ವಿಡಿಯೋ: ಜ್ವಾಲಾಮುಖಿ ಸ್ಪೋಟಿಸುವಾಗ ಹತ್ತಿರದಿಂದ ಸೆಲ್ಫಿ ತೆಗೆದುಕೊಂಡ ಪ್ರವಾಸಿಗರು
ಜ್ವಾಲಾಮುಖಿ ಸ್ಫೋಟದ ಮುನ್ಸೂಚನೆ ತಿಳಿಯುತ್ತಿದ್ದಂತೆ ಆ ಪ್ರದೇಶದ ಸುತ್ತ ಮುತ್ತ ಜನ ವಾಸಿಸುವುದು ಒಂದು ಕಡೆ ಇರಲಿ ಪ್ರಾಣಿ-ಪಕ್ಷಿಗಳೂ ಸುಳಿದಾಡುವುದಿಲ್ಲ. ಯಾಕೆಂದರೆ ಬೆಂಕಿಯ ಜ್ವಾಲೆ ಸ್ಪೋಟದ ತೀವ್ರತೆ ಆ ಮಟ್ಟದ್ದಾಗಿರುತ್ತದೆ. ಬೆಂಕಿ ಜ್ವಾಲೆ ಆವರಿಸಿಬಿಟ್ಟರೆ ಮುಗಿತು ಉಳಿದುಕೊಳ್ಳುವ ಮಾತೇ ಇಲ್ಲ. ಹೀಗಿರುವಾಗ ಇಲ್ಲೊಂದು ವೈರಲ್ ವಿಡಿಯೋದಲ್ಲಿ ಜನರ ಗುಂಪೊಂದು ಜ್ವಾಲೆಯ ಸ್ಪೋಟವನ್ನು ವೀಕ್ಷಿಸಿದ್ದಾರೆ. ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಕಂಡು ಜನ ಒಂದು ಕ್ಷಣ ದಂಗಾಗಿದ್ದಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.
ಅಷ್ಟಕ್ಕೂ ವಿಡಿಯೋದಲ್ಲಿ ಏನಿದೆ ಗೊತ್ತಾ? ಒಂದು ಎತ್ತರದ ಬೆಟ್ಟದ ತುದಿಯಲ್ಲಿ ಜ್ವಾಲಾಮುಖಿ ಸ್ಪೋಟಗೊಳ್ಳುತ್ತದೆ. ಅದೇ ಬೆಟ್ಟಕ್ಕೆ ಹತ್ತಿರದಲ್ಲಿ ಮತ್ತೊಂದು ಬೆಟ್ಟದ ತುದಿಯ ಮೇಲೆ ನಿಂತ ಜನ ವಿಡಿಯೋ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಕೆಲವರು ಸ್ಪೋಟದ ತೀವ್ರತೆಯನ್ನು ನೋಡಿ ಆಶ್ಚರ್ಯದಿಂದ ಕಿರುಚಾಡುತ್ತಾರೆ. ಕತ್ತಲೆಯಲ್ಲಿ ಜ್ವಾಲೆಯ ಸ್ಪೋಟ ನೋಡುಗರನ್ನು ಬೆರಗುಗೊಳಿಸಿದೆ. ಜ್ವಾಲೆ ಸ್ಪೋಟಗೊಳ್ಳುತ್ತಿದ್ದಂತೆ ಜ್ವಾಲೆ ಬೆಟ್ಟವನ್ನೆ ಆವರಿಸುತ್ತದೆ. ಅಲ್ಲಲ್ಲಿ ಬೆಂಕಿಯ ಕಿಡಿ ನಕ್ಷತ್ರದಂತೆ ಗೋಚರಿಸುತ್ತದೆ. ಇದೊಂದು ಅದ್ಭುತದ ಜೊತೆಗೆ ಅಪಾಯಕಾರಿ ದೃಶ್ಯವೂ ಹೌದು. ಆದರೆ ಈ ಜ್ವಾಲೆಯ ಕಿಡಿ ಅಥವಾ ಬೆಂಕಿಯ ಉಂಡೆಗಳು ಜನರಿರುವ ಬೆಟ್ಟದ ಕಡೆಗೆ ಹಾರುವುದಿಲ್ಲ. ಹೀಗಾಗಿ ಜನ ಯಾವುದೇ ಅಪಾಯ ಆತಂಕವಿಲ್ಲದೆ ಜ್ವಾಲೆ ಸ್ಪೋಟವನ್ನು ಕಣ್ತುಂಬಿಕೊಂಡಿದ್ದಾರೆ. ಕೆಲವು ಪ್ರವಾಸಿಗರು ಸುರಕ್ಷಿತ ಸ್ಥಳಕ್ಕೆ ಹಿಂತಿರುಗಿದರು, ಇತರರು ವಿನೋದದಿಂದ ಈ ದೃಶ್ಯವನ್ನು ನೋಡಿದರು.
ಕತ್ತಲಲ್ಲಿ ಈ ದೃಶ್ಯ ತುಂಬಾ ಹತ್ತಿರದಲ್ಲಿ ನಡೆದಂತೆ ಸೆರೆಯಾಗಿದ್ದರೂ ಜನ ಮತ್ತೊಂದು ಬೆಟ್ಟದಲ್ಲಿ ನಿಂತಿರುವುದನ್ನು ಗಮನಿಸಬಹುದು. ಆದರೂ ಈ ವೈರಲ್ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಆಗಲಿ, ಎಲ್ಲಿ ನಡೆದಿದೆ ಎನ್ನುವ ಬಗ್ಗೆಯಾಗಲಿ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋವನ್ನು ವೈರಲ್ ಹಾಗ್ ಪೋಸ್ಟ್ ಮಾಡಿದ್ದು, 20 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕೆಲವು ಪ್ರವಾಸಿಗರು ಸುರಕ್ಷಿತ ಸ್ಥಳಕ್ಕೆ ಹಿಂತಿರುಗಿದರು, ಇತರರು ವಿನೋದದಿಂದ ಈ ದೃಶ್ಯವನ್ನು ನೋಡಿದರು.

ವಿಡಿಯೊವನ್ನು ಇಲ್ಲಿ ವೀಕ್ಷಿಸಿ:
ವೈರಲ್ ಆಗಿರುವ ವಿಡಿಯೋ ನೆಟ್ಟಿಗರು ಪ್ರವಾಸಿಗರ ಸುರಕ್ಷತೆಯ ಬಗ್ಗೆ ಸಂಪೂರ್ಣ ಕಾಳಜಿ ವಹಿಸುವಂತೆ ಮಾಡಿದೆ. "ನಿಮ್ಮ ಫೋನ್ ಅನ್ನು ನಿಮ್ಮ ಜೇಬಿನಲ್ಲಿ ಇರಿಸಿ ಮತ್ತು ಓಡಿ!" ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ.
-
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications