Profile: ಕೇರಳದಲ್ಲಿ ಆರೋಗ್ಯ ಸಚಿವರಾದ ವೀಣಾ ಜಾರ್ಜ್ ವ್ಯಕ್ತಿಚಿತ್ರ
ತಿರುವನಂತಪುರಂ, ಮೇ 20: ಕೇರಳದಲ್ಲಿ 2018ರಲ್ಲಿ ಕಾಣಿಸಿಕೊಂಡ ನಿಫಾ ವೈರಸ್ ಹಾಗೂ ಪ್ರಸ್ತುತ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗನ್ನು ಸಮರ್ಥವಾಗಿ ನಿಭಾಯಿಸಿದ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಸ್ಥಾನವನ್ನು ಪಡೆಯುವಲ್ಲಿ ವೀಣಾ ಜಾರ್ಜ್ ಯಶಸ್ವಿಯಾಗಿದ್ದಾರೆ.
ಕೇರಳದಲ್ಲಿ ಆರೋಗ್ಯ ಸಚಿವೆ ಸ್ಥಾನಕ್ಕೆ ಏರಿದ ಚೊಚ್ಚಲ ಪತ್ರಕರ್ತೆ ಎಂಬ ಖ್ಯಾತಿಗೆ ವೀಣಾ ಜಾರ್ಜ್ ಒಳಗಾಗಿದ್ದಾರೆ. ರಾಜ್ಯದ ಹಲವು ಸುದ್ದಿವಾಹಿನಿಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ ವೀಣಾ ಜಾರ್ಜ್ ಸಿಪಿಐ(ಎಂ) ಪಕ್ಷದಲ್ಲಿ ಗುರುತಿಸಿಕೊಂಡರು.
ಪತ್ರಕರ್ತರಾಗಿ ತಮ್ಮ ಬದುಕು ಆರಂಭಿಸಿದ 45 ವರ್ಷದ ವೀಣಾ ಜಾರ್ಜ್, ಕೇರಳದ ಕೈರಾಲಿ ಟಿವಿ, ಮನೋರಮಾ ನ್ಯೂಸ್ ಮತ್ತು ರಿಪೋರ್ಟರ್ ಟಿವಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 2016ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಅರಾನಮುಲಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಹುಟ್ಟು ಮತ್ತು ಬೆಳವಣಿಗೆ:
ಕೇರಳದ ತಿರುವನಂತಪುರಂನಲ್ಲಿ 1976, ಆಗಸ್ಟ್ 3ರಂದು ವೀಣಾ ಜಾರ್ಜ್ ಜನಿಸಿದರು. ಎಂಎಸ್ಸಿ ಪದವಿ ಹಾಗೂ ಬಿ.ಎಡ್ ವ್ಯಾಸಂಗ ಮಾಡಿರುವ ವೀಣಾ ಜಾರ್ಜ್, ಕಾಲೇಜು ಮಟ್ಟದಲ್ಲೇ ನಾಯಕತ್ವ ಗುಣವನ್ನು ಬೆಳೆಸಿಕೊಂಡು ಬಂದವರು. ಕಾಲೇಜು ಹಂತದಲ್ಲಿ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಸಿಪಿಐ(ಎಂ) ವಿದ್ಯಾರ್ಥಿ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದರು. ಪ್ರೌಢಶಾಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಜಾರ್ಜ್ ಜೋಸೆಫ್ ಅವರನ್ನು ವಿವಾಹವಾಗಿರುವ ವೀಣಾ ಜಾರ್ಜ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ರಾಜಕೀಯ ಬದುಕು:
2016ರಲ್ಲಿ ಮೊದಲ ಬಾರಿಗೆ ರಾಜಕೀಯ ಪ್ರವೇಶಿಸಿದ ವೀಣಾ ಜಾರ್ಜ್ ಅರನಮುಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಿವದಾಸನ್ ನಾಯರ್ ವಿರುದ್ಧ ಗೆಲುವು ಸಾಧಿಸಿದರು. ಐದು ವರ್ಷಗಳ ನಂತರ ಮತ್ತೆ ಅದೇ ಕ್ಷೇತ್ರದಲ್ಲಿ 7646 ಮತಗಳ ಅಂತರದಿಂದ ಜಯಭೇರಿ ಬಾರಿಸಿದರು. 2019ರಲ್ಲಿ ನಡೆದ ಚುನಾವಣೆಯಲ್ಲಿ ವೀಣಾ ಜಾರ್ಜ್ ಸೋಲು ಕಂಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications