ಹೆಚ್ಚು ಬಾರಿ ಬಜೆಟ್ ಮಂಡನೆ ದಾಖಲೆ ಯಾರ ಹೆಸರಿನಲ್ಲಿದೆ?
ಬೆಂಗಳೂರು, ಮಾರ್ಚ್ 5: ಕರ್ನಾಟಕದ ಮುಖ್ಯಮಂತ್ರಿ ಹಾಗೂ ವಿತ್ತ ಸಚಿವರೂ ಆಗಿರುವ ಬಿ. ಎಸ್ ಯಡಿಯೂರಪ್ಪ ಅವರು 7ನೇ ಬಾರಿಗೆ ರಾಜ್ಯದ ಆಯವ್ಯಯ ಪತ್ರ ಮಂಡನೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.
ಆದರೆ ಹೆಚ್ಚು ಬಾರಿ ಬಜೆಟ್ ಮಂಡನೆ ದಾಖಲೆ ಕರ್ನಾಟಕದಲ್ಲಿ ದಿವಂಗತ ಸಿಎಂ ರಾಮಕೃಷ್ಣ ಹೆಗಡೆ ಅವರ ಹೆಸರಿನಲ್ಲಿದೆ. ಈ ದಾಖಲೆ ಸಮಕ್ಕೆ ನಿಂತಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ. ಬಿ.ಎಸ್ ಯಡಿಯೂರಪ್ಪ ಅವರು ಎಚ್. ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಉಪ ಮುಖ್ಯಮಂತ್ರಿ ಹಾಗೂ ವಿತ್ತ ಸಚಿವರಾಗಿ ಹಾಗೂ ಮುಖ್ಯಮಂತ್ರಿಗಳಾಗಿ ಒಟ್ಟು 7 ಬಾರಿ ಬಜೆಟ್ ಮಂಡಿಸಿದ್ದಾರೆ.
ರಾಮಕೃಷ್ಣ ಹೆಗಡೆ ಅವರು 23 ವರ್ಷಗಳ ಅವಧಿಯಲ್ಲಿ 13 ಬಜೆಟ್ಗಳನ್ನು ಮಂಡಿಸಿದ್ದರು. ಹೆಗಡೆಯವರು, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ವಿತ್ತ ಸಚಿವರಾಗಿ ಬಜೆಟ್ ಮಂಡಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಮುಖ್ಯಮಂತ್ರಿ ಹಾಗೂ ವಿತ್ತ ಸಚಿವರಾಗಿ ಬಜೆಟ್ ಮುಂದಿಟ್ಟಿದ್ದಾರೆ. ಆದರೆ, ಈ ಮೂವರನ್ನು ಗುಜರಾತಿನ ಮಾಜಿ ವಿತ್ತ ಸಚಿವರೊಬ್ಬರು ಮೀರಿಸಿದ್ದಾರೆ. ಕರ್ನಾಟಕದೊಡನೆ ಈಗಲೂ ಅವರು ನಂಟು ಹೊಂದಿದ್ದಾರೆ. ಹೆಚ್ಚಿನ ವಿವರ ಮುಂದಿದೆ...

23 ವರ್ಷ ಅವಧಿಯಲ್ಲಿ 13 ಬಾರಿ
ರಾಮಕೃಷ್ಣ ಹೆಗಡೆ ಅವರು 23 ವರ್ಷಗಳ ಅವಧಿಯಲ್ಲಿ 13 ಬಜೆಟ್ಗಳನ್ನು ಮಂಡಿಸಿದ್ದರು. ಮೊದಲು ವೀರೇಂದ್ರ ಪಾಟೀಲರು ಮುಖ್ಯ ಮಂತ್ರಿಯಾಗಿದ್ದಾಗ (1966-1971) ಹೆಗಡೆಯವರು ಹಣಕಾಸು ಸಚಿವರಾಗಿ ಆರು ಬಜೆಟ್ ಮಂಡಿಸಿದ್ದರು. ಆಮೇಲೆ ಸ್ವತಃ ತಾವೇ ಮುಖ್ಯ ಮಂತ್ರಿ ಮತ್ತು ಹಣಕಾಸು ಸಚಿವರಾಗಿ (1983 - 1988) ಏಳು ಬಜೆಟ್ ಮಾಡಿದ್ದರು.

ಹೆಗಡೆ ಸಮಕ್ಕೆ ನಿಂತ ಸಿದ್ದರಾಮಯ್ಯ
ಸಿದ್ದರಾಮಯ್ಯ ಸಾಧನೆ: ಇಪ್ಪತ್ಮೂರು ವರ್ಷಗಳಲ್ಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ಅದರಲ್ಲಿ ಎರಡು ಬಜೆಟ್ಗಳನ್ನು ಹಣಕಾಸು ಸಚಿವನಾಗಿ ಮಂಡಿಸಿದ್ದರೆ, ಐದು ಬಜೆಟ್ಗಳನ್ನು ಉಪಮುಖ್ಯಮಂತ್ರಿಯಾಗಿ ಮಂಡಿಸಿದ್ದಾರೆ. ಇನ್ನು ಮುಖ್ಯಮಂತ್ರಿಯಾಗಿ ಸತತ 6 ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ ಯಡಿಯೂರಪ್ಪ ಸತತ ಬಜೆಟ್ ಮಂಡನೆ ಸಾಧನೆಯನ್ನು ಮುರಿದಿದ್ದಾರೆ.

ಮೂವರು ಸಿಎಂ ಆಡಳಿತದಲ್ಲಿ ಬಜೆಟ್
1994ರಲ್ಲಿ ದೇವೇಗೌಡರು ಮುಖ್ಯಮಂತ್ರಿಗಳಾಗಿದ್ದಾಗ ಮೊದಲ ಬಾರಿಗೆ ಹಣಕಾಸು ಸಚಿವನಾಗಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದರು. ನಂತರ 1996ರಲ್ಲೂ ಬಜೆಟ್ ಮಂಡನೆ ಮಾಡಿದ್ದರು. ಜೆ.ಎಚ್ ಪಟೇಲ್ ಸರ್ಕಾರದಲ್ಲಿ 3 ಬಾರಿ(1997, 1998, 1999ರಲ್ಲಿ) ಹಾಗೂ ಧರಂಸಿಂಗ್ ಸರ್ಕಾರದಲ್ಲಿ 2005 ಹಾಗೂ 2006ರಲ್ಲಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ.

ದಾಖಲೆ ವಜುಭಾಯಿವಾಲ ಹೆಸರಿನಲ್ಲಿದೆ
ಆದರೆ, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ದಾಖಲೆ ಕರ್ನಾಟಕದ ಹಾಲಿ ರಾಜ್ಯಪಾಲ ವಜುಭಾಯಿ ವಾಲ ಹೆಸರಿನಲ್ಲಿದೆ. ವಜುಭಾಯಿ ವಾಲ ಅವರು ಗುಜರಾತ್ ರಾಜ್ಯದಲ್ಲಿ ವಿತ್ತ ಸಚಿವರಾಗಿ 18 ಬಾರಿ ಬಜೆಟ್ ಮಂಡನೆ ಮಾಡಿದ್ದು, ಇಂದಿಗೂ ದಾಖಲೆಯಾಗಿ ಉಳಿದಿದೆ. ಐದು ಬಾರಿ ಶಾಸಕರಾಗಿದ್ದ ವಜುಭಾಯಿ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವ ಮುನ್ನ 2012ರಲ್ಲಿ 18ನೇ ಬಾರಿಗೆ ಬಜೆಟ್ ಮಂಡಿಸಿದ್ದರು. 1996-97ರಲ್ಲಿ ಮೊದಲ ಬಜೆಟ್, 2011-12ರಲ್ಲಿ ಕೊನೆಯ ಬಜೆಟ್ ಮಂಡಿಸಿದ್ದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications