Viral Video: ಟ್ರಾಫಿಕ್ ಪೊಲೀಸ್ ಕಾಲಿಗೆ ಸವಾರನಿಂದ ಮಸಾಜ್: ಇದು ದರ್ಪವಾ? ಏನಿದು ತಿಳಿಯಿರಿ
ಪುಣೆ, ಜೂನ್ 03: ಪೊಲೀಸ್ ಸಿಬ್ಬಂದಿಯು ಸದಾ ತಮ್ಮ ಕಾರ್ಯದಲ್ಲಿ ನಿರತರಾಗಿರುತ್ತಾರೆ. ಕೆಲವರಂತೂ ಅನಾರೋಗ್ಯದ ಮಧ್ಯದಲ್ಲೇ ನಿಯೋಜಿತ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಇದೇ ರೀತಿ ಕೆಲಸ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಕಾಲಿಗೆ ಮಸಾಜ್ ಮಾಡಿದ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ.
ಪುಣೆಯಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಅಪರಿಚಿತ ಯುವಕರಿಂದ ಕಾಲಿಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಏನಾಗಿದೆ ಎಂದು ಹತ್ತಿರದಿಂದ ನೋಡಿದರೆ, ಪೊಲೀಸ್ ಕಾಲು ನೋವಿನಿಂದ ಬಳಲುತ್ತಿರುವುದು ಗೊತ್ತಾಗುತ್ತದೆ.

ಇತ್ತೀಚೆಗೆ ಪುಣೆಯಲ್ಲಿ ಪೋರ್ಸೆ ಕಾರು ಅಪಘಾತವಾಗಿತ್ತು. ಇದರಲ್ಲಿ ಅಪ್ರಾಪ್ತ ಬಾಲಕನಿಂದ ಕೃತ್ಯ ನಡೆದಿತ್ತು. ಆತನ ರಕ್ತದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ಆತನ ತಾಯಿಯ ರಕ್ತದ ಮೂಲಕ ಬದಲಾಯಿಸಲಾಗಿತ್ತು ಎಂಬುದು ಖಚಿತವಾದ ಬಳಿಕ ಪೊಲೀಸರು ಬಾಲ ಆರೋಪಿಯ ತಾಯಿಯನ್ನು ಬಂಧಿಸಿದ್ದಾರೆ. ಸೋಮವಾರ ಕೋರ್ಟ್ಗೆ ಹಾಜರು ಪಡಿಸಲಾಗಿದೆ.
ಇದು ಪೊಲೀಸ್ ದರ್ಪವಾ? ವಿಡಿಯೋ ಬಗ್ಗೆ ಸ್ಪಷ್ಟನೆ ಏನಿದೆ?
ಈ ಸ್ಥಳದಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ವಾಹನ ಸವಾರರೊಬ್ಬರ ಕಾಲಿಗೆ ಮಸಾಜ್ ಮಾಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದನ್ನು ಕೆಲವರು ತಪ್ಪಾಗಿ ಭಾವಿಸಿದ್ದಾರೆ. ಪೊಲೀಸ್ ದರ್ಪ ಎಂದಿದ್ದಾರೆ. ಬಳಿಕ ಪುಣೆ ಪೊಲೀಸ್ ಉಪ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
57 ವರ್ಷ ವಯಸ್ಸಿನ ಮತ್ತು ತೀವ್ರ ಮಧುಮೇಹ ಹೊಂದಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ಈ ಸ್ಥಳದಲ್ಲಿ 'ಕುಡಿದು ವಾಹನ ಚಾಲನೆ' ತಪಾಸಣೆ ನಡೆಸುತ್ತಿದ್ದರು. ಎರಡು ದಿನಗಳ ಕಾಲ ನಿರಂತರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿದ್ದರು. ಕರ್ತವ್ಯದ ಒತ್ತಡದಲ್ಲಿದ್ದ ಅವರ ರಕ್ತದಲ್ಲಿನ ಸಕ್ಕರೆ 550ಕ್ಕೆ ಏರಿದ್ದರಿಂದ ಅವರು ತೀವ್ರ ಕಾಲಿನ ಸೆಳೆತ ಎದುರಿಸಿದ್ದರು.
ಪೊಲೀಸ್ ಸಿಬ್ಬಂದಿ ಕಾಲುನೋವಿನಿಂದ ಬಳಲುತ್ತಿದ್ದನ್ನು ಕಂಡು ಒಬ್ಬ ಪ್ರಯಾಣಿಕರು ಸ್ವಯಂ ಪ್ರೇರಿತವಾಗಿ ಪೊಲೀಸ್ ಸಿಬ್ಬಂದಿಗೆ ಕಾಲಿಗೆ ಮಸಾಜ್ ಮಾಡಿ ಸಹಾಯ ಮಾಡಿದ್ದಾರೆ. ಅನಾರೋಗ್ಯ ವೇಳೆ ಅವರಿಗೆ ನೆರವಾಗಿದ್ದಾರೆ. ಈ ಘಟನೆಯ ವಿಡಿಯೋ ಮಾಡಿ ದಾರಿಹೋಕರು ವೈರಲ್ ಮಾಡಿದ್ದಾರೆ. ಈ ಬಗ್ಗೆ ತಪ್ಪು ಅರ್ಥೈಸುವುದು ಬೇಡ ಎಂದು ಪೊಲೀಸ್ ಉಪ ಆಯುಕ್ತರು (ಟ್ರಾಫಿಕ್) ಸ್ಪಷ್ಟನೆ ನೀಡಿದರು.
ಕಾರು ಅಪಘಾತದ ಸ್ಥದಲ್ಲಿ ಪೊಲೀಸ್ ಸಿಬ್ಬಂದಿ ಎರಡು ದಿನದಿಂದ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿ ಅವರು ಕುಸಿದು ಬಿದ್ದಿದ್ದರು. ಆಗ ಕಾಲಿಗೆ ಮಸಾಜ್ ಮಾಡುವ ವಿಡಿಯೋ ಸೆರೆ ಹಿಡಿದು ವೈರಲ್ ಮಾಡಲಾಗಿದೆ. ವಾಸ್ತವದಲ್ಲಿ ಇದು ಮಾನೀವಿಯತೆ ಕೆಲಸವಾಗಿದೆ. ಈ ನಿಟ್ಟಿನಲ್ಲಿ ವಿಡಿಯೋ ವೈರಲ್ ಆಗಬೇಕಿತ್ತು ಎಂದು ಕೆಲವರು ಅಭಿಪ್ರಾಯ ಹೊರ ಹಾಕಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ












Click it and Unblock the Notifications