ಹೆಚ್ಚು ಬಾರಿ ಬಜೆಟ್ ಮಂಡನೆ ದಾಖಲೆ ಯಾರ ಹೆಸರಿನಲ್ಲಿದೆ?
ಬೆಂಗಳೂರು, ಮಾರ್ಚ್ 5: ಕರ್ನಾಟಕದ ಮುಖ್ಯಮಂತ್ರಿ ಹಾಗೂ ವಿತ್ತ ಸಚಿವರೂ ಆಗಿರುವ ಬಿ. ಎಸ್ ಯಡಿಯೂರಪ್ಪ ಅವರು 7ನೇ ಬಾರಿಗೆ ರಾಜ್ಯದ ಆಯವ್ಯಯ ಪತ್ರ ಮಂಡನೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.
ಆದರೆ ಹೆಚ್ಚು ಬಾರಿ ಬಜೆಟ್ ಮಂಡನೆ ದಾಖಲೆ ಕರ್ನಾಟಕದಲ್ಲಿ ದಿವಂಗತ ಸಿಎಂ ರಾಮಕೃಷ್ಣ ಹೆಗಡೆ ಅವರ ಹೆಸರಿನಲ್ಲಿದೆ. ಈ ದಾಖಲೆ ಸಮಕ್ಕೆ ನಿಂತಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ. ಬಿ.ಎಸ್ ಯಡಿಯೂರಪ್ಪ ಅವರು ಎಚ್. ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಉಪ ಮುಖ್ಯಮಂತ್ರಿ ಹಾಗೂ ವಿತ್ತ ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳಾಗಿ ಒಟ್ಟು 7 ಬಾರಿ ಬಜೆಟ್ ಮಂಡಿಸಿದ್ದಾರೆ.
ರಾಮಕೃಷ್ಣ ಹೆಗಡೆ ಅವರು 23 ವರ್ಷಗಳ ಅವಧಿಯಲ್ಲಿ 13 ಬಜೆಟ್ಗಳನ್ನು ಮಂಡಿಸಿದ್ದರು. ಹೆಗಡೆಯವರು, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ವಿತ್ತ ಸಚಿವರಾಗಿ ಬಜೆಟ್ ಮಂಡಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಮುಖ್ಯಮಂತ್ರಿ ಹಾಗೂ ವಿತ್ತ ಸಚಿವರಾಗಿ ಬಜೆಟ್ ಮುಂದಿಟ್ಟಿದ್ದಾರೆ. ಆದರೆ, ಈ ಮೂವರನ್ನು ಗುಜರಾತಿನ ಮಾಜಿ ವಿತ್ತ ಸಚಿವರೊಬ್ಬರು ಮೀರಿಸಿದ್ದಾರೆ. ಕರ್ನಾಟಕದೊಡನೆ ಈಗಲೂ ಅವರು ನಂಟು ಹೊಂದಿದ್ದಾರೆ. ಹೆಚ್ಚಿನ ವಿವರ ಮುಂದಿದೆ...

23 ವರ್ಷ ಅವಧಿಯಲ್ಲಿ 13 ಬಾರಿ
ರಾಮಕೃಷ್ಣ ಹೆಗಡೆ ಅವರು 23 ವರ್ಷಗಳ ಅವಧಿಯಲ್ಲಿ 13 ಬಜೆಟ್ಗಳನ್ನು ಮಂಡಿಸಿದ್ದರು. ಮೊದಲು ವೀರೇಂದ್ರ ಪಾಟೀಲರು ಮುಖ್ಯ ಮಂತ್ರಿಯಾಗಿದ್ದಾಗ (1966-1971) ಹೆಗಡೆಯವರು ಹಣಕಾಸು ಸಚಿವರಾಗಿ ಆರು ಬಜೆಟ್ ಮಂಡಿಸಿದ್ದರು. ಆಮೇಲೆ ಸ್ವತಃ ತಾವೇ ಮುಖ್ಯ ಮಂತ್ರಿ ಮತ್ತು ಹಣಕಾಸು ಸಚಿವರಾಗಿ (1983 - 1988) ಏಳು ಬಜೆಟ್ ಮಾಡಿದ್ದರು.

ಹೆಗಡೆ ಸಮಕ್ಕೆ ನಿಂತ ಸಿದ್ದರಾಮಯ್ಯ
ಸಿದ್ದರಾಮಯ್ಯ ಸಾಧನೆ: ಇಪ್ಪತ್ಮೂರು ವರ್ಷಗಳಲ್ಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ಅದರಲ್ಲಿ ಎರಡು ಬಜೆಟ್ಗಳನ್ನು ಹಣಕಾಸು ಸಚಿವನಾಗಿ ಮಂಡಿಸಿದ್ದರೆ, ಐದು ಬಜೆಟ್ಗಳನ್ನು ಉಪಮುಖ್ಯಮಂತ್ರಿಯಾಗಿ ಮಂಡಿಸಿದ್ದಾರೆ. ಇನ್ನು ಮುಖ್ಯಮಂತ್ರಿಯಾಗಿ ಸತತ 6 ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ ಯಡಿಯೂರಪ್ಪ ಸತತ ಬಜೆಟ್ ಮಂಡನೆ ಸಾಧನೆಯನ್ನು ಮುರಿದಿದ್ದಾರೆ.

ಮೂವರು ಸಿಎಂ ಆಡಳಿತದಲ್ಲಿ ಬಜೆಟ್
1994ರಲ್ಲಿ ದೇವೇಗೌಡರು ಮುಖ್ಯಮಂತ್ರಿಗಳಾಗಿದ್ದಾಗ ಮೊದಲ ಬಾರಿಗೆ ಹಣಕಾಸು ಸಚಿವನಾಗಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದರು. ನಂತರ 1996ರಲ್ಲೂ ಬಜೆಟ್ ಮಂಡನೆ ಮಾಡಿದ್ದರು. ಜೆ.ಎಚ್ ಪಟೇಲ್ ಸರ್ಕಾರದಲ್ಲಿ 3 ಬಾರಿ(1997, 1998, 1999ರಲ್ಲಿ) ಹಾಗೂ ಧರಂಸಿಂಗ್ ಸರ್ಕಾರದಲ್ಲಿ 2005 ಹಾಗೂ 2006ರಲ್ಲಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ.

ದಾಖಲೆ ವಜುಭಾಯಿವಾಲ ಹೆಸರಿನಲ್ಲಿದೆ
ಆದರೆ, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ದಾಖಲೆ ಕರ್ನಾಟಕದ ಹಾಲಿ ರಾಜ್ಯಪಾಲ ವಜುಭಾಯಿ ವಾಲ ಹೆಸರಿನಲ್ಲಿದೆ. ವಜುಭಾಯಿ ವಾಲ ಅವರು ಗುಜರಾತ್ ರಾಜ್ಯದಲ್ಲಿ ವಿತ್ತ ಸಚಿವರಾಗಿ 18 ಬಾರಿ ಬಜೆಟ್ ಮಂಡನೆ ಮಾಡಿದ್ದು, ಇಂದಿಗೂ ದಾಖಲೆಯಾಗಿ ಉಳಿದಿದೆ. ಐದು ಬಾರಿ ಶಾಸಕರಾಗಿದ್ದ ವಜುಭಾಯಿ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವ ಮುನ್ನ 2012ರಲ್ಲಿ 18ನೇ ಬಾರಿಗೆ ಬಜೆಟ್ ಮಂಡಿಸಿದ್ದರು. 1996-97ರಲ್ಲಿ ಮೊದಲ ಬಜೆಟ್, 2011-12ರಲ್ಲಿ ಕೊನೆಯ ಬಜೆಟ್ ಮಂಡಿಸಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications