ಮಹಾನ್ ಚೇತನ ಕುವೆಂಪು ಹುಟ್ಟುಹಬ್ಬದ ಸವಿನೆನಪು
ಕನ್ನಡ ನಾಡಲ್ಲಿ ಕನ್ನಡಕ್ಕೆ ಪ್ರಥಮ ಮತ್ತು ಪೂಜ್ಯ ಸ್ಥಾನ ಸಿಗಲಿ ಎಂದ ಮಹಾನ್ ಚೇತನ ನಮ್ಮ ನಾಡಿನ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರ ಜನ್ಮದಿನ ಇಂದು. ಇವರು 1904 ಡಿಸೆಂಬರ್ 29 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕ, ಕನ್ನಡಕ್ಕೆ ಇವರು ಕೊಟ್ಟ ಕೊಡುಗೆ ಅಪಾರ.1987 ರಲ್ಲಿ ಶಿವಮೊಗ್ಗದಲ್ಲಿ ಕುವೆಂಪು ಗೌರವಾರ್ಥವಾಗಿ ಕುವೆಂಪು ವಿಶ್ವವಿದ್ಯಾಲಯ ಸ್ಥಾಪಿಸಲಾಯಿತು.
ಅವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ವಿಶ್ವ ಮಾನವ ದಿನ ಎಂದು ಆಚರಿಸುತ್ತಾರೆ. ಶ್ರೀರಾಮಾಯಣ ದರ್ಶನಂ ನಂತಹ ಮಹಾ ಕಾವ್ಯ ದ ಮೂಲಕ ಇಡೀ ವಿಶ್ವವೇ ಕನ್ನಡದ ಬಗ್ಗೆ ಇರುವ ಅಭಿಪ್ರಾಯವನ್ನು ಬದಲಾಯಿಸಿಕೊಂಡು ಕನ್ನಡ ಭಾಷೆಗೆ ಚಿನ್ನದ ಕಿರೀಟ ತೊಡಿಸಿದರು.
ನಾವು ಯಾರನ್ನು ಗೌರವಿಸುತ್ತೇವೆಯೋ ಅವರ ಗುಣಗಳೇ ನಮ್ಮಲ್ಲಿ ಮೂಡುತ್ತವೆ ಎಂಬ ಅವರ ಮಾತು ನಿಜಕ್ಕೂ ಎಲ್ಲರೂ ಅರಿಯಬೇಕು. ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಜನಿಸಿದರು. ಈ ಕವಿ ಕನ್ನಡ ಸಾಹಿತ್ಯ ಅಕ್ಷರ ಲೋಕಕ್ಕೆ ಮಹತ್ವದ ಕೊಡುಗೆ ನೀಡಿದ ಅಕ್ಷರ ದಾಸೋಹಿ.

ಎಲ್ಲಾ ಧರ್ಮಗಳು ಮನುಷ್ಯ ಧರ್ಮವೇ ಶ್ರೇಷ್ಠ ಎಂದಿವೆ, ಅರ್ಥೈಸಿಕೊಳ್ಳುವಲ್ಲಿ ಸೋತ ನಾವು ನಮ್ಮದೇ ಶ್ರೇಷ್ಠ ಎನ್ನುತ್ತೇವೆ ಎಂಬ ಈ ಜಗದ ಕವಿಯ ಸಂದೇಶವನ್ನು ನಾವೆಲ್ಲರೂ ಅರ್ಥೈಸಿಕೊಂಡು ಜಾತೀಯತೆ ಬಿಡಬೇಕು. ಇದಕ್ಕೆ ಸುಂದರವಾದ ಉದಾಹರಣೆ ಅಂದರೆ ನಮ್ಮ ಕನ್ನಡಿಗರ ಪಾಲಿನ ರಕ್ಷಾ ಕವಚವಾಗಿರುವ ಕರ್ನಾಟಕ ರಕ್ಷಣಾ ವೇದಿಕೆಗೆ ಕುವೆಂಪು ಅವರು ಆದರ್ಶ ಕವಿ ಇಂದಿಗೂ ಕೂಡ ಕರವೇಯಲ್ಲಿ ಜಾತಿಬೇಧವಿಲ್ಲ. ಇರುವುದೇ ಒಂದೇ ಮನುಷ್ಯ ಜಾತಿ ಎಂದು ಅನುಸರಿಸಿಕೊಂಡು ಬಂದಿದೆ. ಅದಕ್ಕೆ ಕನ್ನಡ ಜಾತಿ ಕನ್ನಡಧರ್ಮ ಕನ್ನಡವೇ ದೇವರು ಎಂಬ ಸಿದ್ಧಾಂತದ ಅಡಿಯಲ್ಲಿ ಕರವೇ ಕೆಲಸ ಕಾರ್ಯವನ್ನು ಮಾಡುತ್ತಿದೆ.
ಇಂದಿನ ಪೀಳಿಗೆಗಳಿಗೆ ಕುವೆಂಪು ಮಾತು, ಸಂದೇಶಗಳು ಭಾರಿ ಮಟ್ಟದಲ್ಲಿ ಪರಿಣಾಮ ಬೀರುತ್ತದೆ. ಇಂದಿನ ಯುವ ಜನಾಂಗಕ್ಕೆ ಇವರ ಕನ್ನಡದ ಅದ್ಬುತ ಕೊಡುಗೆಯು ಸ್ಪೂರ್ತಿದಾಯಕ. ಕುವೆಂಪುರವರ ಕನ್ನಡದ ಬಗ್ಗೆ ಚಿಂತನೆ, ಕಾಳಜಿ, ಮಾತಿನ ಪ್ರಜ್ಞೆ, ರೈತರ ಬಗ್ಗೆ ಇರುವ ಗೌರವ ಎಲ್ಲವೂ ಸ್ಪೂರ್ತಿದಾಯಕ. ಬಾರಿಸು ಕನ್ನಡ ಡಿಂಡಿಮವ ಎನ್ನುವ ಮೂಲಕ ಕನ್ನಡಕ್ಕೆ ಅದ್ಭುತವಾದ ಹಾಡನ್ನು ಕೊಟ್ಟು ಜೈ ಭಾರತ ಜನನಿಯ ಎಂಬ ಅರ್ಥ ಪೂರ್ಣವಾದ ನಾಡಗೀತೆಯಾಗಿ ನೀಡಿದ ನಮ್ಮ ವಿಶ್ವಮಾನವ ಕವಿ.
ಕುವೆಂಪು ರಾಷ್ಟೀಯ ಪ್ರತಿಷ್ಠಾನ ಇವರ ಮನೆಯನ್ನು ಕವಿಮನೆ ಹೆಸರಿನ ಮ್ಯೂಸಿಯಂ ಮಾಡಿದ್ದಾರೆ. ಮನೆಯ ಮೂಲ ಸ್ವರೂಪವನ್ನು ಕಾಯ್ದುಕೊಂಡು ನವೀಕರಿಸಿ ಮ್ಯೂಸಿಯಮ್ ಆಗಿ ಪರಿವರ್ತಿಸಿಲಾಗಿದೆ. ಕುಪ್ಪಳಿಯು ಶಿವಮೊಗ್ಗದಿಂದ 80 ಕಿ.ಮೀ ದೂರದಲ್ಲಿದೆ ಹಾಗೂ ತೀರ್ಥಹಳ್ಳಿಯಿಂದ 10 ಕಿ.ಮೀ ದೂರದಲ್ಲಿದೆ.
ವಿಶಾಲವಾದ ಅಂಗಳದ ಮಧ್ಯೆ ಕಂಗೊಳಿಸುವ 'ಕವಿಮನೆ' ಸೊಗಸು ಪ್ರತಿಯೊಬ್ಬ ಕನ್ನಡಿಗನು ಒಂದು ಸಲಿ ಆದರೂ ನೋಡಿಬೇಕು. ಹೀಗೆ ಇವರ ಬಗ್ಗೆ ಹೇಳುವುದಕ್ಕೆ ಪದಗಳು ಸಾಲದು.
ಅಲ್ಪ ನಾನು ಎಂದು ಕುಗ್ಗಿ ಮುದುಗ ಬೇಡವೋ,
ಓ ಅಲ್ಪವೆ, ಅನಂತದಿಂದ ಗುಣಿಸಿಕೊ,
ನೀನ್ ಅನಂತವಾಗವೆ!!!!
ಇದು ವಯಕ್ತಿಕವಾಗಿ ನಾನು ಬಹಳ ಇಷ್ಟ ಪಡುವ ವಾಕ್ಯಗಳು ಇದನ್ನು ಹೇಳುವ ಮೂಲಕ ನಮ್ಮ ಹೆಮ್ಮೆಯ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ಜಯಂತಿಯ ಶುಭಾಶಯಗಳು.
-
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications