ವೀಕೆಂಡ್ ಗೆ ಹೇಳಿಮಾಡಿಸಿದ ತಾಣ ಮಡಿಕೇರಿಯ ನಿಶಾನೆಮೊಟ್ಟೆ
ಕೊಡಗಿನ ನಿಸರ್ಗದ ನಡುವೆ ನೂರಾರು ಪ್ರವಾಸಿ ತಾಣಗಳು ತಮ್ಮದೇ ವೈಶಿಷ್ಟ್ಯಮತ್ತು ಚೆಲುವಿನಿಂದ ಕಂಗೊಳಿಸುತ್ತಿದ್ದರೂ ಪ್ರಚಾರದ ಮತ್ತು ಮೂಲ ಸೌಲಭ್ಯದ ಕೊರತೆಯಿಂದಾಗಿ ಪ್ರವಾಸಿಗರನ್ನು ಸೆಳೆಯುವಲ್ಲಿ ವಿಫಲವಾಗಿ ಎಲೆಮರೆಯ ಕಾಯಿಯಂತೆ ಉಳಿದು ಹೋಗಿವೆ. ಇಂತಹ ಪ್ರವಾಸಿ ತಾಣಗಳ ಪೈಕಿ ನಿಶಾನೆಮೊಟ್ಟೆಯೂ ಒಂದು.
ಪ್ರಕೃತಿ ಪ್ರೇಮಿಗಳಿಗೆ ಹೇಳಿ ಮಾಡಿಸಿದ ತಾಣ ಇದು. ಬೆಟ್ಟಸಾಲುಗಳು... ದೂರದ ಕಾಫಿ, ಏಲಕ್ಕಿ ತೋಟಗಳು... ಗದ್ದೆ ಬಯಲುಗಳು... ಅಂಕುಡೊಂಕಾದ ರಸ್ತೆಗಳಲ್ಲಿ ಸರ್ಕಸ್ ಮಾಡುತ್ತಾ ಸಾಗುವ ವಾಹನಗಳು... ಮೇಲಿನ ಗುಡ್ಡದಲ್ಲಿ, ಕೆಳಗಿನ ಹಳ್ಳದಲ್ಲಿ ಅಲ್ಲಲ್ಲಿ ಕಾಣುವ ಹೆಂಚಿನ ಮನೆಗಳು... ದೂರದ ಅರಣ್ಯದ ನಡುವೆ ಮಲೆಕುಡಿಯರ ಜೋಪಡಿಗಳಿಂದ ಗಾಳಿಯಾಡುತ್ತಾ ಮೇಲೇಳುವ ಹೊಗೆ... ಒಂದೇ ಎರಡೇ, ಹತ್ತಾರು ಸುಂದರ, ವಿಸ್ಮಯ ನೋಟಗಳು ಹುಮ್ಮಸ್ಸು ತುಂಬುತ್ತವೆ.

ಈ ತಾಣಕ್ಕೆ ಮಡಿಕೇರಿಯಿಂದ ಹತ್ತು ಕಿ.ಮೀ. ದೂರಕ್ಕೆ ಸಾಗಬೇಕು. ಮಡಿಕೇರಿಯಿಂದ ಸ್ಟೀವರ್ಟ್ ಹಿಲ್ ಮಾರ್ಗವಾಗಿ ಸುಮಾರು ನಾಲ್ಕು ಕಿ.ಮೀ. ದೂರವನ್ನು ಆಯಾಸವಿಲ್ಲದೆ ಕ್ರಮಿಸಬಹುದಾದರೂ ನಂತರದ ಹಾದಿ ಸವಾಲೊಡ್ಡುತ್ತದೆ. ಹಳ್ಳ, ದಿಣ್ಣೆಗಳಿಂದ ಕೂಡಿದ ರಸ್ತೆಯಲ್ಲಿ ಜೀಪು ಹೊರತುಪಡಿಸಿ ಇನ್ಯಾವುದೇ ವಾಹನಗಳಲ್ಲಿ ಹೋಗುವುದು ಕಷ್ಟ. ಹಾಗಾಗಿ ಹೆಚ್ಚಿನವರು ನಡೆದುಕೊಂಡೇ ಹೋಗುತ್ತಾರೆ. ಮಡಿಕೇರಿಯಿಂದ ಹೊರಟು ನಿಶಾನೆಮೊಟ್ಟೆ ತಪ್ಪಲು ತಲುಪಬೇಕಾದರೆ ಕನಿಷ್ಠ ಒಂದು ಗಂಟೆಯಾದರೂ ಬೇಕು.
ಮಡಿಕೇರಿಗೆ ನೀರು ಒದಗಿಸುವ ಜಲಾಗಾರ ಕೂಟುಹೊಳೆ ಹಾಗೂ ಮಡಿಕೇರಿ ಪಟ್ಟಣದ ವಿಹಂಗಮ ನೋಟವೂ ಇಲ್ಲಿ ಲಭ್ಯ. ನಿಶಾನೆಮೊಟ್ಟೆಯ ಮೇಲ್ಭಾಗದಲ್ಲಿ ವಿಶಾಲ ಸಮತಟ್ಟಾದ ಜಾಗವಿರುವುದರಿಂದ ಆಡಿ ಕುಣಿದು ಕುಪ್ಪಳಿಸಬಹುದು, ಅಷ್ಟೇ ಅಲ್ಲ ಟೆಂಟ್ ಹಾಕಿ ಅಲ್ಲಿ ರಾತ್ರಿ ಕೂಡ ಕಳೆಯಬಹುದು.

ಈ ಬೆಟ್ಟಕ್ಕೆ ನಿಶಾನೆಮೊಟ್ಟೆ ಎಂಬ ಹೆಸರು ಏಕೆ ಬಂದಿರಬಹುದೆಂಬ ಕುತೂಹಲ ಕಾಡದಿರದು. ಹಿಂದೆ ಕೊಡಗನ್ನು ಆಳುತ್ತಿದ್ದ ರಾಜರ ಕಾಲದಲ್ಲಿ ಶತ್ರುಗಳು ದಂಡೆತ್ತಿ ಬರುವುದನ್ನು ಅರಿಯಲು ಈ ಗುಡ್ಡದ ಮೇಲೆ ಸೈನಿಕರನ್ನಿರಿಸಲಾಗುತ್ತಿತ್ತಂತೆ. ಈ ಗುಡ್ಡದಿಂದ ನಿಂತು ನೋಡಿದರೆ ದೂರದಿಂದ ಬರುವ ಶತ್ರು ಸೈನ್ಯ ಕಾಣುತ್ತಿತ್ತಂತೆ. ತಕ್ಷಣ ರಾಜನಿಗೆ ಸುದ್ದಿ ಮುಟ್ಟಿಸಿ ಸೈನ್ಯವನ್ನು ಸಜ್ಜುಗೊಳಿಸಿ ಶತ್ರುಗಳನ್ನು ಹಿಮ್ಮೆಟ್ಟಿಸುತ್ತಿದ್ದರಂತೆ. ಘಟ್ಟವನ್ನೇರಿ ಬರುವ ಶತ್ರು ಸೈನಿಕರ ಮೇಲೆ "ನಿಶಾನೆ" ಇಡಲು ಈ ಗುಡ್ಡ ಯೋಗ್ಯವಾಗಿದ್ದರಿಂದ "ನಿಶಾನೆ ಮೊಟ್ಟೆ" ಎಂಬ ಹೆಸರು ಬಂದಿರಬಹುದೆಂದು ಹೇಳಲಾಗುತ್ತಿದೆ.
ಸಾಮಾನ್ಯವಾಗಿ ಕೊಡಗಿನಲ್ಲಿ ಎತ್ತರದ ಜಾಗವನ್ನು ಮೊಟ್ಟೆ ಎಂದು ಕರೆಯುವುದು ರೂಢಿ. ಮಡಿಕೇರಿ ಬಳಿಯ ಎತ್ತರದ ಈ ನಿಶಾನೆಬೆಟ್ಟ ಜನರ ಆಡು ಮಾತಿನಲ್ಲಿ ನಿಶಾನೆಮೊಟ್ಟೆ ಎಂದೇ ಕರೆಯಲ್ಪಡುತ್ತಿದೆ. ನಿಶಾನೆಮೊಟ್ಟೆಗೆ ಪಿಕ್ ನಿಕ್ ಹೋಗುವವರು ತಮ್ಮೊಂದಿಗೆ ತಿಂಡಿ ತಿನಿಸುಗಳನ್ನು ಒಯ್ದರೆ ಒಂದಷ್ಟು ಹೊತ್ತು ಅಲ್ಲಿದ್ದು ಬರಬಹುದು. ಮಡಿಕೇರಿಯಿಂದ ನಿಶಾನೆಮೊಟ್ಟೆಯತ್ತ ಹೆಜ್ಜೆ ಹಾಕುವಾಗ ಸಿಗುವ ಸ್ಟೋನ್ ಹಿಲ್ ಕೂಡ ಒಂದು ಸುಂದರ ವೀಕ್ಷಣಾ ತಾಣ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications