ಸನ್ನಿ ಲಿಯೋನ್ ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ್ದು ಸತ್ಯವೋ? ಸುಳ್ಳೋ?
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಜಾಗತೀಕ ಮಟ್ಟದ ಹಿಂದೂ ಧರ್ಮದ ಅತ್ಯಂತ ಬೃಹತ್ ಉತ್ಸವ ಮಹಾ ಕುಂಭಮೇಳಕ್ಕೆ ಇನ್ನೇನು ಎರಡು ದಿನಗಳಲ್ಲಿ ತೆರೆ ಬೀಳಲಿದೆ. ಈ ವರ್ಷದ ಮಕರ ಸಂಕ್ರಾತಿಯ ಹಿಂದಿನ ದಿನ ಅಂದರೆ ಜನವರಿ 13ರಂದು ಆರಂಭವಾದ ಈ ಮಹಾ ಕುಂಭಮೇಳವು ಈಗಾಗಲೇ 43 ದಿನಗಳನ್ನು ಯಶಸ್ವಿಯಾಗಿ ಮುಗಿಸಿದ್ದು ಮಹಾ ಶಿವರಾತ್ರಿಯ ದಿನ ಅಂದರೆ ಫೆಬ್ರವರಿ 26ರಂದು ಮುಕ್ತಾಯಗೊಳ್ಳಲಿದೆ.
ಈ ಬಾರಿಯ ಮಹಾ ಕುಂಭಮೇಳದಲ್ಲಿ 45 ಕೋಟಿ ಭಕ್ತರು ಭಾಗಿಯಾಗುವ ನಿರೀಕ್ಷೆ ಇತ್ತು. ಆದರೆ ಆಯೋಜಕರ ನಿರೀಕ್ಷೆಗೂ ಮೀರಿ ಭಕ್ತ ಸಾಗರ ಹರಿದು ಬಂದಿದ್ದು, ಭಾರತದ ಮೂಲೆ ಮೂಲೆಯಿಂದ ಮಾತ್ರವಲ್ಲದೇ ವಿದೇಶದಿಂದಲೂ ಭಕ್ತರು ಹಾಗೂ ಗಣ್ಯರು ಆಗಮಿಸಿದ್ದು ಈವರೆಗೂ ಐವತೈದು ಕೋಟಿಗೂ ಅಧಿಕ ಭಕ್ತರು ಈ ಬಾರಿಯ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಕೈಗೊಂಡಿದ್ದಾರೆ.

ಜಾಗತೀಕ ಮಟ್ಟದ ಉತ್ಸವವಾಗಿರುವ ಮಹಾ ಕುಂಭಮೇಳ ಆರಂಭವಾದ ದಿನದಿಂದಲೂ ಟ್ರೆಂಡಿಂಗ್ನಲ್ಲಿದೆ. ಹೀಗಾಗಿ ಮಹಾ ಕುಂಭಮೇಳದ ಹೆಸರಿನಲ್ಲಿ ಲಕ್ಷಾಂತರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದರಲ್ಲಿ ಅನೇಕ ಸುಳ್ಳು ವಿಡಿಯೋಗಳು ಕೂಡ ವೈರಲ್ ಆಗಿವೆ. ಈ ಫೇಕ್ ವಿಡಿಯೋ ಸಾಲಿಗೆ ಮತ್ತೊಂದು ವಿಡಿಯೋ ಕೂಡ ಈಗ ಸೇರಿಕೊಂಡಿದೆ.
ಬಾಲಿವುಡ್ ನಟಿ ಸನ್ನಿ ಲಿಯೋನ್ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ ಎನ್ನುವ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿತ್ತು. ಗುಲಾಬಿ ಬಣ್ಣದ ಚೂಡಿದಾರ್ ಧರಿಸಿರುವ ಸನ್ನಿ ಲಿಯೋನ್ ಹಣೆಗೆ ಪಟ್ಟಿ ಬಳಿದುಕೊಂಡು ತ್ರಿವೇಣಿ ಸಂಗಮದಲ್ಲಿ ಮಾಡಿದ ವಿಡಿಯೋ ಇದಾಗಿದೆ. ಇದೇ ವಿಡಿಯೋವನ್ನು ಶೇರ್ ಮಾಡಿರುವ ವ್ಯಕ್ತಿಯೊಬ್ಬ 'ಸನ್ನಿ ಲಿಯೋನ್ ಮಹಾ ಕುಂಭಮೇಳದಲ್ಲಿ ಸ್ನಾನ ಮಾಡಿ ಪಾಪ ತೊಳೆದುಕೊಂಡಿದ್ದಾರೆ' ಎಂದು ಕ್ಯಾಪ್ಷನ್ ಕೊಟ್ಟು ವೈರಲ್ ಮಾಡಲಾಗಿತ್ತು. ಇದು ಸುಳ್ಳಿರಬಹುದು ಎಂದು ಅನೇಕರಿಗೆ ಅನಿಸಿತ್ತು. ಆದರೆ ಸುಳ್ಳೋ? ಸತ್ಯವೋ ಎನ್ನುವ ಗೊಂದಲ ಇತ್ತು. ಕೊನೆಗೂ ಆ ಗೊಂದಲಕ್ಕೆ ತೆಗೆ ಬಿದ್ದಿದೆ.
ಸನ್ನಿ ಲಿಯೋನ್ ಮಹಾ ಕುಂಭಮೇಳದಲ್ಲಿ ಭಾಗಿ ಎನ್ನುವ ವಿಡಿಯೋ ಸುಳ್ಳಾಗಿದೆ. ಮೂಲಗಳ ಪ್ರಕಾರ ಸನ್ನಿ ಲಿಯೋನ್ ಮಹಾ ಕುಂಭಮೇಳಕ್ಕೆ ಭೇಟಿ ನೀಡಿಲ್ಲ. ಸನ್ನಿ ಲಿಯೋನ್ 2023ರಲ್ಲಿ ಆಲ್ಬಮ್ನ ಪ್ರಚಾರವೊಂದಕ್ಕೆ ವಾರಣಾಸಿಗೆ ಬಂದಿದ್ದರು. ಈ ಸಮಯದಲ್ಲಿ ಬಾಬಾ ವಿಶ್ವನಾಥರನ್ನು ಭೇಟಿ ಮಾಡಿ, ಗಂಗಾ ಆರತಿ ಪಡೆದುಕೊಂಡಿದ್ದರು. ಈ ಸಮಯದಲ್ಲಿ ಮಾಡಿದ ವಿಡಿಯೋವನ್ನು ಈಗ ಮಹಾ ಕುಂಭಮೇಳವೆಂದು ನಕಲಿ ಕ್ಯಾಪ್ಷನ್ ನೀಡಿ ವೈರಲ್ ಮಾಡಲಾಗುತ್ತಿದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications