟೇ ಪ್ರಯತ್ನ ಪಟ್ಟರು ಹೊರಬರಲು ಸಾಧ್ಯವಾಗಿಲ್ಲ. ವಿಡಿಯೋದಲ್ಲಿ ರಚನೆಯಿಂದ ಹೊರಬರಲು ಮನುಷ್ಯ ತನ್ನ ಕೈ ಮತ್ತು ದೇಹವನ್ನು ಬಳಸುತ್ತಿರುವುದನ್ನು ಗಮನಿಸಬಹುದು. ಪುರೋಹಿತರು ಸಹ ವ್ಯಕ್ತಿಗೆ ಪ್ರತಿಮೆಯಿಂದ ಹೊರಬರಲು ಸಹಾಯ ಮಾಡುತ್ತಾರೆ. ಅನೇಕ ಸಂದರ್ಶಕರು ಭಕ್ತನಿಗೆ ಸಲಹೆಗಳನ್ನು ನೀಡುವುದನ್ನು ಕಾಣಬಹುದು. ಜನ ಸಹಾಯ ಹಸ್ತವನ್ನು ನೀಡಿದರೂ ಭಕ್ತ ಪ್ರತಿಮೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ವಿಡಿಯೋದ ಕೊನೆಯವರಿಗೂ ವ್ಯಕ್ತಿ ಸಿಲುಕಿಕೊಂಡೇ ಇರುತ್ತಾನೆ. ವ್ಯಕ್ತಿ ಪ್ರತಿಮೆಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾನೆಯೇ ಎಂಬುದು ವಿಡಿಯೊದಲ್ಲಿ ಸ್ಪಷ್ಟವಾಗಿಲ್ಲ. ವಿಡಿಯೋ ಹಂಚಿಕೊಂಡ ನಂತರ 40,000 ವೀಕ್ಷಣೆಗಳನ್ನು ಸಂಗ್ರಹಿಸಿದೆ.

ವಿಡಿಯೊವನ್ನು ಇಲ್ಲಿ ವೀಕ್ಷಿಸಿ:
Any kind of excessive bhakti is injurious to health 😮 pic.twitter.com/mqQ7IQwcij
— ηᎥ†Ꭵղ (@nkk_123) December 4, 2022
ಈ ಹಿಂದೆ ಇಂತಹುದೇ ಒಂದು ಘಟನೆ ನಡೆದಿತ್ತು. ಆಚರಣೆಯ ಭಾಗವಾಗಿ ಸಣ್ಣ ಆನೆಯ ಪ್ರತಿಮೆಯ ಕಾಲುಗಳ ನಡುವೆ ತೆವಳುತ್ತಿದ್ದಾಗ ಮಹಿಳಾ ಭಕ್ತೆಯೊಬ್ಬಳು 2019 ರಲ್ಲಿ ಸಿಲುಕಿಕೊಂಡಿದ್ದಳು. ಅವಳು ಪ್ರತಿಮೆಯಿಂದ ಹೊರಬರಲು ಪ್ರಯತ್ನಿಸಿದಳು. ಆದರೆ ಆಕೆ ಹೊರಬರಲು ಆಗಲಿಲ್ಲ. ಜನರು ಅವಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಹಳೆಯ ವಿಡಿಯೊದ ಪ್ರಕಾರ, ಸ್ವಲ್ಪ ಸಮಯದ ಯುದ್ಧದ ನಂತರ ಅವಳು ಗಾಯಗೊಳ್ಳದೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಳು. ಆಕೆಯ ಪ್ರಯತ್ನಗಳಿಗೆ ಚಪ್ಪಾಳೆ ತಟ್ಟಿ ಭಕ್ತರು ಹುರಿದುಂಬಿಸಿದರು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications