ಶ್ರೀನಗರ್ ಸಿಆರ್ ಪಿಎಫ್ ಮುಖ್ಯಸ್ಥೆ ಚಾರು ಸಿನ್ಹಾ ಕಿರು ಪರಿಚಯ
ಶ್ರೀನಗರ್, ಸಪ್ಟೆಂಬರ್.02: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮುಖ್ಯಸ್ಥರಾಗಿ ಚಾರು ಸಿನ್ಹಾ ನೇಮಕಗೊಂಡಿದ್ದಾರೆ. ಈ ಪ್ರದೇಶದಲ್ಲಿ ಸಿಆರ್ ಪಿಎಫ್ ಮುಖ್ಯಸ್ಥರಾದ ಮೊದಲ ಮಹಿಳಾ ಅಧಿಕಾರಿ ಎಂಬ ಕೀರ್ತಿಗೆ ಚಾರು ಸಿನ್ಹಾ ಭಾಜನರಾಗಿದ್ದಾರೆ.
Recommended Video
1996ರ ಬ್ಯಾಚ್ ತೆಲಂಗಾಣ ಕೇಡರ್ ಐಪಿಎಸ್ ಅಧಿಕಾರಿ ಚಾರು ಸಿನ್ಹಾ, ಶ್ರೀನಗರ ಸೆಕ್ಟರ್ ನಲ್ಲಿ ಸಿಆರ್ ಪಿಎಫ್ ಪಡೆಯ ಇನ್ಸ್ ಪೆಕ್ಟರ್ ಜನರಲ್(ಐಜಿ) ಆಗಿ ಕಾರ್ಯ ನಿರ್ವಹಿಸಲಿದ್ದಾರೆ. 2005ರಲ್ಲಿ ಮೊದಲ ಬಾರಿಗೆ ಶ್ರೀನಗರ್ ಸೆಕ್ಟರ್ ನಲ್ಲಿ ಚಾರು ಸಿನ್ಹಾ ಅವರು ಐಜಿ ಹಂತದಲ್ಲಿ ಕಾರ್ಯಾರಂಭ ಮಾಡಿದ ಮೊದಲ ಮಹಿಳಾ ಅಧಿಕಾರಿ ಎನಿಸಿದರು. ಇದೀಗ ಅದೇ ಐಪಿಎಸ್ ಅಧಿಕಾರಿ ಚಾರು ಸಿನ್ಹಾ ಅವರನ್ನು ಪ್ರಮೋದ್ ಕುಮಾರ್ ಪಾಂಡೆ ಸ್ಥಾನಕ್ಕೆ ನೇಮಿಸಲಾಗಿದೆ.
ಚಾರು ಸಿನ್ಹಾ, ಉಗ್ರಪೀಡಿತ ಪ್ರದೇಶದಲ್ಲಿ ಸಿಆರ್ ಪಿಎಫ್ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಮಹಿಳಾ ಅಧಿಕಾರಿ ಎನಿಸಿದ್ದಾರೆ. ಖಡಕ್ ಅಧಿಕಾರಿ ಎನಿಸಿರುವ ಚಾರು ಸಿನ್ಹಾರಿಗೆ ಈ ಹಿಂದಿನಿಂದಲೂ ಭಯೋತ್ಪಾದಕ ಮತ್ತು ಉಗ್ರರನ್ನು ಹತ್ತಿಕ್ಕುವ ಕಾರ್ಯತಂತ್ರದ ಬಗ್ಗೆ ತಿಳಿದಿದೆ.

ಭಯೋತ್ಪಾದಕರ ಎದೆಯಲ್ಲಿ ನಡುಕ ಹುಟ್ಟಿಸಿದ ಅಧಿಕಾರಿ:
ಜಮ್ಮು-ಕಾಶ್ಮೀರದ ಶ್ರೀನಗರ್ ಕ್ಕೆ ನೇಮಕಗೊಳ್ಳುವ ಮೊದಲು ಈ ಹಿಂದೆ ಬಿಹಾರದಲ್ಲಿ ಸಿಆರ್ ಪಿಎಫ್ ಐಜಿಯಾಗಿ ಚಾರು ಸಿನ್ಹಾ ಕಾರ್ಯ ನಿರ್ವಹಿಸಿದ್ದರು. ಬಿಹಾರದಲ್ಲಿ ಖಡಕ್ ಆಡಳಿತ ನಡೆಸಿದ ಇವರು ಭಯೋತ್ಪಾದಕ ಎದೆಯಲ್ಲಿ ನಡುಕ ಹುಟ್ಟಿಸಿದ್ದರು. ಚಾರು ಸಿನ್ಹಾ ನೇತೃತ್ವದಲ್ಲಿಯೇ ಹಲವು ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯನ್ನು ನಡೆಸಲಾಗಿತ್ತು.
ಬಿಹಾರದ ನಂತರದಲ್ಲಿ ಜಮ್ಮುವಿನ ಸಿಆರ್ ಪಿಎಫ್ ಐಜಿ ಆಗಿ ಚಾರು ಸಿನ್ಹಾರನ್ನು ವರ್ಗಾವಣೆಗೊಳಿಸಲಾಗಿದ್ದು, ಉತ್ತಮ ಆಡಳಿತದ ಮೂಲಕ ಅಲ್ಲಿಯೂ ಸೈ ಎನಿಸಿಕೊಂಡಿದ್ದರು. ಇದೀಗ ಶ್ರೀನಗರ ಸೆಕ್ಟರ್ ನಲ್ಲಿ ಸಿಆರ್ ಪಿಎಫ್ ಮುಖ್ಯಸ್ಥರಾಗಿ ಚಾರು ಸಿನ್ಹಾರನ್ನು ನೇಮಿಸಿ ಹೊಸದಾಗಿ ಆದೇಶ ಹೊರಡಿಸಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications