ಏನಿದು ಅಂಗಾಂಗ ದಾನ? ಯಾರು ದಾನ ಮಾಡಬಹುದು?
ಒಬ್ಬ ವ್ಯಕ್ತಿ ತನ್ನಷ್ಟಕ್ಕೆ ತಾನೆ ಉಸಿರಾಟ ನಿಲ್ಲಿಸಿ, ಮೃತ ಎಂದು ಘೋಷಿಸಿದ ಬಳಿಕ ಅಂಗಾಂಗ ದಾನಕ್ಕೆ ಮುಂದಾಗಬಹುದು. ಒಬ್ಬ ವ್ಯಕ್ತಿ ಕನಿಷ್ಠ ಎಂಟು ಮಂದಿಯ ಜೀವ ಉಳಿಸಬಹುದು. ಬದುಕಿದ್ದಾಗ ರಕ್ತ, ವೀರ್ಯ, ಚರ್ಮ, ಮೂಳೆಮಜ್ಜೆ ದಾನ ಹೀಗೆ ಜೀವಕೋಶ, ದ್ರವ್ಯ ದಾನ ಸಾಧ್ಯತೆಯಿದೆ.
Recommended Video
ಮೃತ ವ್ಯಕ್ತಿ ಅಥವಾ ಮೆದುಳು ನಿಷ್ಕ್ರಿಯ (brain stem death)ವಾದ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಬಹುದು. ದೇಹದಾನ ಮತ್ತು ನೇತ್ರದಾನ ಜೊತೆಗೆ ಅಂಗಾಂಗ ದಾನದ ಬಗ್ಗೆ ಕೂಡಾ ಜಾಗೃತಿ ಹೆಚ್ಚಾಗಬೇಕು ಎಂದು ವೈದ್ಯರು ಹೇಳಿದ್ದಾರೆ.
ನೇತ್ರದಾನ, ದೇಹದಾನಕ್ಕೆ ಬದುಕಿದ್ದಾಗಲೇ ನೋಂದಾಯಿಸಿಕೊಳ್ಳಬಹುದು. ಇದೇ ರೀತಿ ಅಂಗಾಂಗ ದಾನಕ್ಕೂ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು. ಮಕ್ಕಳು, ವೃದ್ಧರು ಯಾರೂ ಬೇಕಾದರೂ ಅಂಗಾಂಗ ದಾನ ಮಾಡಬಹುದು. ಬ್ರೈನ್ ಡೆಡ್ ಆದ ಸಂದರ್ಭದಲ್ಲಿ ಕುಟುಂಬಸ್ಥರ ಅನುಮತಿ ಪಡೆದ ಬಳಿಕ ಆಸ್ಪತ್ರೆಯವರು ಪ್ರಕ್ರಿಯೆ ಮುಂದುವರೆಸಬಹುದು.
ಏನಿದು ಅಂಗಾಂಗ ದಾನ? ಯಾರು ಅಂಗಾಂಗ ದಾನ ಯಾರು ಮಾಡಬಹುದು? ಬ್ರೈನ್ ಡೆಡ್ ಎಂದರೇನು? ಯಾವೆಲ್ಲ ಅಂಗಗಳನ್ನು ದಾನ ಮಾಡಬಹುದು? ಮುಂದೆ ಓದಿ...

ಅಂಗಾಂಗ ದಾನ
ಒಂದು ನಿರ್ದಿಷ್ಟ ಕಾರ್ಯನಿರ್ವಹಣೆ ಮಾಡುವ ದೇಹದ ಭಾಗವನ್ನು ಅಂಗ ಎನ್ನಬಹುದು. ಉದಾಹರಣೆಗೆ ಹೃದಯ, ಶ್ವಾಸಕೋಶ, ಕಿಡ್ನಿ, ಯಕೃತ್.. ಮುಂತಾದವು. ಕೊನೆಯ ಹಂತದಲ್ಲಿರುವ ವ್ಯಕ್ತಿಯೊಬ್ಬನಿಂದ ಅಂಗ ಕಸಿ ಅಗತ್ಯವಿರುವ ವ್ಯಕ್ತಿಯೊಬ್ಬನಿಗೆ ಅಂಗವನ್ನು ಉಡುಗೊರೆಯಾಗಿ ನೀಡಬಹುದು.
ಯಾವೆಲ್ಲ ಅಂಗಗಳನ್ನು ದಾನ ಮಾಡಬಹುದು?
- ಮೂತ್ರಪಿಂಡ(ಕಿಡ್ನಿ), ಯಕೃತ್(ಲಿವರ್), ರಕ್ತನಾಳ, ಗರ್ಭಕೋಶ, ಸಣ್ಣ ಕರುಳು, ಮೇದೋಜೀರಕ ಗ್ರಂಥಿ, ಹೃದಯ, ಅಂಡಾಣು.. ಇತ್ಯಾದಿ
ಅಂಗಾಂಶ ದಾನ ಎಂದರೇನು?
ದೇಹದ ಒಂದು ನಿರ್ದಿಷ್ಟ ಕಾರ್ಯ ನಿರ್ವಹಿಸುವ ಕೋಶಗಳ ಗುಂಪು. ಉದಾ: ಮೂಳೆ, ಚರ್ಮ, ಕಣ್ಣಿನ ಕಾರ್ನಿಯಾ, ಹೃದಯ ಕವಾಟ, ರಕ್ತನಾಳ, ನರ, ಸ್ನಾಯುರಜ್ಜು ..ಇತ್ಯಾದಿಗಳನ್ನು ಕೂಡಾ ದಾನ ಮಾಡಬಹುದು.

ಬ್ರೈನ್ ಡೆಡ್ ಎಂದರೇನು?
ಬ್ರೈನ್ ಫೆಲ್ಯೂರ್ ಹಾಗೂ ಬ್ರೈನ್ ಡೆಡ್ ಎರಡು ಬೇರೆ. ನಟ ಸಂಚಾರಿ ವಿಜಯ್ ಸದ್ಯ ಬ್ರೈನ್ ಫೆಲ್ಯೂರ್ ಸ್ಥಿತಿಯಲ್ಲಿದ್ದಾರೆ. ಅಂದರೆ ಮೆದುಳು ನಿಷ್ಕ್ರಿಯಗೊಂಡಿದೆ. ಮೆದುಳಿನಿಂದ ಇತರೆ ಅಂಗಗಳಿಗೆ ಆಮ್ಲಜನಕ ಪೂರೈಕೆ ನಿಂತಿರುತ್ತದೆ ಹೀಗಾಗಿ, ಇತರೆ ಅಂಗಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದಿಲ್ಲ. ವಿಜಯ್ ಪರಿಸ್ಥಿತಿಯೂ ಹೀಗೆ ಇದೆ. ಹೃದಯ, ಪಲ್ಸ್ ರೇಟ್, ಕಿಡ್ನಿ, ಪಿತ್ತಜನಕಾಂಗ ಎಲ್ಲವೂ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಲೈಫ್ ಸಪೋರ್ಟಿಂಗ್ ಸಾಧನದ ನೆರವಿನಿಂದ ಉಸಿರಾಟವಾಡುತ್ತಿದ್ದಾರೆ, ಕೃತಕ ಉಸಿರಾಟ ತೆಗೆದರೆ ಬ್ರೈನ್ ಡೆಡ್ ಆಗಲಿದ್ದು, ಬದುಕಿದ್ದು ಸಹ ಸತ್ತಂತೆ ಕೋಮಾವಸ್ಥೆಯಲ್ಲಿರಬಹುದು.

ಬ್ರೈನ್ ಡೆಡ್ ಆದಾಗ ಅಂಗಾಂಗ ದಾನ ಹೇಗೆ?
ಒಬ್ಬ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡರೆ ಅಥವಾ ಕ್ಲಿನಿಕಲಿ ಡೆಡ್ ಎಂದರೆ ಘೋಷಿಸಿದರೆ, ಅಂಥ ವ್ಯಕ್ತಿಯ ಅನೇಕ ಅಂಗಾಂಗಗಳನ್ನು ದಾನ ಮಾಡಬಹುದು. ಇದಕ್ಕೆ 5-6 ಗಂಟೆಗಳ ಅವಧಿ ಇರುತ್ತದೆ. ತಡವಾದರೆ, ಅಂಗಾಂಗಗಳು ಪ್ರಯೋಜನಕ್ಕೆ ಬರುವುದಿಲ್ಲ. ಅಂಗಾಂಗ ದಾನಕ್ಕೆ ಬಂಧು ಮಿತ್ರರ ಸಮ್ಮತಿ ಅಗತ್ಯ. ವೆಂಟಿಲೇಟರ್ ತೆಗೆಯುವುದಕ್ಕೂ ಅನುಮತಿ ಪತ್ರಕ್ಕೆ ಸಹಿ ಹಾಕಬೇಕಾಗುತ್ತದೆ. ಇದಾದ ಬಳಿಕವಷ್ಟೇ ಮುಂದಿನ ಪ್ರಕ್ರಿಯೆ ನಡೆಸಲಾಗುತ್ತದೆ.

ಯಾರು ದಾನ ಮಾಡಬಹುದು? ಏನು ದಾನ ಮಾಡಬಹುದು?
ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಪೂರ್ವಾನುಮತಿ ಪತ್ರ ಇದ್ದರೆ ಅಥವಾ ಪ್ರಸ್ತುತ ಪರಿಸ್ಥಿತಿಯಲ್ಲಿ ಕುಟುಂಬಸ್ಥರ ಸಮ್ಮತಿ ದೊರತ ಬಳಿಕ ಅಂಗಾಂಗ ದಾನ ಪ್ರಕ್ರಿಯೆ ಆರಂಭಿಸಬಹುದು. ಮಕ್ಕಳ ಸಹಿತ ವೃದ್ಧರ ತನಕ ಆರೋಗ್ಯವಂಥ ಅಂಗಾಂಗಗಳನ್ನು ಕಸಿ ಮಾಡುವ ಮೂಲಕ ಮತ್ತೊಬ್ಬರಿಗೆ ನೀಡಬಹುದು.
ಅಂಗಾಂಗ ದಾನಕ್ಕೆ ಸಮ್ಮತಿ ಹೇಗೆ?
ಒಬ್ಬ ವ್ಯಕ್ತಿ ಬದುಕಿದ್ದಾಗಲೇ ತನ್ನ ಮರಣ ನಂತರ ಅಂಗಾಂಗ ದಾನ ಮಾಡಲು ಬಯಸಿ ಆರ್ಗನ್ ಡೋನರ್ ಕಾರ್ಡ್ ಪಡೆಯಬಹುದು. ಈ ಬಗ್ಗೆ ತನ್ನ ಬಂಧುಮಿತ್ರರಿಗೆ ತಿಳಿಸಬೇಕಾಗುತ್ತದೆ. ಈ ಬಗ್ಗೆ ಕುಟುಂಬಸ್ಥರ ಒಪ್ಪಿಗೆ ಇದ್ದರೆ ಮಾತ್ರ ಆಸ್ಪತ್ರೆಯವರು ಮುಂದಿನ ಕಾರ್ಯ ನೆರವೇರಿಸುತ್ತಾರೆ.

ಮಾನವ ಅಂಗಾಂಗಗಳ ಕಸಿ ಕಾಯ್ದೆ
ಮಾನವ ಅಂಗಾಂಗಗಳ ಕಸಿ ಕಾಯ್ದೆ -1994ರ ಅಡಿಯಲ್ಲಿ 'ಮೆದುಳು ಸಾವನ್ನು ' ಸಾವು ಎಂದು ಸ್ವೀಕರಿಸಲಾಗಿದೆ. ಮೆದುಳಿನ ಕಾಂಡದ ಎಲ್ಲಾ ಕಾರ್ಯಗಳನ್ನು ಶಾಶ್ವತವಾಗಿ ಮತ್ತು ಮಾರ್ಪಡಿಸಲಾಗದ ಹಂತದ ಸ್ಥಿತಿ ವಿಭಾಗ 3 ರ ಉಪ ಪರಿಚ್ಛೇದ (6) ಅಡಿಯಲ್ಲಿ ಪ್ರಮಾಣೀಕರಿಸಿದೆ ಎಂಡು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗಾಂಗ ದಾನ ನಿರ್ವಹಣೆ ನಡೆಸುವ ಜೀವನ ಸಾರ್ಥಕತೆ ವಿಭಾಗದ ಅಧಿಕಾರಿ ತಿಳಿಸಿದ್ದಾರೆ. ಅಂಗಾಂಗ ದಾನ ಮಾಡಲು ಇಚ್ಛಿಸಿದಾಗ ಜೀವನ ಸಾರ್ಥಕತೆ ವಿಭಾಗಕ್ಕೆ ತಿಳಿಸಬೇಕು, ಅಲ್ಲಿನ ನುರಿತ ತಜ್ಞರು ಪರಿಶೀಲಿಸಿ ಅನುಮತಿ ನೀಡಿದ ಬಳಿಕ ಸಂಬಂಧಪಟ್ಟ ಆಸ್ಪತ್ರೆ ವೈದ್ಯರು ಮುಂದಿನ ಪ್ರಕ್ರಿಯೆ(ಅಂಗಾಂಗ ಬೇರ್ಪಡಿಸಿ, ಕಸಿಗೆ ಲಭ್ಯವಾಗಿಸುವುದು)ಗೆ ಚಾಲನೆ ನೀಡಬಹುದು. ದಾನ ಪಡೆಯುವವರ ಆದ್ಯತಾ ಪಟ್ಟಿ ಮೇರೆಗೆ ಅಂಗಾಂಗಗಳು ಲಭ್ಯವಾಗಲಿದೆ.
ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್ ತಾಣದಲ್ಲಿ ಪಡೆದುಕೊಳ್ಳಬಹುದು.. ಅಂಗಾಂಗ ದಾನದ ಬಗ್ಗೆ ಇರುವ ಪ್ರಶ್ನೆಗಳಿಗೂ ಉತ್ತರ ಇಲ್ಲಿ ಸಿಗುತ್ತದೆ (https://www.jeevasarthakathe.karnataka.gov.in/Website/Faqs3.html)
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
7 Summer Kitchen Tips: ಬೇಸಿಗೆಯಲ್ಲಿ ಅಡುಗೆಮನೆ ತಂಪಾಗಿಡಲು 7 ಸುಲಭ ಸಲಹೆಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್












Click it and Unblock the Notifications