ಬಾಲಕೋಟ್ ವೈಮಾನಿಕ ದಾಳಿ ಟಾರ್ಗೆಟ್ ಯೂಸುಫ್ ಅಜರ್!
Recommended Video

ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ದಾರ್ ಆತ್ಮಾಹುತಿ ದಾಳಿ ನಡೆಸಲು ಸೂಚನೆ ಕೊಟ್ಟ ಪ್ರಮುಖರ ಪೈಕಿ ಯೂಸುಫ್ ಅಜರ್ ಕೂಡಾ ಒಬ್ಬ.
ರಾವಲ್ಪಿಂಡಿಯ ಆಸ್ಪತ್ರೆಯಲ್ಲಿ ವಿಷಯ ಪರಿಸ್ಥಿತಿಯಲ್ಲಿರುವ ಜೈಷ್ ಎ ಮೊಹಮ್ಮದ್ ನ ಮುಖ್ಯಸ್ಥ ಮೌಲನಾ ಮಸೂದ್ ಅಜರ್ ನ ಬಾವವೇ ಈ ಯೂಸುಫ್. ಕಂದಹಾರ್ ವಿಮಾನ ಅಪಹರಣ, ಸಂಸತ್ ದಾಳಿ, ಪಠಾಣ್ ಕೋಟ್ ದಾಳಿ, ಇತ್ತೀಚಿನ ಪುಲ್ವಾಮಾ ದಾಳಿ ಎಲ್ಲದರಲ್ಲೂ ಅಜರ್ ಗೆ ಸಾಥ್ ನೀಡಿದವನು ಯೂಸುಫ್.
ಭಾರತ ವಿರುದ್ಧ ಭಯೋತ್ಪಾದನಾ ಕೃತ್ಯ ಎಸಗಲು ಪಾಕಿಸ್ತಾನ ಬೆಂಬಲಿತ ಈ ಜಿಹಾದಿ ಪಡೆಗಳಿಗೆ ಮಸೂದ್ ನಿರ್ದೇಶನ ನೀಡಿದ್ದನ್ನು ಎಲ್ಲರಿಗೂ ತಲುಪಿಸುವ ಕೆಲಸ ಈ ಯೂಸುಫ್ ಮಾಡುತ್ತಿದ್ದ.ಬಾಲಕೋಟ್ ನಲ್ಲಿ ಆತ್ಮಾಹುತಿ ದಾಳಿ ನಡೆಸುವ ಜಿಹಾದಿಗಳ ತಯಾರಿಸುವ ಕ್ಯಾಂಪ್ ನೋಡಿಕೊಳ್ಳುತ್ತಿದ್ದ ಯೂಸುಫ್ ಮೇಲೆ ಬಾಂಬ್ ಬಿದ್ದಿದೆ ಎಂಬ ಸುದ್ದಿಯಿದೆ.

ಮೌಲನಾ ಮಸೂದ್ ಅಜರ್ ನ ಆಜ್ಞೆ ಪಾಲಕರು
ಮೌಲನಾ ಅಜರ್ ಅಳಿಯ ಮೊಹಮ್ಮದ್ ಉಮೇರ್ ಹಾಗೂ ಬಾವ ಅಬ್ದುಲ್ ರಶೀದ್ ಘಾರಿ ಅಲಿಯಾಸ್ ಯೂಸುಫ್ ಅಜರ್ ಅಲಿಯಾಸ್ ಮೊಹಮ್ಮದ್ ಸಲೀಂ ಇಬ್ಬರು ಸೇರಿಕೊಂಡು ಕಣಿವೆ ರಾಜ್ಯದಲ್ಲಿ ಮಸೂದ್ ನೀಡಿದ ಆಡಿಯೋ ಸಂದೇಶವನ್ನು ಯುವಕರಿಗೆ ಹಂಚಿ ಅವರ ತಲೆಕೆಡಿಸುವ ಕಾರ್ಯದಲ್ಲಿ ತೊಡಗಿದರು. ಎಲ್ ಇ ಡಿ ಸ್ಫೋಟಕ ಬಳಕೆ, ಆತ್ಮಾಹುತಿ ದಾಳಿಗೆ ಕಾಶ್ಮೀರಿ ಯುವಕರನ್ನು ತರಬೇತಿಗೊಳಿಸತೊಡಗಿದರು.

ಉಸ್ಮಾನ್ ಸಾವಿನ ಪ್ರತೀಕಾರ
ಭಾರತೀಯ ಸೇನೆಯಿಂದ ಹತನಾದ ಸೋದರ ಸಂಬಂಧಿ ಉಸ್ಮಾನ್ ಸಾವಿನ ಪ್ರತೀಕಾರ ತೆಗೆದುಕೊಳ್ಳುವಂತೆ ಆಡಿಯೋ ಸಂದೇಶದಲ್ಲಿ ಅಜರ್ ಕರೆ ನೀಡಿದ್ದ. ಇದನ್ನು ಕಾರ್ಯಗತಗೊಳಿಸಿದ್ದು ಇದೆ ಅಬ್ದುಲ್ ರಶೀದ್ ಘಾರಿ ನಿರ್ದೇಶಿತ ತಂಡ. ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ದಾರ್ ಎಂಬ ಆತ್ಮಾಹುತಿ ದಾಳಿಕೋರ ಕಾರ್ ಬಾಂಬ್ ಸ್ಫೋಟಿಸಿ 44 ಯೋಧರ ಬಲಿದಾನಕ್ಕೆ ಕಾರಣವಾಗಿದ್ದ.

ಬಾಲಕೋಟ್ ಪ್ರದೇಶವೇ ಏಕೆ?
ಬಾಲಾಕೋಟ್- ಪಾಕಿಸ್ತಾನದ ಅಬ್ಬೋಟಾಬಾ ನಿಂದ ಕೇವಲ 60 ಕಿ.ಮೀ ದೂರದಲ್ಲಿದೆ. ಅಬೊಟಾಬಾದ್ ನಲ್ಲೇ ಜಾಗತಿಕ ಉಗ್ರ ಒಸಾಮಾ ಬಿಲ್ ಲಾಡೆನ್ ತನ್ನ ಅಡಗುತಾಣವನ್ನು ಹೊಂದಿದ್ದ. ಖೈಬರ್ ಪಖ್ತುಖ್ವಾ ಪ್ರಾಂತ್ಯದ ಮನ್ಸೆಹ್ರಾ ಜಿಲ್ಲೆಗೆ ಈ ತಾಣ ಸೇರುತ್ತದೆ. ಇಲ್ಲಿ ಉಗ್ರರ ತರಬೇತಿಗೆ ಬೇಕಾದ ಅಗತ್ಯ ಸ್ಥಳ, ಪರಿಕರ, ನೆರವು ಇದೆ. ಹೀಗಾಗಿ, ಜೈಷ್ ನ ಆತ್ಮಾಹುತಿ ದಾಳಿ ತಂಡಕ್ಕೆ ಇಲ್ಲಿ ತರಬೇತಿ ನೀಡುವುದು ಅಬ್ದುಲ್ ರಶೀದ್ ಘಾರಿ ಕೆಲಸವಾಗಿತ್ತು.

ಇಂಡಿಯನ್ ಏರ್ ಲೈನ್ಸ್ ವಿಮಾನ ಅಪಹರಣ ಘಟನೆ
1999ರಲ್ಲಿ ಇಂಡಿಯನ್ ಏರ್ ಲೈನ್ಸ್ ಐಸಿ 814 ವಿಮಾನವನ್ನು ಹೈಜಾಕ್ ಮಾಡಿದ ಉಗ್ರರ ತಂಡದಲ್ಲಿ ಮೊಹಮ್ಮದ್ ಸಲೀಂ ಕೂಡಾ ಇದ್ದ. ಕಠ್ಮಂಡುವಿನಿಂದ ಲಕ್ನೋಗೆ ತೆರಳಬೇಕಿದ್ದ ವಿಮಾನವನ್ನು ಹೈಜಾಕ್ ಮಾಡಿದ್ದ ಉಗ್ರರು, ಕಂದಹಾರ್ ಗೆ ವಿಮಾನವನ್ನು ತೆಗೆದುಕೊಂಡು ಹೋಗಿದ್ದರು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸುವ ಸಲುವಾಗಿ ಅಂದಿನ ವಾಜಪೇಯಿ ಸರ್ಕಾರ ಹಾಗೂ ಅಜಿತ್ ದೋವಲ್ ಅವರು ಉಗ್ರ ಅಜರ್ ಮಸೂದ್ ನನ್ನು ಬಿಡುಗಡೆ ಮಾಡಿದ್ದರು.

ಜೈಷ್ ಎ ಮೊಹಮ್ಮದ್ ನ ಉಸ್ತುವಾರಿ ಯಾರು?
ಕಾಶ್ಮೀರದಲ್ಲಿರುವ ಭಾರತದ ಹಿರಿಯ ಅಧಿಕಾರಿಗಳ ಪ್ರಕಾರ, ಸದ್ಯ ಜೈಷ್ ಎ ಮೊಹಮ್ಮದ್ ನ ಉಸ್ತುವಾರಿಯನ್ನು ಉಮೆರ್, ಇಸ್ಮಾಯಿಲ್, ರಶೀದ್ ಘಾಜಿ ನೋಡಿಕೊಳ್ಳುತ್ತಿದ್ದಾರೆ. ಸುಮಾರು 60 ಮಂದಿ ಸದಸ್ಯರು ಈ ಸಂಘಟನೆಯಲ್ಲಿದ್ದು ಈ ಪೈಕಿ 35 ಮಂದಿ ಸ್ಥಳೀಯರಿದ್ದಾರೆ. ಅಜರ್ ಮಸೂರ್ ಅನುಪಸ್ಥಿತಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮ್ಯಾಂಡರ್ ಸೈಯದ್ ಸಲಾಹುದ್ದೀನ್ ಸಲಹೆ ನೀಡುತ್ತಿದ್ದಾನೆ. ಪಾಕ್ ಆಕ್ರಮಿತ ಕಾಶ್ಮೀರದ ಮುಝಾಫರಾಬಾದಿನ ಟೌನ್ ಹಾಲ್ ನಲ್ಲಿ ಜನವರಿ 19ರಂದು ಸಭೆ ನಡೆಸಿ, ಸುಧಾರಿತ ಸ್ಫೋಟಕಗಳ ಬಳಕೆ ಬಗ್ಗೆ ಚರ್ಚಿಸಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications