ಕೇಂದ್ರದ ಆತಂಕಮಯ ರೀತಿಯಲ್ಲಿ ಒತ್ತಡವನ್ನು ಹೇರುವ ತಂತ್ರ
ಮತದಾರರ ಪಟ್ಟಿಯಲ್ಲಿರುವ ನಕಲಿ ಹೆಸರುಗಳನ್ನು ತೆಗೆದು ಹಾಕುವುದಕ್ಕಾಗಿ ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಕಾರ್ಡ್ ಅನ್ನು ಜೋಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇದೊಂದು ಅಸಮರ್ಪಕ ಕ್ರಮವಾಗಿದೆ.
ಪ್ರಜಾಪ್ರಭುತ್ವವನ್ನು ನಿರ್ಧರಿಸುವ ಚುನಾವಣೆಯಲ್ಲಿ ಪಾಲ್ಗೊಳ್ಳಲು ಕಡ್ಡಾಯವಾಗಿರುವ ಮತದಾರರ ಗುರುತಿನ ಚೀಟಿಯ ವಿಷಯದಲ್ಲಿ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿರುವ ಸರ್ಕಾರವು ಚುನಾವಣಾ ವರ್ಷದಲ್ಲಿ ಆಧಾರ್ ಜೋಡಿಸಬೇಕೆಂಬ ಅಸಮರ್ಪಕ ಕೆಲಸಕ್ಕೆ ಕೈ ಹಾಕಿದ್ದು ಇದು ಪ್ರಜೆಯೊಬ್ಬರ ಸಂವಿಧಾನಾತ್ಮಕ ಹಕ್ಕಿನ ಸ್ಪಷ್ಟ ಉಲ್ಲಂಘನೆ ಆಗಿದೆ.
ವೋಟರ್ ಐಡಿಗೆ ಆಧಾರ್ ಜೋಡಿಸುವ ವಿಷಯದಲ್ಲಿ ಅಧಿಕಾರಿಗಳು ಮತ್ತು ಆಡಳಿತ ಪಕ್ಷದ ಕಾರ್ಯಕರ್ತರು ಜನ ಸಾಮಾನ್ಯರನ್ನು "ಆಧಾರ್ ಕಾರ್ಡ್ ಜೋಡಿಸುವುದು ಕಡ್ಡಾಯ ಮತ್ತು ಆಧಾರ್ ಕಾರ್ಡ್ ಜೋಡಿಸುವುದು ಐಚ್ಛಿಕ" ಎಂದು ಗೊಂದಲ ಮೂಡಿಸುತ್ತಿದ್ದಾರೆ.

ಈ ಗೊಂದಲದಿಂದ ಎಷ್ಟೋ ಜನ "ನಮ್ಮ ಆಧಾರ್ ಜೋಡಣೆ ಆಗಿಲ್ಲ, ನಮಗೆ ಮತ ಹಾಕಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೂ ಬರುವಂತಹ ಸಾಧ್ಯತೆಯಿದ್ದು, ಇದು ಚುನಾವಣಾ ಪ್ರಕ್ರಿಯೆಯ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ".
ವೋಟರ್ ಐಡಿಯ ಜೊತೆಗೆ ಆಧಾರ್ ಕಾರ್ಡ್ನ್ನು ಜೋಡಿಸಬೇಕು ಎಂದು ಸರ್ಕಾರದವರು ಹೇಳುತ್ತಿದ್ದಾರೆಯೇ ವಿನಃ, ಆಧಾರ್ ಕಾರ್ಡ್ ಜೋಡಿಸದಿದ್ದರೆ ಏನಾಗುತ್ತದೆ ಎಂಬುದರ ಬಗ್ಗೆ ಜನರಿಗೆ ಹೇಳುತ್ತಿಲ್ಲ. ಹೀಗಾಗಿ ಇದು ಒಂದು ರೀತಿಯಲ್ಲಿ ಆತಂಕಮಯ ರೀತಿಯಲ್ಲಿ ಒತ್ತಡವನ್ನು ಹೇರುವ ತಂತ್ರವಾಗಿದೆ.

ಆಧಾರ್ ಕಾರ್ಡ್ ವೋಟರ್ ಐಡಿಯಲ್ಲಿಯ ನಕಲಿ ಹೆಸರನ್ನು ತೆಗೆದು ಹಾಕುತ್ತದೆಯೇ? ವೋಟರ್ ಐಡಿಯಲ್ಲಿರುವ ನಕಲಿ ಹೆಸರನ್ನು ತೆಗೆದು ಹಾಕಲು ಆಧಾರ್ ಕಾರ್ಡ್ ಜೋಡಿಸಬೇಕು ಎಂದು ಹೇಳಲಾಗುತ್ತಿದೆ. ಆದರೆ ದುರಾದೃಷ್ಟವೆಂದರೆ ಕಳೆದ ಬಾರಿಯ ಮಹಾ ಲೆಕ್ಕ ಪರಿಶೋಧಕರ ವರದಿಯ ಪ್ರಕಾರ ಭಾರತದಲ್ಲಿ ಸುಮಾರು 5 ಲಕ್ಷದಷ್ಟು ನಕಲಿ ಆಧಾರ್ ಕಾರ್ಡ್ ಗಳು ಪತ್ತೆಯಾಗಿದೆ.
ಹೀಗಿರುವಾಗ ಯಾವ ಆಧಾರದ ಮೇಲೆ ವೋಟರ್ ಐಡಿಗೆ ಆಧಾರ್ ಕಾರ್ಡ್ ಅನ್ನು ಜೋಡಿಸಬೇಕು ಎಂದು ಸರ್ಕಾರ ಜನರಿಗೆ ಹೇಳುತ್ತಿದೆ?
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications