ಜಾಧವ್ ಪ್ರಕರಣ: ವಿಯೆನ್ನಾ ರಾಜತಾಂತ್ರಿಕ ಒಪ್ಪಂದ ಎಂದರೇನು?
ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಜಾಧವ್ಗೆ ವಿಧಿಸಿರುವ ಗಲ್ಲುಶಿಕ್ಷೆ ತೀರ್ಪನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ನ್ಯಾಯಾಲಯ. ಜಾಧವ್ ಅವರನ್ನು ಭೇಟಿ ಮಾಡಲು ಭಾರತದ ರಾಜತಾಂತ್ರಿಕರಿಗೆ ಅವಕಾಶ ನೀಡಿದೆ. ಈ ಸಂದರ್ಭದಲ್ಲಿ ವಿಯೆನ್ನಾ ರಾಜತಾಂತ್ರಿಕ ಒಪ್ಪಂದದ ಬಗ್ಗೆ ಬೆಳಕು ಚೆಲ್ಲುವ ಯತ್ನ ನಮ್ಮದಾಗಿದೆ...
"ವಿಯೆನ್ನಾ ಒಪ್ಪಂದದಂತೆ ಭಾರತದ ಹೂಡಿರುವ ವಾದ ಸರಿಯಾಗಿದೆ. ಜತೆಗೆ ವಿಚಾರಣೆ ವೇಳೆಯಲ್ಲಿ ಕುಲಭೂಷಣ್ ಜಾಧವ್ ರನ್ನು ಪಾಕಿಸ್ತಾನ ಗಲ್ಲು ಶಿಕ್ಷೆಗೆ ದೂಡಬಹುದು ಎಂಬ ಭಾರತದ ಆತಂಕವೂ ಸಮಂಜಸವಾಗಿದೆ," ಎಂದು ಅಂದು ನ್ಯಾ. ರೋನಿ ಅಬ್ರಹಾಂ ಹೇಳಿದ್ದರು. ಇಂದು ಐಸಿಜೆ ನ್ಯಾ. ಎಎ ಯೂಸುಫ್ ಅವರು ಕೂಡ ಪಾಕಿಸ್ತಾನವು ವಿಯೆನ್ನಾ ಒಪ್ಪಂದ ಉಲ್ಲಂಘನೆ ಮಾಡಿದೆ ಎಂದು ಹೇಳಿದ್ದಾರೆ. ಹಾಗಾದರೆ, ವಿಯೆನ್ನಾ ಒಪ್ಪಂದ ಅಂದರೇನು? ಮುಂದೆ ಓದಿ..
1961ರ ಆಸ್ಟ್ರೀಯಾದ ವಿಯೆನ್ನಾದಲ್ಲಿ ರಾಜತಾಂತ್ರಿಕ ಮತ್ತು ಐಚ್ಛಿಕ ಶಿಷ್ಟಾಚಾರಕ್ಕಾಗಿ ಮಾಡಿಕೊಂಡ ಅಂತಾರಾಷ್ಟ್ರೀಯ ಮಟ್ಟದ ಒಪ್ಪಂದವಾಗಿದೆ. ಈ ಒಪ್ಪಂದವು 1961ರ ಏಪ್ರಿಲ್ 18ರಂದು ಜಾರಿಗೆ ಬಂದಿದ್ದು, ಇದು ವಿಶ್ವದ ವಿವಿಧ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಕುರಿತ ಒಪ್ಪಂದವಾಗಿದೆ. 189 ದೇಶಗಳು Vienna Convention on Diplomatic Relations (VCDR) ಕ್ಕೆ ಒಪ್ಪಿಗೆ ಸೂಚಿಸಿವೆ.

ಅಂತಾರಾಷ್ಟ್ರೀಯ ಶಾಂತಿ ಹಾಗೂ ಸುಭದ್ರತೆಯನ್ನು ಕಾಪಾಡಿಕೊಳ್ಳುವುದು ಹಾಗೂ ದೇಶಗಳ ನಡುವೆ ಸ್ನೇಹಪರ ಸಂಬಂಧವನ್ನು ಉಳಿಸಿ, ಬೆಳೆಸುವುದು ಈ ಒಪ್ಪಂದದ ಉದ್ದೇಶವಾಗಿದೆ.
ಎಲ್ಲ ಸಾರ್ವಭೌಮ ಸಮಾಜ ದೇಶಗಳು, ಅಂತರರಾಷ್ಟ್ರೀಯ ಶಾಂತಿ ಹಾಗೂ ಸುಭದ್ರತೆಯನ್ನು ಕಾಪಾಡಿಕೊಂಡು ಬರುವ ಸಲುವಾಗಿ ಹಾಗೂ ಪರಸ್ಪರ ದೇಶಗಳ ನಡುವೆ ಸ್ನೇಹಪರ ಸಂಬಂಧವನ್ನು ಬೆಳೆಸಿಕೊಂಡು ಬರುವ ಸಲುವಾಗಿ ಈ ಒಪ್ಪಂದವನ್ನು ಜಾರಿಗೆ ತರಲಾಗಿದೆ.
ಪರಸ್ಪರ ದೇಶಗಳ ನಡುವೆ ಸಂಬಂಧವನ್ನು ಸ್ನೇಹಯುತವಾಗಿ ಮುಂದುವರಿಸಿಕೊಂಡು ಬರುವ ಸಲುವಾಗಿ ರಾಜತಾಂತ್ರಿಕ ಸಿಬ್ಬಂದಿಗೆ ಅವರ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತ ಕೆಲವೊಂದು ವಿಶೇಷ ಸವಲತ್ತುಗಳು ಮತ್ತು ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ.
ಇಂಥ ವಿಶೇಷ ಸವಲತ್ತು ಹಾಗೂ ಕಾನೂನಿನಿಂದ ಹೊರತಾದ ಅವಕಾಶಗಳು ವೈಯಕ್ತಿಕ ಲಾಭಕ್ಕಾಗಿ ಅಲ್ಲ. ಆದರೆ ಅವರು ಪ್ರತಿನಿಧಿಸುವ ದೇಶಗಳ ಪರವಾಗಿ ಪರಿಣಾಮಕಾರಿ ಹಾಗೂ ದಕ್ಷವಾಗಿ ರಾಜತಾಂತ್ರಿಕ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಈ ವಿಶೇಷ ಸವಲತ್ತುಗಳನ್ನು ಕಲ್ಪಿಸಲಾಗಿದೆ,ಅಂತಾರಾಷ್ಟ್ರೀಯ ಕಾನೂನುಗಳಿಗೆ ಬದ್ಧವಾಗಿರುತ್ತವೆ ಹಾಗೂ ಈ ಒಪ್ಪಂದವನ್ನು ಉಲ್ಲಂಘಿಸಿ ಯಾವುದೇ ಸವಲತ್ತುಗಳನ್ನು ನಿರಾಕರಿಸುವಂತಿಲ್ಲ.ರಾಜತಾಂತ್ರಿಕತೆಗೆ ಸಂಬಂಧಿಸಿದಂತೆ ಹಾಲಿ ಇರುವ ಒಪ್ಪಂದವು, ಅಂತರರಾಷ್ಟ್ರೀಯ ಕಾನೂನು ಆಯೋಗದ ಕರಡು ನಿಯಮಾವಳಿಯ ಪರಿಣಾಮವಾಗಿದೆ. ರಾಷ್ಟ್ರೀಯತೆಯನ್ನು ಪಡೆಯುವುದು ಇದರಲ್ಲಿ ಸೇರಿದೆ. ಕಡ್ಡಾಯವಾಗಿ ವ್ಯಾಜ್ಯವನ್ನು ಬಗೆಹರಿಸುವುದು ಕೂಡಾ ಅಂತಿಮ ಕಾಯ್ದೆಯಲ್ಲಿ ಸೇರಿದೆ. ಇತರ ನಾಲ್ಕು ನಿರ್ಣಯಗಳನ್ನೂ ಆಂಗೀಕರಿಸಲಾಗಿದೆ.
ಕುಲಭೂಷಣ್ ಜಾಧವ್ ಕೇಸಿನಲ್ಲಿ ಪಾಕಿಸ್ತಾನ ವಿಯೆನ್ನಾ ಒಪ್ಪಂದ ಮುರಿದಿದ್ದು ಹೇಗೆ?
* ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಬಂಧನದ ವಿಷಯವನ್ನು ಪಾಕಿಸ್ತಾನವು ಮುಚ್ಚಿಟ್ಟಿತ್ತು. ಈ ಮೂಲಕ ವಿಯೆನ್ನಾ ಒಪ್ಪಂದ ಮುರಿದಿದೆ.
ಜಾಧವ್ ಅವರನ್ನು ಗೂಢಾಚಾರಿ ಎಂದು ಪರಿಗಣಿಸಿ ಅವರಿಗೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲವು ಗಲ್ಲು ಶಿಕ್ಷೆ ವಿಧಿಸಿತ್ತು. ಈ ವಿಷಯ ತಡವಾಗಿ ತಿಳಿದ ಬಳಿಕ, ಭಾರತ ಈ ಪ್ರಕರಣವನ್ನು ಅಂತಾರಾಷ್ಟ್ರೀಯ ಕೋರ್ಟಿಗೆ ತರುವುದು ಅನಿವಾರ್ಯವಾಯಿತು.
* ಭಾರತದ ರಾಜತಾಂತ್ರಿಕ ಪ್ರತಿನಿಧಿಯನ್ನು ಭೇಟಿ ಮಾಡಲು ಜಾಧವ್ ಗೆ ಅವಕಾಶ ನೀಡದೆ ಮತ್ತೊಮ್ಮೆ ವಿಯೆನ್ನಾ ಒಪ್ಪಂದವನ್ನು ಮುರಿದಿದೆ ಎಂದು ಭಾರತ ವಾದ ಮಂಡಿಸಿದೆ.
* ವಿಯೆನ್ನಾ ಒಪ್ಪಂದವನ್ನು ಒಂದಲ್ಲ, ಎರಡಲ್ಲ 16 ಬಾರಿ ಪಾಕಿಸ್ತಾನ ಉಲ್ಲಂಘನೆ ಮಾಡಿದೆ. 16 ಬಾರಿ ರಾಜತಾಂತ್ರಿಕ ಪ್ರತಿನಿಧಿ ಭೇಟಿಯನ್ನು ನಿರಾಕರಿಸಿದ್ದನ್ನು ಭಾರತ ತನ್ನ ವಾದದಲ್ಲಿ ಉಲ್ಲೇಖಿಸಿದ್ದನ್ನು ಅಂತಾರಾಷ್ಟ್ರೀಯ ನ್ಯಾಯಲವು ಮಾನ್ಯ ಮಾಡಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications