ವಿಡಿಯೋ: ಗಣಪತಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸುವ ನಾಯಿ
ವಿದ್ಯಾದಾತ, ಇಷ್ಟಾರ್ಥ ಸಿದ್ದಿ, ಸರ್ವ ಕಷ್ಟ ನಿವಾರಕ ಗಣೇಶ. ಹೀಗಾಗಿ ಗಣೇಶನನ್ನು ಇತರ ದೇವತೆಗಳಲ್ಲಿ ಪ್ರಥಮ ಪೂಜ್ಯ ದೇವರು ಎಂದು ಕರೆಯಲಾಗುತ್ತದೆ. ಗಣೇಶ ಎಲ್ಲರಿಗಿಂತ ಹೆಚ್ಚು ಪ್ರೀತಿಪಾತ್ರನಾದ ದೇವರು ಕೂಡ ಹೌದು. ಪೂಜೆ, ಯಜ್ಞ, ಹವನ ಅಥವಾ ಇತರ ಯಾವುದೇ ಧಾರ್ಮಿಕ ಆಚರಣೆಗಳಿಗೆ ಗಣೇಶನನ್ನು ಯಾವಾಗಲೂ ಮೊದಲು ಪೂಜಿಸಲಾಗುತ್ತದೆ.
ಭಕ್ತಿಯಿಂದ ಬೇಡಿದರೆ ಇಷ್ಟಾರ್ಥಗಳು ಪ್ರಾಪ್ತಿಯಾಗುತ್ತವೆ. ಶಿವ ಮತ್ತು ಪಾರ್ವತಿ ದೇವಿಯ ಮಗನಾದ ಗಣೇಶನನ್ನು ಪೂಜಿಸದ ಜನರಿಲ್ಲ. ಮನುಷ್ಯರು ಮಾತ್ರವಲ್ಲದೆ ಪ್ರಾಣಿಗಳು ಗಣೇಶನನ್ನು ಭಕ್ತಿಯಿಂದ ಪ್ರಾರ್ಥಿಸುತ್ತವೆ. ಇದಕ್ಕೆ ಸಾಕ್ಷಿಯಾಗಿದ್ದು ಗಣೇಶನ ಮುಂದೆ ತಲೆ ಬಾಗಿ ಪ್ರಾರ್ಥನೆ ಮಾಡುವ ಶ್ವಾನದ ವಿಡಿಯೋ.
ಗಣೇಶನನ್ನು ಭಕ್ತರ ಜೀವನದ ಎಲ್ಲಾ ಅಡೆತಡೆಗಳನ್ನು ನಿವಾರಿಸುವವ ಎಂದೂ ಕರೆಯುತ್ತಾರೆ. ಜೀವನದಲ್ಲಿ ಅಡೆತಡೆಗಳನ್ನು ಎದುರಿಸುತ್ತಿರುವ ಜನರು ತಮ್ಮ ಸಮಸ್ಯೆಗಳನ್ನು ತೊಡೆದುಹಾಕಲು ಗಣೇಶನ್ನು ಪೂಜಿಸುತ್ತಾರೆ. ಅದರೆ ಇಲ್ಲೊಂದು ನಾಯಿ ತನ್ನ ಮಾಲೀಕನೊಂದಿಗೆ ದೇವಸ್ಥಾನದಲ್ಲಿ ಗಣೇಶ ಮುಂದೆ ತಲೆ ಬಾಗಿ ನಮಿಸುವ ವಿಡಿಯೋ ವೈರಲ್ ಆಗಿದೆ.

ಭಾರತ ಮತ್ತು ಪ್ರಪಂಚದ ಸಾವಿರಾರು ಜನರು ಗಣಪತಿಯನ್ನು ಪೂಜಿಸುತ್ತಾರೆ. ಆದರೆ ಸಾಕು ನಾಯಿಗಳಂತಹ ಪ್ರಾಣಿಗಳು ಸಹ ಅನೇಕ ಜನರಂತೆ ದೇವರನ್ನು ಪ್ರಾರ್ಥಿಸಲು ಪ್ರಾರಂಭಿಸಿವೆ. ಮುದ್ದಿನ ನಾಯಿಯೊಂದು ತನ್ನ ಮಾಲೀಕನ ಜೊತೆಯಲ್ಲಿ ಗಣೇಶನನ್ನು ಪೂಜಿಸುವ ಕ್ಲಿಪ್ ವೈರಲ್ ಆಗಿದೆ. ದೇವಸ್ಥಾನದಲ್ಲಿ ಗಣೇಶ ಮೂರ್ತಿಯ ಮುಂದೆ ವ್ಯಕ್ತಿಯೊಬ್ಬರು ಕೈ ಜೋಡಿಸಿ ನಿಂತಿರುವುದು ವಿಡಿಯೋದಲ್ಲಿ ಕಾಣಬಹುದು. ಮಾಲೀಕ ಪ್ರಾರ್ಥಿಸುತ್ತಿದ್ದಂತೆ ಮುದ್ದಾದ ನಾಯಿಯು ಗಣೇಶ ಬಪ್ಪನ ಮುಂದೆ ತಲೆಬಾಗಿ ನಮಸ್ಕರಿಸುತ್ತದೆ.
ದೇವಸ್ಥಾನದಲ್ಲಿ ಗಣೇಶನಿಗೆ ನಾಯಿ ಪ್ರಾರ್ಥನೆ ಮಾಡುವ ವೈರಲ್ ವಿಡಿಯೊವನ್ನು ಇಲ್ಲಿ ವೀಕ್ಷಿಸಿ:
ಮಾಲೀಕ ಗಣಪತಿಗೆ ಗೌರವ ಸಲ್ಲಿಸುವುದು ಮುಗಿದ ಬಳಿಕ ನಾಯಿಯು ಎದ್ದು ಅವನೊಂದಿಗೆ ಹೊರಟು ಹೋಗುತ್ತದೆ. ಇನ್ಸ್ಟಾಗ್ರಾಮ್ನಲ್ಲಿ (Instagram) ಹಂಚಿಕೊಂಡ ಈ ವಿಡಿಯೊ 1.5 ಮಿಲಿಯನ್ ವೀಕ್ಷಣೆಗಳು ಮತ್ತು 261 ಲಕ್ಷಕ್ಕೂ ಹೆಚ್ಚು ಇಷ್ಟಗಳನ್ನು ಗಳಿಸಿದೆ. ಕಾಮೆಂಟ್ಗಳಲ್ಲಿನ ಜನರ ಪ್ರಕಾರ, ವಿಡಿಯೊ ಮಹಾರಾಷ್ಟ್ರದ ಪುಣೆಯಲ್ಲಿರುವ ದಗ್ದುಶೇತ್ ಹಲ್ವಾಯಿ ಗಣಪತಿ ಮಂದಿರದಲ್ಲಿ (Shreemant Dagdusheth Halwai Ganpati Mandir) ಸೆರೆಹಿಡಿಯಲಾಗಿದೆ. ನೋಡುಗರು ವಿಡಿಯೊವನ್ನು ಇಷ್ಟಪಟ್ಟಿದ್ದಾರೆ ಮತ್ತು ಹೃದಯ-ಕಣ್ಣಿನ ಎಮೋಜಿಗಳೊಂದಿಗೆ ಕಾಮೆಂಟ್ ಮಾಡಿದ್ದಾರೆ.
-
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications