ABP-C Voter Opinion Poll: ಪಶ್ಚಿಮ ಬಂಗಾಳದಲ್ಲಿ ಜನರ ಒಲವು ಯಾರ ಪರ?
ನವದೆಹಲಿ, ಜನವರಿ 18: ಪಶ್ಚಿಮ ಬಂಗಾಳದಲ್ಲಿ ಶೀಘ್ರದಲ್ಲಿಯೇ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ರೀತಿಯಲ್ಲಿ ಸೀಟುಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿ ಎಡಪಂಥೀಯ ನಿಲುವಿನ ಭದ್ರಕೋಟೆಯಲ್ಲಿ ತನ್ನ ಸಾಮ್ರಾಜ್ಯ ಸ್ಥಾಪಿಸುವ ಬಯಕೆ ಹೊಂದಿದೆ. ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸುವುದು ಬಿಜೆಪಿಯ ಗುರಿ.
ಈಗಾಗಲೇ ಟಿಎಂಸಿಯ ಕೆಲವು ಪ್ರಮುಖ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ರಣರಂಗ ಮತ್ತಷ್ಟು ರಂಗೇರಿದೆ. ಬಿಜೆಪಿ ಹಾಗೂ ಟಿಎಂಸಿ ನಡುವೆ ತಮ್ಮ ಅಸ್ತಿತ್ವ ಪ್ರದರ್ಶಿಸಲು ಉಳಿದ ಪಕ್ಷಗಳು ಪ್ರಯತ್ನ ನಡೆಸುವ ಸವಾಲು ಎದುರಿಸಲಿವೆ.
ಬಂಗಾಳದಲ್ಲಿ 294 ವಿಧಾನಸಭೆ ಕ್ಷೇತ್ರಗಳಿದ್ದು, ಕಳೆದ 2016ರ ಚುನಾವಣೆಯಲ್ಲಿ ಟಿಎಂಸಿ 203 ಸೀಟುಗಳಲ್ಲಿ ಗೆಲುವು ಕಂಡಿತ್ತು. 291 ಕಡೆ ಸ್ಪರ್ಧಿಸಿದ್ದ ಬಿಜೆಪಿ ಕೇವಲ ಮೂರು ಸೀಟುಗಳಲ್ಲಿ ಜಯಗಳಿಸಿತ್ತು. 161 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಎಸ್ಪಿ ಒಂದರಲ್ಲಿಯೂ ಗೆದ್ದಿರಲಿಲ್ಲ.
ಎಬಿಪಿ-ಸಿ ವೋಟರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ ಹೇಗಿದೆ ಎನ್ನುವುದು ಬಹಿರಂಗವಾಗಿದೆ. ಮುಂದೆ ಓದಿ.

ಯಾವ ಪಕ್ಷಕ್ಕೆ ಎಷ್ಟು ಸೀಟು?
ಟಿಎಂಸಿ: 158
ಬಿಜೆಪಿ: 102
ಎಡಪಕ್ಷ/ಕಾಂಗ್ರೆಸ್: 30
ಇತರೆ: 4

ರಾಜ್ಯ ಸರ್ಕಾರದ ಆಡಳಿತ ಎಷ್ಟು ತೃಪ್ತಿಕರ
ತುಂಬಾ ತೃಪ್ತಿಕರ: 16%
ತೃಪ್ತಿಕರ: 22%
ಅತೃಪ್ತಿಕರ: 49%
ಹೇಳಲು ಅಸಾಧ್ಯ: 13%

ಮುಖ್ಯಮಂತ್ರಿ ಆಡಳಿತ ಎಷ್ಟು ತೃಪ್ತಿಕರ
ತುಂಬಾ ತೃಪ್ತಿಕರ: 43%
ತೃಪ್ತಿಕರ: 32%
ಅತೃಪ್ತಿಕರ: 22%
ಹೇಳಲು ಅಸಾಧ್ಯ: 03%

ಮೋದಿ ಕಾರ್ಯವೈಖರಿ ಎಷ್ಟು ತೃಪ್ತಿಕರ?
ತುಂಬಾ ತೃಪ್ತಿಕರ: 37%
ತೃಪ್ತಿಕರ: 37%
ಅತೃಪ್ತಿಕರ: 24%
ಹೇಳಲು ಅಸಾಧ್ಯ: 02%

ಕೇಂದ್ರ ಸರ್ಕಾರದ ಆಡಳಿತ ಸಮಾಧಾನಕರವೇ?
ತುಂಬಾ ತೃಪ್ತಿಕರ: 33%
ತೃಪ್ತಿಕರ: 38%
ಅತೃಪ್ತಿಕರ: 27%
ಹೇಳಲು ಅಸಾಧ್ಯ: 2%
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications