ವಿಡಿಯೋ: ಇದು ಮದುವೆಯೋ ಅಥವಾ ಮುಸುಕಿನ ಗುದ್ದಾಟವೋ
ಇತ್ತೀಚಿನ ದಿನಗಳಲ್ಲಿ ಮದುವೆಯ ಸೀಸನ್ ನಡೆಯುತ್ತಿದೆ. ಹೀಗಿರುವಾಗ ವಧು-ವರರಿಗೆ ಸಂಬಂಧಿಸಿದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ. ಇತ್ತೀಚೆಗೆ ಒಂದು ವಿಡಿಯೊ ವೈರಲ್ ಆಗಿದ್ದು, ಅದರಲ್ಲಿ ವಧು-ವರರ ನಡುವಳಿಗೆ ವೇದಿಕೆಯ ಮುಂಬಾಗದಲ್ಲಿ ನೆರೆದಿದ್ದ ಜನರನ್ನು ಆಶ್ಚರ್ಯಗೊಳಿಸಿದೆ.
ಇಂದಿನ ಮದುವೆಗಳಲ್ಲಿ ಕ್ಷಣಮಾತ್ರದಲ್ಲಿ ವಿವಾದಗಳು ಹೆಚ್ಚಾಗುತ್ತಿದ್ದು, ಅಲ್ಲಿದ್ದವರು ಅದನ್ನು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವುದು ಅಂತರ್ಜಾಲದಲ್ಲಿ ಕಣ್ಣಿಗೆ ರಾಚುತ್ತಿವೆ. ಕೆಲ ಬಾರಿ ಮದುವೆಯಲ್ಲಿ ಕೆಲ ನಡೆ ಅಚ್ಚರಿ ಮೂಡಿಸುತ್ತವೆ. ಏಕೆಂದರೆ ಶುಭ ಕಾರ್ಯದ ಸಂದರ್ಭದಲ್ಲಿ ವಧು-ವರರ ಮಧ್ಯೆ ಜಗಳ ಆಗುತ್ತಿರುವುದು ಕಂಡು ಬರುತ್ತಿದೆ. ಇದನ್ನು ನಿರೀಕ್ಷಿಸದವರು ಆಶ್ಚರ್ಯಗೊಳ್ಳುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮದುವೆ ಸಂದರ್ಭದಲ್ಲಿ ಇಂತಹ ಘಟನೆ ನಡೆದಿರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಇದನ್ನು ಕಂಡು ಸೋಷಿಯಲ್ ಮೀಡಿಯಾ ಬಳಕೆದಾರರೂ ತಲೆತ್ತಗ್ಗಿಸಿದ್ದಾರೆ.

ವರ ತನಿಸಿದ ಸಿಹಿತಿಂಡಿ ಒಲ್ಲೇ ಎಂದ ವಧು
ಇದೀಗ ಹೆಚ್ಚು ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ವಧುವಿನ ಕೋಪ ಏಳನೇ ಸ್ವರ್ಗಕ್ಕೆ ತಲುಪಿದೆ. ಮಾಲೆ ಹಾಕಿದ ನಂತರ ವಧು-ವರರು ವೇದಿಕೆ ಮೇಲೆ ನಿಂತಿರುವುದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. ಇದರ ನಂತರ, ವರನು ಮುಂದಿನ ಆಚರಣೆಯನ್ನು ಪೂರ್ಣಗೊಳಿಸಿ, ವಧುವಿಗೆ ಸಿಹಿತಿಂಡಿಗಳನ್ನು ತಿನ್ನಿಸಲು ತನ್ನ ಕೈಯನ್ನು ಚಾಚುತ್ತಾನೆ, ಆದರೆ ವಧು ತನ್ನ ಕೈಯಿಂದ ಸಿಹಿತಿಂಡಿಗಳನ್ನು ತೆಗೆದುಕೊಂಡು ಅತಿಥಿಗಳ ಕಡೆಗೆ ಜೋರಾಗಿ ಎಸೆಯುತ್ತಾಳೆ. ಇದಾದ ನಂತರ ಅಲ್ಲಿನ ವಾತಾವರಣ ತುಂಬಾ ಹದಗೆಡುತ್ತದೆ. ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ಜನ ಜೋರಾಗಿ ಕೂಗಲಾರಂಭಿಸುತ್ತಾರೆ.

ಕೋಪಗೊಂಡ ವಧು
ವಿಷಯ ಇಲ್ಲಿಗೆ ಮುಗಿಯುವುದಿಲ್ಲ, ಇದಾದ ನಂತರ ವಧುವಿನ ಸರದಿ ಬರುತ್ತದೆ ಮತ್ತು ವರನಿಗೆ ತನ್ನ ಕೈಯಿಂದ ಲೋಟದಲ್ಲಿ ನೀರು ಕುಡಿಸಲು ಅವಳು ಮುಂದಾಗುತ್ತಾಳೆ. ನಂತರ ವರನು ಸಹ ಅಸಮಾಧಾನವನ್ನು ತೋರಿಸುತ್ತಾನೆ ಮತ್ತು ವಧುವಿನ ಕೈಯಲ್ಲಿ ಹಿಡಿದಿದ್ದ ಲೋಟವನ್ನು ತಳ್ಳುತ್ತಾನೆ. ಇದರ ನಂತರ ವಧು ಹೆಚ್ಚು ಕೋಪಗೊಳ್ಳುತ್ತಾಳೆ ಮತ್ತು ಅತಿಥಿಗಳ ಕಡೆಗೆ ಲೋಟವನ್ನು ಎಸೆಯುತ್ತಾಳೆ. ವಧುವಿನ ಇಂತಹ ಕೋಪದ ಸ್ವಭಾವವನ್ನು ನೋಡಿ ಮದುವೆಗೆ ಬಂದವರು ಬೆರಗಾಗಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್
ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋಗೆ ಬಳಕೆದಾರರು ತೀವ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ. ವಧು ಏಕೆ ಕೋಪಗೊಂಡಳು ಮತ್ತು ಅವಳು ಏಕೆ ಹೀಗೆ ಮಾಡಿದಳು ಎಂದು ತಿಳಿಯಲು ಅನೇಕ ಬಳಕೆದಾರರು ಬಯಸುತ್ತಾರೆ. ಎಷ್ಟೋ ಜನ ವಧುವಿನ ವರ್ತನೆಯನ್ನು ಕಂಡು ಬೆರಗಾಗಿದ್ದಾರೆ. ಆದರೆ, ಈ ವಿಡಿಯೋ ಎಲ್ಲಿಂದ ಬಂದಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಆದರೆ ಈ ಮದುವೆಯ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಯಲ್ಲಿದೆ. ವಧುವಿನ ಕೋಪದ ಈ ವಿಡಿಯೋವನ್ನು ನೀವೂ ನೋಡಿ.
(ಒನ್ಇಂಡಿಯಾ ಸುದ್ದಿ)
-
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್ -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ












Click it and Unblock the Notifications